‘ಕೊರೋನಾ ಔಷಧ’ ಕಂಡುಹಿಡಿದ ಬಾಬಾ ರಾಮ್‌ದೇವ್ ಸೇರಿ ಐವರ ಮೇಲೆ ಕ್ರಿಮಿನಲ್‌ ಕೇಸ್‌!

Published : Jun 27, 2020, 02:35 PM ISTUpdated : Jun 27, 2020, 02:59 PM IST
‘ಕೊರೋನಾ ಔಷಧ’  ಕಂಡುಹಿಡಿದ ಬಾಬಾ ರಾಮ್‌ದೇವ್ ಸೇರಿ ಐವರ ಮೇಲೆ ಕ್ರಿಮಿನಲ್‌ ಕೇಸ್‌!

ಸಾರಾಂಶ

‘ಕೊರೋನಾ ಔಷಧ’ ಕಂಡುಹಿಡಿದ ಪತಂಜಲಿ ಮೇಲೆ ಕ್ರಿಮಿನಲ್‌ ಕೇಸ್‌| ಬಾಬಾ ರಾಮದೇವ್‌ ಮತ್ತು ಪತಂಜಲಿ ಆಯುರ್ವೇದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆಚಾರ‍್ಯ ಬಾಲಕೃಷ್ಣ ವಿರುದ್ಧ ಕೇಸ್

ಮುಜಾಫ್ಫರ್‌ಪುರ(ಜೂ.27): ಕೊರೋನಾಗೆ ಔಷಧ ಕಂಡುಹಿಡಿದಿರುವುದಾಗಿ ಲಕ್ಷಾಂತರ ಜನರನ್ನು ದಾರಿ ತಪ್ಪಿಸಿದ ಆರೋಪದ ಮೇಲೆ ಯೋಗ ಗುರು ಬಾಬಾ ರಾಮದೇವ್‌ ಮತ್ತು ಪತಂಜಲಿ ಆಯುರ್ವೇದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆಚಾರ‍್ಯ ಬಾಲಕೃಷ್ಣ ವಿರುದ್ಧ ಬಿಹಾರ ಕೋರ್ಟ್‌ನಲ್ಲಿ ಕ್ರಿಮಿನಲ್‌ ಪ್ರಕರಣವನ್ನು ದಾಖಲಿಸಲಾಗಿದೆ.

ಕೆಮ್ಮಿನ ಔಷಧ ಎಂದು ಲೈಸೆನ್ಸ್‌ ಪಡೆದಿದ್ದ ಪತಂಜಲಿ!

ಸಾಮಾಜಿಕ ಕಾರ‍್ಯಕರ್ತ ತಮನ್ನಾ ಹಶ್ಮಿ ಎಂಬವರು ಮೋಸ, ಕ್ರಿಮಿನಲ್‌ ಪಿತೂರಿ ಮತ್ತಿತರ ಆರೋಪಗಳ ಮೇಲೆ ಎಫ್‌ಐಆರ್‌ ನೋಂದಣಿಗೆ ಕೋರಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದು, ಕೋರ್ಟ್‌ ವಿಚಾರಣೆಯನ್ನು ಜೂನ್‌ 30ಕ್ಕೆ ಮುಂದೂಡಿದೆ.

ಕೊರೋನಾಕ್ಕೆ ಔಷಧಿ ಕಂಡುಹಿಡಿದೆವು ಎಂದು ಬೀಗುತ್ತಿದ್ದ ಪತಂಜಲಿಗೆ ಆಯುಷ್ ಶಾಕ್!

ಬಾಬಾ ರಾಮ್‌ದೇವ್‌ ನೇತೃತ್ವದ ಪತಂಜಲಿ ಸಂಸ್ಥೆ ಕೊರೋನಾ ವೈರಸ್‌ಗೆ ರಾಮಬಾಣವೆಂದು ‘ಕೊರೋನಿಲ್‌’ ಹಾಗೂ ‘ಶ್ವಾಸಾರಿ’ ಎಂಬ ಔಷಧವನ್ನು ಸಿದ್ಧಪಡಿಸಿ, ಇದರಿಂದ 7 ದಿನದಲ್ಲಿ ಕೊರೋನಾ ಗುಣಮುಖವಾಗುತ್ತದೆ ಎಂದು ಹೇಳಿತ್ತು. ಇದರ ಬೆನ್ನಲ್ಲೇ ‘ಕೊರೋನಾ ಔಷಧ’ ಮಾರಾಟ ಸಂಬಂಧ ಜಾಹೀರಾತು ನೀಡದಂತೆ ಪತಂಜಲಿಗೆ ಸರ್ಕಾರ ತಾಕೀತು ಮಾಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!