
ನವದೆಹಲಿ(ಆ.20): ಕೇಂದ್ರ ಸರ್ಕಾರ ಅನುಮತಿ ನೀಡಿದ್ದೇ ಆದಲ್ಲಿ ಕೊರೋನಾ ಚಿಕಿತ್ಸೆಗೆ ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ 2 ಲಸಿಕೆಗಳ ತುರ್ತು ಬಳಕೆಗೆ ಅನುಮತಿ ನೀಡಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ.
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 28 ಲಕ್ಷ ದಾಟಿ, ನಿತ್ಯವೂ 70,000 ಆಸುಪಾಸಿನ ಹೊಸ ಕೇಸು ದಾಖಲಾಗುತ್ತಿರುವ ಬೆನ್ನಲ್ಲೇ ಹೊರಬಿದ್ದ ಈ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಪ್ರಣಬ್, ಎಸ್ಪಿಬಿ ಆರೋಗ್ಯ ಸ್ಥಿತಿ ಗಂಭೀರ..!
ಐಸಿಎಂಆರ್ನ ಪ್ರಧಾನ ನಿರ್ದೇಶಕ ಬಲರಾಂ ಭಾರ್ಗವ ಅವರು ಬುಧವಾರ ಕೇಂದ್ರ ಗೃಹ ವ್ಯವಹಾರಗಳ ಕುರಿತಾದ ಸಂಸದೀಯ ಸ್ಥಾಯಿ ಸಮಿತಿ ಮುಂದೆ ಹಾಜರಾಗಿದ್ದರು. ಈ ವೇಳೆ ಸಮಿತಿಯ ಸದಸ್ಯರೊಬ್ಬರು, ಇನ್ನೂ ಎಷ್ಟು ದಿನ ಜನತೆ ಸಾಂಕ್ರಾಮಿಕ ಪಿಡುಗಿನೊಂದಿಗೆ ಬದುಕಬೇಕು ಎಂಬ ಪ್ರಶ್ನೆ ಹಾಕಿದ್ದರು. ಅದಕ್ಕೆ ಉತ್ತರಿಸಿದ ಭಾರ್ಗವ ‘ಭಾರತದಲ್ಲಿ 3 ಕಂಪನಿಗಳು ಅಭಿವೃದ್ಧಿಪಡಿಸಿರುವ ಲಸಿಕೆಗಳೂ ಪ್ರಯೋಗದ ವಿವಿಧ ಹಂತದಲ್ಲಿವೆ. ಈ ಪೈಕಿ ಭಾರತ್ ಬಯೋಟೆಕ್ ಮತ್ತು ಕ್ಯಾಡಿಲಾ ಕಂಪನಿ ಅಭಿವೃದ್ಧಿಪಡಿಸಿರುವ ಲಸಿಕೆಗಳ 2ನೇ ಹಂತದ ಪ್ರಯೋಗ ಬಹುತೇಕ ಮುಕ್ತಾಯಕ್ಕೆ ತಲುಪಿವೆ. ಮೂರನೇ ಹಂತ ಪೂರ್ಣಗೊಳ್ಳಲು ಸಾಮಾನ್ಯವಾಗಿ 6-9 ತಿಂಗಳು ಬೇಕಾಗುತ್ತದೆ. ಆದರೆ ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಈ ಲಸಿಕೆಗಳ ತುರ್ತು ಬಳಕೆಗೆ ಅನುಮತಿ ನೀಡಬಹುದು’ ಎಂದು ಮಾಹಿತಿ ನೀಡಿದ್ದಾರೆ ಎಂದು ಸಭೆಯಲ್ಲಿ ಭಾಗಿಯಾಗಿದ್ದ ಸಂಸದರೊಬ್ಬರು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ