ವರ್ಷದ ಕೊನೆಗೆ ಎಲ್ಲ ಯುವಜನಕ್ಕೂ ಲಸಿಕೆ ಎಂದ ಆರೋಗ್ಯ ಸಚಿವ

Published : May 22, 2021, 02:05 PM ISTUpdated : May 22, 2021, 02:32 PM IST
ವರ್ಷದ ಕೊನೆಗೆ ಎಲ್ಲ ಯುವಜನಕ್ಕೂ ಲಸಿಕೆ ಎಂದ ಆರೋಗ್ಯ ಸಚಿವ

ಸಾರಾಂಶ

ವರ್ಷದ ಕೊನೆಗಾಗುವಾಗ ಎಲ್ಲ ಯುವಜನರಿಗೂ ಲಸಿಕೆ ವರ್ಷಾಂತ್ಯಕ್ಕಾಗುವಾಗ ಎಲ್ಲ ಯುವಜನರಿಗೆ ವ್ಯಾಕ್ಸೀನ್ ನೀಡಲು ಭಾರತಕ್ಕೆ ಸಾಧ್ಯ ಎಂದ ಆರೋಗ್ಯ ಸಚಿವ

ದೆಹಲಿ(ಮೇ.22): ಈ ವರ್ಷಾಂತ್ಯದ ವೇಳೆಗೆ ಕೋವಿಡ್ -19 ವಿರುದ್ಧ ಯುವಜನರಿಗೂ ಲಸಿಕೆ ಹಾಕುವ ಸ್ಥಿತಿಗೆ ಭಾರತ ತಲುಪಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷ್ ವರ್ಧನ್ ಅವರು ಹೇಳಿದ್ದಾರೆ.

ಲಸಿಕೆ ತಯಾರಕರನ್ನು ಹೆಚ್ಚಿಸಲು ಮತ್ತು ಲಸಿಕೆ ಡೋಸ್‌ಗಳನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಸಕ್ರಿಯವಾಗಿ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ. ಆಗಸ್ಟ್ ಮತ್ತು ಡಿಸೆಂಬರ್ ನಡುವೆ ಭಾರತವು 216 ಕೋಟಿ ಲಸಿಕೆ ಡೋಸ್ ಸಂಗ್ರಹಿಸಲಿದೆ. ಜುಲೈ ವೇಳೆಗೆ 51 ಕೋಟಿ ಡೋಸ್‌ಗಳನ್ನು ಸಂಗ್ರಹಿಸಲಾಗುವುದು ಎಂದು ಒಂಬತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳೊಂದಿಗೆ ಕೋವಿಡ್ -19 ಪರಿಶೀಲನಾ ಸಭೆಯಲ್ಲಿ ಹರ್ಷ ವರ್ಧನ್ ಹೇಳಿದ್ದಾರೆ.

ಭಾರತದಲ್ಲಿ ಕೋವಿಡ್ ಪರಿಸ್ಥಿತಿ:

ದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಹರ್ಷ್ ವರ್ಧನ್ ಅವರು ಮಾತನಾಡಿ ಕಳೆದ 8 ದಿನಗಳಲ್ಲಿ ಕೊರೋನಾ ರಿಕವರಿ ರೇಟ್ ಹೆಚ್ಚಾಗಿದೆ. ಕಳೆದ ಐದು ದಿನಗಳಿಂದ ಭಾರತದಲ್ಲಿ 3 ಲಕ್ಷಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ. ಹೆಚ್ಚುವರಿಯಾಗಿ, ದೇಶವು ಒಂದೇ ದಿನದಲ್ಲಿ 20,61,683 ಅತಿ ಹೆಚ್ಚು ಪರೀಕ್ಷೆಗಳನ್ನು ನಡೆಸಿದೆ ಎಂದಿದ್ದಾರೆ.

ಸಾಂಕ್ರಾಮಿಕ ರೋಗದ ವಿರುದ್ಧದ ಯುದ್ಧವು ಮುಗಿದಿಲ್ಲ. ಸಣ್ಣ ರಾಜ್ಯಗಳಲ್ಲಿ ಈಗ ಕೊರೋನಾ ಪ್ರಕರಣಗಳಲ್ಲಿ ಏರುಗತಿಯಲ್ಲಿದೆ. ಕರ್ನಾಟಕ, ಕೇರಳದಲ್ಲಿ ಅತ್ಯಂತ ಹೆಚ್ಚು ಕೊರೋನಾ ಪ್ರಕರಣಗಳು ವರದಿಯಾಗುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್