
ನವದೆಹಲಿ[ಮಾ.17]: ಕೊರೋನಾ ಮತ್ತಷ್ಟುಮಂದಿಗೆ ಹಬ್ಬದಂತೆ ತಡೆಯಲು ದೇಶಾದ್ಯಂತ ಶಾಲಾ-ಕಾಲೇಜುಗಳು, ವಿಶ್ವ ವಿದ್ಯಾಲಯಗಳು, ಜಿಮ್, ವಸ್ತು ಸಂಗ್ರಹಾಲಯಗಳು, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕೇಂದ್ರಗಳು, ಸ್ವಿಮ್ಮಿಂಗ್ ಪೂಲ್ಗಳು ಹಾಗೂ ಥಿಯೇಟರ್ಗಳನ್ನು ಮಾ.31ರವರೆಗೆ ಬಂದ್ ಮಾಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.
ಅಲ್ಲದೆ ಅನಗತ್ಯ ಸುತ್ತಾಟದಿಂದ ದೂರವಿರುವಂತೆ ಜನಸಾಮಾನ್ಯರಿಗೆ ಸಲಹೆ ನೀಡಿದೆ.
ಖಾಸಗಿ ಕಂಪನಿಗಳು ನೌಕರರಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಡಬೇಕು. ರೆಸ್ಟೋರೆಂಟ್ಗಳಲ್ಲಿ ಕೈತೊಳೆಯುವ ಶಿಷ್ಟಾಚಾರ ಪಾಲನೆಯಾಗಲೇಬೇಕು. ರೆಸ್ಟೋರೆಂಟ್ ಸಿಬ್ಬಂದಿ ಗ್ರಾಹಕರ ಟೇಬಲ್ನಿಂದ 1 ಮೀಟರ್ ದೂರವಿರಬೇಕು. ಜೊತೆಗೆ, ಸ್ಥಳೀಯ ರಾಜಕೀಯ ಮುಖಂಡರು, ಧಾರ್ಮಿಕ ನಾಯಕರು ಹಾಗೂ ಇತರ ನಾಯಕರು ಬಹುವಾಗಿ ಸೇರಲ್ಪಡುವ ಜನಸಂದಣಿ ಕಾರ್ಯಕ್ರಮವನ್ನು ಏರ್ಪಡಿಸಬಾರದು ಅಥವಾ ಮುಂದೂಡಬೇಕು ಎಂದು ಅವರಿಗೆ ಸ್ಥಳೀಯ ಆಡಳಿತ ಸೂಚಿಸಬೇಕು ಎಂದು ಸೂಚಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ