
ನವದೆಹಲಿ(ಮೇ.16): ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕೊಂಚ ಇಳಿಮುಖಗೊಂಡಿದೆ. ಕೊರೋನಾ ನಿಯಂತ್ರಣ ವಿಚಾರವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜ್ಯಗಳ ಸಿಎಂ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಸೂಕ್ತ ಸಲಹೆ ಸೂಚನೆ ನೀಡುತ್ತಿದ್ದಾರೆ. ಅಲ್ಲದೇ ಈ ಮಹಾಮಾರಿ ನಿಯಂತ್ರಣಕ್ಕೆ ಕೇಂದ್ರದಿಂದಲೂ ಎಲ್ಲಾ ರೀತಿಯ ಸಹಾಯ ನೀಡುವುದಾಗಿ ಭರವಸೆಯನ್ನೂ ನೀಡಿದ್ದಾರೆ.
ಇಂದು ಭಾನುವಾರ ಪಿಎಂ ಮೋದಿ ಕೊರೋನಾ ನಿಯಂತ್ರಣ ಸಂಬಂಧ ರಾಜಸ್ಥಾನ ಛತ್ತೀಸ್ಗಢ, ಉತ್ತರ ಪ್ರದೇಶ ಹಾಗೂ ಪುದುಚೇರಿ ಮುಖ್ಯಮಂತ್ರಿಗಳೊಡನೆ ಸಂಭಾಷಣೆ ನಡೆಸಿದ್ದಾರೆ.
ಸಿಎಂ ಯೋಗಿ ಜೊತೆ ಪಿಎಂ ಮೋದಿ ಮಾತು
ಉತ್ತರ ಪ್ರದೇಶದ ಯೋಗಿ ಸರ್ಕಾರ ಕೊರೋನಾದಿಂದಾಗಿ ರಾಜ್ಯದಲ್ಲಿ ಮೃತಪಟ್ಟವರ ವಿಚಾರವಾಗಿ ಭಾರೀ ಚರ್ಚೆಯಲ್ಲಿದೆ. ಹೀಗಿರುವಾಗಲೇ ಪ್ರಧಾನಿ ಮೋದಿ ಯೋಗಿ ಆದಿತ್ಯನಾಥ್ ಜೊತೆ ಮಾತುಕತೆ ನಡೆಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಕೊರೋನಾದಿಂದಾಗಿ ನಿರ್ಮಾಣವಾಗಿರುವ ಪರಿಸ್ಥಿತಿ ಬಗ್ಗೆ ಮಾತುಕತೆ ನಡೆಸಿದ ಮೋದಿ, ಕೆಂದ್ರದಿಂದ ನೀಡಲಾಗುವ ಎಲ್ಲಾ ರೀತಿಯ ಸಹಾಯ ಒದಗಿಸುವುದಾಗಿಯೂ ಭರವಸೆ ನೀಡಿದ್ದಾರೆ.
"
ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಭತ್ತಿಸ್ಗಢ ಸಿಎಂ ಭೂಪೇಶ್ ಭಗೇಲ ಹಾಗೂ ಪುದುಚೇರಿಯ ಸಿಎಂ ಎನ್ ರಂಗಸಾಮಿ ಜೊತೆಗೂ ಮಾತುಕತೆ ನಡೆಸಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ