
ನವದೆಹಲಿ(ಏ.25): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಪ್ರಕರಣಗಳು ಏರುತ್ತಿರುವ ಹಿನ್ನೆಲೆ ಈಗಾಗಲೇ ವಿಧಿಸಲಾಗಿದ್ದ ಲಾಕ್ಡೌನ್ ಇನ್ನೊಂದು ವಾರ ಮುಂದುವರೆಸಲಾಗಿದೆ. ಈ ಬಗ್ಗೆ ಸಿಎಂ ಅರವಿಂದ ಕೇಜ್ರೀವಾಲ್ ಅಧಿಕೃತ ಆದೇಸ ಹೊರಡಿಸಿದ್ದಾರೆ.
ಕೊರೋನಾ 2ನೇ ಅಲೆ, ಒಂದೇ ವಾರದಲ್ಲಿ ಮೋದಿ ಮಾಡಿದ್ದಿಷ್ಟು!
ಇವತ್ತು ಸುದ್ದಿಗೋಷ್ಠಿಯಲ್ಲಿ ಲಾಕ್ ಡೌನ್ ವಿಸ್ತರಣೆಯ ಮಾಹಿತಿ ನೀಡಿದ ಕೇಜ್ರಿವಾಲ್ ಸೋಂಕು ನಿಯಂತ್ರಣಕ್ಕೆ ಲಾಕ್ ಡೌನ್ ಅಗತ್ಯ. ಹೀಗಾಗಿ ಮೇ 3 ಬೆಳಗಿನ ಜಾವದವರೆಗೆ ಈ ಲಾಕ್ಡೌನ್ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದ್ದಾರೆ.
"
ಇದೇ ವೇಳೆ ಇನ್ನು ಆಕ್ಸಿಜನ್ ಕೊರತೆ ಬಗ್ಗೆ ಮಾತಾಡಿದ ಕೇಜ್ರಿವಾಲ್ ದೆಹಲಿಗೆ 700 ಮೆಟ್ರಿಕ್ ಟನ್ ಅಗತ್ಯ ಇದೆ. ಈಗ 330 ಮೆಟ್ರಿಕ್ ಟನ್ ದೆಹಲಿ ತಲುಪಿದೆ. ಉಳಿದಂತೆ ಆಕ್ಸಿಜನ್ ತಯಾರಿಕರು, ಪೂರೈಕೆದಾರರ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಆಕ್ಸಿಜನ್ ಪೂರೈಕೆ ಕುರಿತು ಪ್ರತಿ ಎರಡು ಗಂಟೆಗೊಮ್ಮೆ ಪರಾಮರ್ಶೆ ನಡೆಸಲಾಗುತ್ತಿದೆ ಎಂದೂ ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ