ಖ್ಯಾತ ಗಾಯಕ SP ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ

Published : Aug 16, 2020, 10:56 PM IST
ಖ್ಯಾತ ಗಾಯಕ SP ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ

ಸಾರಾಂಶ

ಕೊರೋನಾ ಸೋಂಕಿಗೆ ಒಳಗಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್​. ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡುಬಂದಿದೆ.

 ಚೆನ್ನೈ, (ಆ.16): ಕೊರೋನಾ ಸೋಂಕಿನಿಂದ ಐಸಿಯುಗೆ ಹೋಗಿದ್ದ ಖ್ಯಾತ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಮತ್ತು ಸುಧಾರಣೆ ಕಂಡಿದೆ.

ಶನಿವಾರಗಿಂತಲೂ ಭಾನುವಾರಕ್ಕೆ ಸ್ವಲ್ಪ ಚೇತರಿಸಿಕೊಂಡಿದ್ದು, ಅವರಲ್ಲಿ ಚಲನೆ ಕಂಡುಬರುತ್ತಿದೆ. ಹಾಗೇ ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಗುರುತಿಸುತ್ತಿದ್ದಾರೆ ಎಂದು ಅವರ ಪುತ್ರ ಎಸ್​.ಪಿ. ಚರಣ್​ ತಿಳಿಸಿದ್ದಾರೆ.

SPB ಆರೋಗ್ಯದಲ್ಲಿ  ಚೇತರಿಕೆ, ಆಸ್ಪತ್ರೆಯಿಂದಲೇ ಗಾಯಕ ಸಂದೇಶ

ಫೇಸ್‌ಬುಕ್ ವಿಡಿಯೋ ಮೂಲಕ ತಮ್ಮ ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ  ಚರಣ್​,  ಎಸ್​ಪಿಬಿ ಶೀಘ್ರವೇ ಗುಣಮುಖರಾಗುತ್ತಾರೆ ಎಂಬ ಭರವಸೆಯನ್ನು ವೈದ್ಯರು ನೀಡಿದ್ದಾರೆ. ಹಾಗೇ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಮತ್ತೊಮ್ಮೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗುವುದಿಲ್ಲ ಎಂದಿದ್ದಾರೆ ಎಂದು ತಿಳಿಸಿದ್ದಾರೆ.

ನನ್ನ ಅಪ್ಪನನ್ನು ಐಸಿಯುದಿಂದ ಎಕ್ಸ್ಲ್ಯೂಸಿವ್​ ಐಸಿಯುಗೆ ಸ್ಥಳಾಂತರಿಸಲಾಗಿದೆ. ಅವರಲ್ಲಿ ಚಲನೆ ಕಂಡುಬರುತ್ತಿದೆ ಎಂಬುದೇ ಸಮಾಧಾನ. ಇನ್ನೂ ವೆಂಟಿಲೇಟರ್​​ ಸಹಾಯದಲ್ಲೇ ಇದ್ದಾರೆ. ಕಳೆದ ಕೆಲವು ದಿನಗಳಿಂದ ಉಸಿರಾಟಕ್ಕೆ ತೀವ್ರ ಕಷ್ಟಪಡುತ್ತಿದ್ದರು. ಆದರೆ ಈಗ ಸ್ವಲ್ಪ ಆರಾಮಾಗಿ ಉಸಿರಾಡುತ್ತಿದ್ದಾರೆ ಎಂದೂ ಚರಣ್​ ಮಾಹಿತಿ ನೀಡಿದ್ದಾರೆ.

ವೈದ್ಯಕೀಯ ಸಿಬ್ಬಂದಿ ಅವರ ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಈಗ ನನ್ನ ತಂದೆ ಸಂಪೂರ್ಣ ನಿದ್ರಾವಸ್ಥೆಯಲ್ಲಿಲ್ಲ. ಆರೋಗ್ಯ ಸುಧಾರಿಸುತ್ತಿದೆ. ಹಾಗೇ ಹಲವರು ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ. ಎಲ್ಲರಿಗೂ ಕೃತಜ್ಞತೆಗಳು ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ
ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!