Covid Crisis: 71365 ಕೇಸ್‌, 1217 ಸಾವು, ಸಕ್ರಿಯ ಕೇಸಿನ ಸಂಖ್ಯೆ 8.9 ಲಕ್ಷಕ್ಕಿಳಿಕೆ

Kannadaprabha News   | Asianet News
Published : Feb 10, 2022, 03:30 AM IST
Covid Crisis: 71365 ಕೇಸ್‌, 1217 ಸಾವು, ಸಕ್ರಿಯ ಕೇಸಿನ ಸಂಖ್ಯೆ 8.9 ಲಕ್ಷಕ್ಕಿಳಿಕೆ

ಸಾರಾಂಶ

ಬುಧವಾರ ಬೆಳಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 71,365 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, 1217 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಈ ವೈರಸ್‌ ಇಲ್ಲಿಯವರೆಗೆ 5,05,279 ಮಂದಿಯನ್ನು ಬಲಿಪಡೆದಿದೆ. 

ನವದೆಹಲಿ (ಫೆ.10): ಬುಧವಾರ ಬೆಳಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 71,365 ಮಂದಿಗೆ ಕೋವಿಡ್‌ (Covid19) ದೃಢಪಟ್ಟಿದ್ದು, 1217 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಈ ವೈರಸ್‌ ಇಲ್ಲಿಯವರೆಗೆ 5,05,279 ಮಂದಿಯನ್ನು ಬಲಿಪಡೆದಿದೆ. 

ಆದರೆ ಸಕ್ರಿಯ ಸೋಂಕಿತರ ಸಂಖ್ಯೆ 8,92,828ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಬುಧವಾರ ನೀಡಿದೆ. ಒಟ್ಟಾರೆ ಸೋಂಕಿತರ ಪೈಕಿ ಸಕ್ರಿಯ ಸೋಂಕಿತರ ಪ್ರಮಾಣ ಶೇ.2.11ಕ್ಕೆ, ದೈನಂದಿನ ಪಾಸಿಟಿವಿಟಿ ದರ ಶೇ.4.54ಕ್ಕೆ ಮತ್ತು ವಾರದ ಪಾಸಿಟಿವಿಟಿ ದರ ಶೇ.7.57ಕ್ಕೆ ಕುಸಿದಿದೆ. ಇದೇ ವೇಳೆ ದೇಶಾದ್ಯಂತ ಕೋವಿಡ್‌ ಲಸಿಕೆಯ (Covid Vaccine) 170.87 ಕೋಟಿ ಡೋಸ್‌ಗಳನ್ನು ನೀಡಲಾಗಿದೆ.

Covid Crisis: 1.07 ಲಕ್ಷ ಹೊಸ ಕೋವಿಡ್‌ ಕೇಸು: 1 ತಿಂಗಳ ಕನಿಷ್ಠ

ಸಿಂಗಲ್‌ ಡೋಸ್‌ ಸ್ಪುಟ್ನಿಕ್‌ ಲೈಟ್‌ ಬಳಕೆಗೆ ಕೇಂದ್ರ ಅಸ್ತು: ಭಾರತದಲ್ಲಿ ಕೋವಿಡ್‌ 3ನೇ ಅಲೆ ಇಳಿಮುಖವಾಗುತ್ತಿದೆ. ಈ ನಡುವೆ ರಷ್ಯಾದ ಸ್ಪುಟ್ನಿಕ್‌ ಲೈಟ್‌ ಸಿಂಗಲ್‌ ಡೋಸ್‌ (Pputnik Light Single Dose Vaccine) ಕೋವಿಡ್‌-19 ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಭಾನುವಾರ ಅನುಮೋದನೆ ನೀಡಿದೆ. ಭಾರತೀಯ ಔಷಧ ನಿಯಂತ್ರಣದ ಪ್ರಾಧಿಕಾರ (ಡಿಸಿಜಿಐ)ದ ಅನುಮೋದನೆ ಮೂಲಕ ಭಾರತದಲ್ಲಿ ಕೊರೋನಾ ವಿರುದ್ಧದ 9ನೇ ಲಸಿಕೆ ಬಳಕೆಗೆ ಹಸಿರು ನಿಶಾನೆ ಲಭಿಸಿದಂತಾಗಿದೆ. ಇದು ಭಾರತದ ಲಸಿಕಾ ಅಭಿಯಾನಕ್ಕೆ ಮತ್ತಷ್ಟುಬಲ ನೀಡಲಿದೆ. ಸ್ಪುಟ್ನಿಕ್‌ ಲೈಟ್‌ ಕೊರೋನಾ ವಿರುದ್ಧ ಶೇ.65.4ರಷ್ಟುಪರಿಣಾಮಕಾರಿ ಎನ್ನಲಾಗಿದೆ.

15,000ಕ್ಕಿಂತ ಕೆಳಗಿಳಿದ ಕೋವಿಡ್‌ ಕೇಸ್‌: ರಾಜ್ಯದಲ್ಲಿ ಕೋವಿಡ್‌-19 ಪ್ರಕರಣಗಳ ಇಳಿಕೆ ಪ್ರವೃತ್ತಿ ಮುಂದುವರಿದಿದೆ. ಶುಕ್ರವಾರ 14,950 ಹೊಸ ಪ್ರಕರಣಗಳು ವರದಿಯಾಗಿದೆ. 53 ಮಂದಿ ಮೃತರಾಗಿದ್ದಾರೆ. 40,599 ಮಂದಿ ಚೇತರಿಸಿಕೊಂಡಿದ್ದಾರೆ. ಪಾಸಿಟಿವಿಟಿ ದರ ಕೂಡ ನಿರಂತರವಾಗಿ ಕುಸಿಯುತ್ತಿದೆ. 1.36 ಲಕ್ಷ ಕೋವಿಡ್‌ ಪರೀಕ್ಷೆ ನಡೆದಿದ್ದು ಶೇ.10.93ರ ಪಾಸಿಟಿವಿಟಿ ದರ ದಾಖಲಾಗಿದೆ. ಜನವರಿ 12 ರಂದು ಶೇ. 10.96 ಪಾಸಿಟಿವಿಟಿ ದರ ವರದಿಯಾದ ಬಳಿಕ ಮತ್ತೆ ಪಾಸಿಟಿವಿಟಿ ದರ ಶೇ.10ರ ಅಸುಪಾಸಿಗೆ ಬಂದಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1.23 ಲಕ್ಷಕ್ಕೆ ಕುಸಿದಿದೆ. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು 51,645 ಸಕ್ರಿಯ ಪ್ರಕರಣಗಳಿವೆ. ತುಮಕೂರು 6,223, ಮೈಸೂರು 5,724, ಧಾರವಾಡ ಜಿಲ್ಲೆಯಲ್ಲಿ 4,574 ಸಕ್ರಿಯ ಪ್ರಕರಣಗಳಿವೆ. ಶುಕ್ರವಾರ ಬೆಂಗಳೂರು ನಗರದಲ್ಲಿ 6,039, ಮೈಸೂರು 944, ತುಮಕೂರು 656 ಮತ್ತು ಹಾಸನ ಜಿಲ್ಲೆಯಲ್ಲಿ 560 ಹೊಸ ಪ್ರಕರಣ ಪತ್ತೆಯಾಗಿದೆ. ನೂರಕ್ಕಿಂತ ಕಡಿಮೆ ಪ್ರಕರಣ ಯಾದಗಿರಿ (56), ರಾಮನಗರ (65), ಚಿಕ್ಕಮಗಳೂರು (73) ಮತ್ತು ಗದಗ ಜಿಲ್ಲೆಯಲ್ಲಿ (81) ವರದಿಯಾಗಿದೆ.

Covid Crisis: ರಾಜ್ಯದಲ್ಲಿ 15,000ಕ್ಕಿಂತ ಕೆಳಗಿಳಿದ ಕೋವಿಡ್‌ ಕೇಸ್‌..!

ಕಲಬುರಗಿಯಲ್ಲಿ 9 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಬೆಂಗಳೂರು ನಗರದಲ್ಲಿ 15, ಮೈಸೂರು 10, ದಕ್ಷಿಣ ಕನ್ನಡ 4, ಬೆಳಗಾವಿ ಮತ್ತು ಶಿವಮೊಗ್ಗ ತಲಾ 3, ಉಡುಪಿ, ರಾಮನಗರ, ಕೊಪ್ಪಳ, ಕಲಬುರಗಿ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತಲಾ 2, ಬಾಗಲಕೋಟೆ, ಬಳ್ಳಾರಿ, ಚಿತ್ರದುರ್ಗ, ಧಾರವಾಡ, ಹಾಸನ, ಕೋಲಾರ, ಮಂಡ್ಯ ಮತ್ತು ವಿಜಯಪುರಲ್ಲಿ ತಲಾ ಒಂದು ಸಾವು ಸಂಭವಿಸಿದೆ. ರಾಜ್ಯದಲ್ಲಿ ಒಟ್ಟು 38.75 ಲಕ್ಷ ಮಂದಿಯಲ್ಲಿ ಈವರೆಗೆ ಸೋಂಕು ದೃಢಪಟ್ಟಿದೆ. 37.13 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. 39,250 ಮಂದಿ ಮರಣವನ್ನಪ್ಪಿದ್ದಾರೆ.

ಕೋವಿಡ್ ಕೇಸು ಇಳಿಕೆ: ಈವ​ರೆಗೆ ದೈನಂದಿ​ನ ಹೆಚ್ಚು ಪ್ರಕ​ರ​ಣ​ಗ​ಳನ್ನು ದಾಖ​ಲಿ​ಸು​ತ್ತಿದ್ದ ಕರ್ನಾ​ಟಕ, ಮಹಾ​ರಾಷ್ಟ್ರ ಸೇರಿ​ದಂತೆ ದೇಶದ 34 ರಾಜ್ಯ​ಗ​ಳಲ್ಲಿ ಕೊರೋನಾ ವೈರ​ಸ್ಸಿನ ತೀವ್ರತೆ ಗಣ​ನೀಯ ಪ್ರಮಾ​ಣ​ದಲ್ಲಿ ತಗ್ಗಿದೆ. ಅಲ್ಲದೆ ದೈನಂದಿನ ಪಾಸಿ​ಟಿ​ವಿಟಿ ದರವೂ ಕುಸಿತ ಕಂಡಿದೆ. ಆದರೆ ಕೇರಳ ಮತ್ತು ಮಿಜೋರಾಂ ರಾಜ್ಯ​ಗ​ಳಲ್ಲಿ ಹೆಚ್ಚು ಕೋವಿಡ್‌ ಪ್ರಕ​ರ​ಣ​ಗಳು ದಾಖ​ಲಾ​ಗು​ತ್ತಿವೆ ಎಂದು ಕೇಂದ್ರ ಸರ್ಕಾರ ತಿಳಿ​ಸಿದೆ. ದೇಶದ ಒಟ್ಟಾರೆ ಜಿಲ್ಲೆ​ಗಳ ಪೈಕಿ 268 ಜಿಲ್ಲೆ​ಗ​ಳಲ್ಲಿ ಕೋವಿಡ್‌ ಪಾಸಿ​ಟಿ​ವಿಟಿ ದರ ಶೇ.5ಕ್ಕಿಂತ ಕಡಿಮೆ ಇದೆ. ಪರಿ​ಣಾ​ಮ​ಕಾರಿ ಲಸಿಕೆ ಅಭಿ​ಯಾ​ನದಿಂದಾಗಿ ಕೋವಿ​ಡ್‌ಗೆ ಬಲಿ​ಯಾ​ಗುವವರ ಸಂಖ್ಯೆ ನಿಯಂತ್ರ​ಣಕ್ಕೆ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂದು ರಾತ್ರಿ 8ರ ಒಳಗೆ ಟಿಕೆಟ್ ಮೊತ್ತ ಮರುಪಾವತಿಸಿ : ಇಂಡಿಗೋಗೆ ಕೇಂದ್ರ ಗಡುವು
India Latest News Live: ಆಯೋಧ್ಯೆಯ ಬಾಬ್ರಿ ಮಸೀದಿಯನ್ನೇ ಹೋಲುವಂತಹ ಮಸೀದಿಗೆ ಶಂಕು ಸ್ಥಾಪನೆ