
ನವದೆಹಲಿ(ಮಾ.21): ಪ್ರಧಾನಿ ಮೋದಿ ಕರೆಕೊಟ್ಟಿರುವ ಭಾನುವಾರದ ಜನತಾ ಕರ್ಫ್ಯೂಗೆ ಭಾರತೀಯ ರೈಲ್ವೆ ಕೂಡಾ ಸ್ಪಂದಿಸಿದೆ.
ಭಾನುವಾರ ದೇಶಾದ್ಯಂತ ಯಾವುದೇ ಪ್ಯಾಸೆಂಜರ್, ಮೇಲ್, ಎಕ್ಸ್ಪ್ರೆಸ್ ರೈಲುಗಳ ಸಂಚಾರ ನಡೆಸದೇ ಇರಲು ಇಲಾಖೆ ನಿರ್ಧರಿಸಿದೆ. ಶನಿವಾರ ಮಧ್ಯರಾತ್ರಿ 12 ಗಂಟೆಯಿಂದ ಭಾನುವಾರ ರಾತ್ರಿ 10 ಗಂಟೆಯವರೆಗೆ ದೇಶದ ಯಾವುದೇ ನಿಲ್ದಾಣಗಳಿಂದ ಪ್ಯಾಸೆಂಜರ್ ರೈಲು ಹೊರಡುವುದಿಲ್ಲ.
ಭಾನುವಾರ ಬೆಳಗ್ಗೆ 4 ಗಂಟೆಯಿಂದ ರಾತ್ರಿ 10ರವರೆಗೆ ಮೇಲ್, ಎಕ್ಸ್ಪ್ರೆಸ್ ರೈಲು ಸಂಚಾರ ಇರದು. ಇದೇ ವೇಳೆ ಮಾ.22ರಿಂದ ಮೇಲ್ ಮತ್ತು ಎಕ್ಸ್ಪ್ರೆಸ್ ರೈಲುಗಳಲ್ಲಿ ಎಲ್ಲಾ ರೀತಿಯ ಆಹಾರ ಪೂರೈಕೆ ಬಂದ್ಗೆ ನಿರ್ಧರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ