ಭಾರತದಲ್ಲಿ 13,000 ಗಡಿದಾಟಿದ ಕೊರೋನಾ ಸೋಂಕಿತರ ಸಂಖ್ಯೆ..!

Kannadaprabha News   | Asianet News
Published : Apr 17, 2020, 07:24 AM IST
ಭಾರತದಲ್ಲಿ 13,000 ಗಡಿದಾಟಿದ ಕೊರೋನಾ ಸೋಂಕಿತರ ಸಂಖ್ಯೆ..!

ಸಾರಾಂಶ

ದೇಶದಲ್ಲಿ ಕೊರೋನಾ ವೈರಸ್ ಪೀಡಿತರ ಸಂಖ್ಯೆ ಗುರುವಾರದಂತ್ಯಕ್ಕೆ 13 ಸಾವಿರದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 824 ಹೊಸ ಪ್ರಕರಣಗಳು ಪತ್ತೆಯಾಗಿರುವುದು ಆತಂತಕ್ಕೀಡು ಮಾಡಿಕೊಟ್ಟಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ  

ನವದೆಹಲಿ(ಏ.17): ಗುರುವಾರವೂ ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ 981 ಜನರಿಗೆ ಕೊರೋನಾ ಸೋಂಕು ತಗುಲಿದ್ದು ದೃಢಪಟ್ಟಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13201ಕ್ಕೆ ತಲುಪಿದೆ. ಇನ್ನು ಗುರುವಾರ 27 ಜನ ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 444ಕ್ಕೆ ಏರಿದೆ. 

ಮೋದಿ ಪ್ಲಾನ್ ವರ್ಕೌಟ್ ಆಗಲ್ಲ, ಕೊರೋನಾ ನಿಯಂತ್ರಿಸಲು ರಾಹುಲ್ ಗಾಂಧಿ ಹೊಸ ಸೂತ್ರ!

ಈ ನಡುವೆ ಇದುವರೆಗೆ ದೇಶದಲ್ಲಿ 1594 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ತಿಳಿಸಿದೆ. ಆದರೆ ಕೇಂದ್ರ ಆರೋಗ್ಯ ಸಚಿವಾಲಯದ ದಾಖಲೆಗಳ ಅನ್ವಯ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 826 ಪ್ರಕರಣ ಬೆಳಕಿಗೆ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 12759ಕ್ಕೆ ತಲುಪಿದೆ. ಇನ್ನು ಸಾವಿನ ಸಂಖ್ಯೆ 420ಕ್ಕೆ ಏರಿದೆ.

ಮತ್ತೆ ಮಹಾ ಕೊರೋನಾ ಸ್ಫೋಟ 

ಮುಂಬೈ: ದೇಶದಲ್ಲೇ ಅತಿ ಹೆಚ್ಚು ಕೊರೋನಾ ವೈರಸ್‌ ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದಲ್ಲಿ ಗುರುವಾರ ಹೊಸದಾಗಿ 286 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3202ಕ್ಕೆ ತಲುಪಿದೆ. ಈ ಪೈಕಿ ರಾಜಧಾನಿ ಮುಂಬೈ ಒಂದರಲ್ಲೇ ಗುರುವಾರ 107 ಹೊಸ ಪ್ರಕರಣಗಳು ದಾಖಲಾಗಿdಛಿ. ರಾಜ್ಯದಲ್ಲಿ ಈವರೆಗೆ ಒಟ್ಟಾರೆ 197 ಜನ ಸಾವನ್ನಪ್ಪಿದ್ದಾರೆ.

ಧಾರಾವಿ ಸ್ಲಂನಲ್ಲಿ  86ಕ್ಕೇರಿದ ಸೋಂಕಿತರ ಸಂಖ್ಯೆ:

ಮುಂಬೈ: ಏಷ್ಯಾದ ಅತೀ ದೊಡ್ಡ ಕೊಳಗೇರಿ ಮುಂಬೈನ ಧಾರಾವಿಯಲ್ಲಿ ಗುರುವಾರ ಮತ್ತೆ 26 ಮಂದಿಗೆ ಕೊರೋನಾ ವೈರಸ್‌ ಸೋಂಕು ಖಚಿತ ಪಟ್ಟಿದೆ. ಆ ಮೂಲಕ ಅಲ್ಲಿ ಒಟ್ಟು ಪೀಡಿತರ ಸಂಖ್ಯೆ 71ಕ್ಕೇರಿದೆ. ಲಕ್ಷ್ಮೇ ಚೌಲ್‌ ಪ್ರದೇಶದ 58 ವರ್ಷದ ವ್ಯಕ್ತಿ ಗುರುವಾರ ಸೊಂಕಿಗೆ ಒಬ್ಬ ಬಲಿಯಾಗಿದ್ದು, ಆ ಮೂಲಕ ಸತ್ತವರ ಸಂಖ್ಯೆ 9ಕ್ಕೇರಿದೆ. ಪ್ರತೀ ಚದರ ಕಿ.ಮಿಗೆ 7.80 ಲಕ್ಷ ಜನಸಾಂಸದ್ರತೆ ಇರುವ ಇಲ್ಲಿನ ಪೀಡಿತರ ಸಂಖ್ಯೆ ಆತಂಕ ಹೆಚ್ಚಿಸಿದೆ. ಒಟ್ಟು 2.1 ಚದರ ಕಿ.ಮಿ ವಿಸ್ತೀರ್ಣ ಇರುವ ಈ ಸ್ಲಂನಲ್ಲಿ 15 ಲಕ್ಷ ಮಂದಿ ವಾಸಿಸುತ್ತಿದ್ದಾರೆ.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈಲು ಟಿಕೆಟ್ ಬುಕಿಂಗ್‌ನಿಂದ ಪ್ರಯಾಣ , ಹಿರಿಯ ನಾಗರೀಕರಿಗಿದೆ ಭರ್ಜರಿ ವಿನಾಯಿತಿ
ಕೇರಳದ ಮೊದಲ ಜೆನ್‌ಝಿ ಪೋಸ್ಟ್ ಆಫೀಸ್ ಆರಂಭ, ಟ್ರೆಂಡಿ ಕಚೇರಿಗೆ ಮನಸೋತ ಯುವ ಸಮೂಹ