ಕೋವಿಡ್‌ ನಿಯಂತ್ರಣ: ಕರ್ನಾಟಕಕ್ಕೆ ಕೇಂದ್ರ ತಂಡ!

Published : Feb 25, 2021, 08:22 AM IST
ಕೋವಿಡ್‌ ನಿಯಂತ್ರಣ: ಕರ್ನಾಟಕಕ್ಕೆ ಕೇಂದ್ರ ತಂಡ!

ಸಾರಾಂಶ

ಕೋವಿಡ್‌ ನಿಯಂತ್ರಣ: ಕರ್ನಾಟಕಕ್ಕೆ ಕೇಂದ್ರ ತಂಡ| ಒಟ್ಟು 10 ರಾಜ್ಯಗಳಿಗೆ ತಂಡ ಕಳಿಸಲು ಕೇಂದ್ರ ನಿರ್ಧಾರ| ಸೋಂಕು ಹೆಚ್ಚಳ ಏಕೆ ಎಂದು ಕಂಡುಹಿಡಯುವ ತಂಡ| ಸೋಂಕು ನಿಯಂತ್ರಣಕ್ಕೂ ಸಲಹೆ ನೀಡುವ ತಜ್ಞರು

ನವದೆಹಲಿ(ಫೆ.25): ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ಹೊಸ ಕೊರೋನಾ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ, ಸೋಂಕು ನಿಯಂತ್ರಣದ ಮೇಲುಸ್ತುವಾರಿಗಾಗಿ ಕರ್ನಾಟಕ ಸೇರಿ 10 ರಾಜ್ಯಗಳಿಗೆ ಕೇಂದ್ರ ಸರ್ಕಾರ ತಜ್ಞರ ತಂಡಗಳನ್ನು ನಿಯೋಜಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ನೇತೃತ್ವದ ಪ್ರತಿ ತಂಡದಲ್ಲಿ ಮೂವರು ಸದಸ್ಯರು ಇರಲಿದ್ದಾರೆ.

ಸದ್ಯ ದೇಶದಲ್ಲಿ ಅತಿಹೆಚ್ಚಿನ ಸೋಂಕು ಕಂಡುಬರುತ್ತಿರುವ ಮಹಾರಾಷ್ಟ್ರ, ಕೇರಳ, ಛತ್ತೀಸ್‌ಗಢ, ಮಧ್ಯಪ್ರದೇಶ, ಗುಜರಾತ್‌, ಕರ್ನಾಟಕ, ಪಂಜಾಬ್‌, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಜಮ್ಮು ಮತ್ತು ಕಾಶ್ಮೀರಕ್ಕೆ ತಜ್ಞರ ತಂಡ ನಿಯೋಜಿಸಲಾಗಿದೆ.

ಈ ತಜ್ಞರ ತಂಡವು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಆಡಳಿತದೊಂದಿಗೆ ನಿಕಟ ಸಂಪರ್ಕದ ಮೂಲದ ಸೋಂಕು ಹೆಚ್ಚಳಕ್ಕೆ ಕಾರಣವೇನು ಎಂಬುದನ್ನು ಪತ್ತೆ ಮಾಡುವ ಕೆಲಸ ಮಾಡಲಿದೆ. ಜೊತೆಗೆ ಅಲ್ಲದೆ ಸೋಂಕಿನ ಸರಪಳಿ ತುಂಡರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ನಿಯಂತ್ರಣ ಕ್ರಮಗಳ ಕುರಿತೂ ಕಾರ್ಯನಿರ್ವಹಿಸಲಿದೆ.

ಇದೇ ವೇಳೆ ಸೋಂಕು ನಿಯಂತ್ರಣಾ ಕ್ರಮ ಜಾರಿಯಲ್ಲಿ ಯಾವುದೇ ವೈಫಲ್ಯ ತೋರಬಾರದು. ಅದರಲ್ಲೂ ವಿಶೇಷವಾಗಿ ಕೆಲ ರಾಜ್ಯಗಳಲ್ಲಿ ರೂಪಾಂತರಿ ಕೊರೋನಾದ ಹೊಸ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಮುತುವರ್ಜಿ ತೋರಬೇಕು. ಜೊತೆಗೆ ಕೇಂದ್ರದಿಂದ ಆಗಮಿಸಿರುವ ತಜ್ಞರ ತಂಡದ ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಸಮಾಲೋಚನೆಗೆ ಸೂಕ್ತ ಕಾಲಾವಕಾಶ ಕಲ್ಪಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಪತ್ರ ಬರೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?