ಲಾಕ್‌ಡೌನ್ ವೇಳೆ ಪೊಲೀಸ್‌ಗೆ ಮಚ್ಚಿನಿಂದ ಹಲ್ಲೆ, ಸತತ 7 ಗಂಟೆ ಸರ್ಜರಿಯಲ್ಲಿ ತುಂಡಾದ ಕೈ ಮರುಜೋಡಣೆ !

Published : Apr 13, 2020, 05:24 PM IST
ಲಾಕ್‌ಡೌನ್ ವೇಳೆ ಪೊಲೀಸ್‌ಗೆ ಮಚ್ಚಿನಿಂದ ಹಲ್ಲೆ, ಸತತ 7 ಗಂಟೆ ಸರ್ಜರಿಯಲ್ಲಿ ತುಂಡಾದ ಕೈ ಮರುಜೋಡಣೆ !

ಸಾರಾಂಶ

ಕೊರೋನಾ ವೈರಸ್ ಕಾರಣ ಭಾರತವನ್ನೇ ಲಾಕ್‌ಡೌನ್ ಮಾಡಲಾಗಿದೆ. ಜನರು ಇದನ್ನು ಅರ್ಥಮಾಡಿಕೊಂಡು ಮನೆಯಲ್ಲಿದ್ದರ ಕೊರೋನಾ ಹತೋಟಿಗೆ ಬರಲಿದೆ. ಆದರೆ ಇದೇ ಸಂದರ್ಭವನ್ನು ಉಪಯೋಗಿಸಿಕೊಂಡ ಕೆಲ ಕಿಡಿಗೇಡಿಗಳು, ಸಂಚಾರಕ್ಕೆ ಅಡ್ಡಿ ಮಾಡುತ್ತಿದ್ದಾರೆ ಅನ್ನೋ ಕಾರಣಕ್ಕೆ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಮಚ್ಚಿನ ಏಟಿಗೆ ಪೊಲೀಸ್ ಕೈ ತುಂಡಾಗಿತ್ತು. ಇದೀಗ ಶಸ್ತ್ರಚಿಕಿತ್ಸೆ ಮೂಲಕ ಕೈ ಜೋಡಣೆ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಈ ಭಯಾನಕ ಘಟನೆ ವಿವರ ಇಲ್ಲಿದೆ.  

ಪಟಿಯಾಲ(ಏ.13): ಲಾಕ್‌ಡೌನ್ ವೇಳೆ ಕರ್ತವ್ಯದಲ್ಲಿ ಪೊಲೀಸ್ ಮೇಲೆ ದುಷ್ಕರ್ಮಿಗಳ ತಂಡ ದಾಳಿ ಮಾಡಿ ASI ಹರ್ಜೀತ್ ಸಿಂಗ್ ಕೈ ಕತ್ತರಿಸಿತ್ತು. ಇದೀಗ ಸತತ 7 .5 ಗಂಟೆಗಳ ಸರ್ಜರಿ ಬಳಿಕ ಪೊಲೀಸ್ ಹರ್ಜೀತ್ ಸಿಂಗ್ ಕೈಯನ್ನು ಮರುಜೋಡಿಸಲಾಗಿದೆ. ಈ ಕುರಿತು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಮ್ಮ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. 

ಸೆಪ್ಟೆಂಬ​ರ್‌ಗೆ ಕೊರೋನಾ ತುತ್ತ​ತು​ದಿ​: ಪಂಜಾಬ್‌ ಸಿಎಂ ಸ್ಫೋಟಕ ಮಾಹಿ​ತಿ

ಚಂಡಿಘಡದ ಮೆಡಿಕಲ್ ಎಜುಕೇಶನ್ ಹಾಗೂ ರಿಸರ್ಚ್(PGIMER)ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಪಂಜಾಬ್ ಮುಖ್ಯಮಂತ್ರಿ ಸೂಚನೆ ಮೇರೆಗೆ PGIMER ಆಸ್ಪತ್ರೆಯಲ್ಲಿ ಡಾ.ಜಗತ್ ರಾಮ್ ನೇತೃತ್ವದಲ್ಲಿ ವೈದ್ಯರ ತಂಡ ರಚಿಸಲಾಗಿತ್ತು. ಇದರಲ್ಲಿ ಪ್ಲಾಸ್ಟಿಕ್ ಸರ್ಜನ್ ಸೇರಿದಂತೆ ನುರಿತ ವೈದ್ಯರ ತಂಡ ಸತತ 7.5 ಗಂಟೆಗಳ ಕಾಲ ಸರ್ಜರಿ ಮಾಡಿ ತುಂಡಾದ ಕೈಯನ್ನು ಮರುಜೋಡಿಸಿದ್ದಾರೆ.

ಸರ್ಜರಿ ಬಳಿಕ ಅಮರಿಂದರ್ ಸಿಂಗ್ ತಮ್ಮ ಟ್ವಿಟರ್ ಖಾತೆಯಲ್ಲಿ ಈ  ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಇಷ್ಟೇ ಅಲ್ಲ ಹರ್ಜೀತ್ ಸಿಂಗ್ ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

 

ಘಟನೆ ವಿವರ:
ದೇಶದ ಎಲ್ಲಾ ರಸ್ತೆಗಳು ಸದ್ಯ ಶಾಂತವಾಗಿದೆ. ಪೊಲೀಸರು ಬ್ಯಾರಿಕೇಡ್ ಹಾಕಿ ಸಂಚರಿಸುವ ಪ್ರತಿಯೊಬ್ಬರನ್ನೂ ವಿಚಾರಿಸುತ್ತಿದ್ದಾರೆ. ಅನವಶ್ಯಕ ಸಂಚಾರ ಕಂಡು ಬಂದರೆ ದಂಡ, ವಾಹನ ವಶಕ್ಕೆ ಪಡೆಯಲಾಗುತ್ತಿದೆ. ಹೀಗೆ ಪಂಜಾಬ್‌ನ ಪಟಿಯಾಲದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಗೆ ಈ ರೀತಿ ಆಘಾತ ಎದುರಾಗತ್ತೆ ಎಂದು ಯಾರೂ ಊಹಿಸಿರಲಿಲ್ಲ. 

ಲಾಕ್‌ಡೌನ್‌ ಉಲ್ಲಂಘನೆ ಪ್ರಶ್ನಿಸಿದ ಪೊಲೀಸ್‌ ಕೈಕಟ್‌!

ಪಟಿಯಾಲದ ಮಾರುಕಟ್ಟೆ ಸಮೀಪ ಬೆಳಗ್ಗೆ 6.15ಕ್ಕೆ ASI ಹರ್ಜೀತ್ ಸಿಂಗ್ ನೇತೃತ್ವದ ತಂಡ ಲಾಕ್‌ಡೌನ್ ಕರ್ತವ್ಯದಲ್ಲಿ ನಿರತವಾಗಿತ್ತು. ಈ ವೇಳೆ 7ಜನರ ಗುಂಪು ಕಾರಿನಲ್ಲಿ ವೇಗವಾಗಿ ಸಾಗಿ ಬಂತು. ಪೊಲೀಸರು ನಿಲ್ಲಿಸಿ ವಾಹನ ಪಾಸ್ ಹಾಗೂ ಇತರ ಮಾಹಿತಿ ಕೇಳಿದ್ದಾರೆ. ಇಷ್ಟೇ ನೋಡಿ, ಕಾರಿನಿಂದ ಇಳಿದ ಐವರು ತಮ್ಮಲ್ಲಿದ್ದ ಮಾರಾಕಸ್ತ್ರಗಳಿಂದ ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ. 

ಒರ್ವ ಬೀಸಿದ ಮಚ್ಚಿನ ಏಟಿಗೆ ASI ಹರ್ಜೀತ್ ಸಿಂಗ್ ಕೈ ತುಂಡಾಗಿ ನೆಲಕ್ಕೆ ಬಿದ್ದಿದೆ. ತಕ್ಷಣವೇ ಪೊಲೀಸರು ಗುಂಡು ಹಾರಿಸಿದ್ದಾರೆ. ಈ ವೇಳೆ ದುಷ್ಕರ್ಮಿಗಳ ತಂಡ ಪರಾರಿಯಾಗಿದೆ. ಇತ್ತ ಹರ್ಜೀತ್ ಸಿಂಗ್ ರಕ್ತ ಸ್ರಾವವಾಗಿ ನೆಲಕ್ಕುರುಳಿದರೆ, ಇನ್ನಿಬ್ಬರು ಪೊಲೀಸರಿ ಗಾಯಗೊಂಡ ಬಿದ್ದಿದ್ದಾರೆ. ಈ ವೇಳೆ ಈ ದಾರಿಯಲ್ಲಿ ಬಂದ ವ್ಯಕ್ತಿ ಸ್ಕೂಟರ್ ಮೂಲಕ ಹರ್ಜೀತ್ ಸಿಂಗ್‌ರನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. 

ಇತ್ತ ಪೊಲೀಸರು ಹಾರಿಸಿದ ಗುಂಡಿನಲ್ಲಿ ಓರ್ವಗಾಯಗೊಂಡಿದ್ದು ಆತನನ್ನು ಬಂಧಿಸಿ ಆಸ್ಪತ್ರೆಗೆ ಸೇರಿಸಲಾಗಿದೆ. ಉಳಿದ ದುಷ್ಕರ್ಮಿಗಳಿಗಾಗಿ ಹುಡುಕಾಟ ಆರಂಭವಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಿರುಪತಿ ತಿಮ್ಮಪ್ಪನಿಗೆ ಅಂಗವಸ್ತ್ರದ ಮೋಸ, ಪ್ಲಾಸ್ಟಿಕ್‌ ಸಿಲ್ಕ್‌ ಕೊಟ್ಟು 55 ಕೋಟಿ ಯಾಮಾರಿಸಿದ ಕಂಪನಿ!
ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?