
ನವದೆಹಲಿ(ಮೇ.16): ಕಳೆದ ಒಂದು ವಾರದ ಅವಧಿಯಲ್ಲಿ ಉತ್ತರಪ್ರದೇಶ ಮತ್ತು ಬಿಹಾರ ವ್ಯಾಪ್ತಿಯ ಗಂಗಾ ನದಿಯಲ್ಲಿ 2000ಕ್ಕೂ ಹೆಚ್ಚು ಶವಗಳು ಪತ್ತೆಯಾಗಿವೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ. ಜೊತೆಗೆ ಈ ಪೈಕಿ ಬಹುತೇಕ ಶವಗಳು ಕೊರೋನಾ ಸೋಂಕಿತರದ್ದೇ ಆಗಿವೆ ಎಂದು ಖಚಿತಪಡಿಸಿವೆ.
ಗಂಗೆಯಲ್ಲಿ ಹರಿದು ಬಂತು ಶವಗಳ ರಾಶಿ, ನಮ್ಮದಲ್ಲ ಉ. ಪ್ರದೇಶದ್ದೆಂದ ಬಿಹಾರ!
ಈ ಎರಡೂ ರಾಜ್ಯಗಳಲ್ಲಿ ಒಟ್ಟಾರೆ 1400 ಕಿ.ಮೀ. ಉದ್ದದಷ್ಟುಗಂಗಾ ನದಿ ಹರಿಯುತ್ತದೆ. ಈ ಪೈಕಿ ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಸೋಂಕಿಗೆ ಬಲಿಯಾದವರ ಕುಟುಂಬದ ಸದಸ್ಯರ ಬಳಿ ಅಂತ್ಯ ಸಂಸ್ಕಾರಕ್ಕೂ ಹಣವಿಲ್ಲದ ಸಾಧ್ಯತೆಗಳಿವೆ. ಹೀಗಾಗಿ ಅವರೆಲ್ಲಾ ಶವಗಳನ್ನು ನದಿಗೆ ಎಸೆಯುತ್ತಿದ್ದಾರೆ ಎಂದು ಎರಡೂ ರಾಜ್ಯಗಳಿಂದ ಪಡೆದ ಮಾಹಿತಿಯನ್ನು ಆಧರಿಸಿ ಗೃಹ ಸಚಿವಾಲಯ ಮೂಲಗಳು ತಿಳಿಸಿವೆ.
"
ಈ ಹಿನ್ನೆಲೆಯಲ್ಲಿ ಜನರು ಶವಗಳನ್ನು ನದಿಗೆ ಎಸೆಯದಂತೆ ಮತ್ತು ಈ ಮೂಲಕ ಸೋಂಕು ಪ್ರಸರಣಕ್ಕೆ ಕಾರಣವಾಗದಂತೆ ಉಭಯ ರಾಜ್ಯಗಳಿಗೂ ಸೂಚಿಸಲಾಗಿದೆ. ಅಲ್ಲದೆ ನದಿಯಿಂದ ಹೊರತೆಗೆದ ಎಲ್ಲಾ ಶವಗಳನ್ನು ಕ್ರಮಾನುಸಾರ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ