ಸತತ 3ನೇ ದಿನವೂ ಲಕ್ಷಕ್ಕಿಂತ ಕಡಿಮೆ ಕೇಸು : ಸೋಂಕಿನ ಪ್ರಮಾಣ ಇಳಿಕೆ

Kannadaprabha News   | Asianet News
Published : Jun 11, 2021, 08:53 AM IST
ಸತತ 3ನೇ ದಿನವೂ ಲಕ್ಷಕ್ಕಿಂತ ಕಡಿಮೆ ಕೇಸು : ಸೋಂಕಿನ ಪ್ರಮಾಣ ಇಳಿಕೆ

ಸಾರಾಂಶ

24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 94052 ಹೊಸ ಸೋಂಕಿತರು ಪತ್ತೆ ಸತತ ಮೂರನೇ ದಿನವೂ ದೇಶದಲ್ಲಿ ಹೊಸ ಸೋಂಕಿನ ಪ್ರಮಾಣ ಇಳಿಕೆ ಇನ್ನು ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2.91 ಕೋಟಿ

ನವದೆಹಲಿ (ಜೂ.11): ಗುರುವಾರ ಬೆಳಗ್ಗೆ 8 ಗಂಟೆಗೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 94052 ಹೊಸ ಸೋಂಕಿತರು ಪತ್ತೆಯಾಗಿದ್ದರೆ, 6148 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸತತ ಮೂರನೇ ದಿನವೂ ದೇಶದಲ್ಲಿ ಹೊಸ ಸೋಂಕಿನ ಪ್ರಮಾಣ ಲಕ್ಷಕ್ಕಿಂತ ಕೆಳಗೇ ದಾಖಲಾದಂತೆ ಆಗಿದೆ.

ಈ ನಡುವೆ ಬಿಹಾರ ಸರ್ಕಾರ, ರಾಜ್ಯದಲ್ಲಿ ಈವರೆಗೆ ಸಂಭವಿಸಿದ ಸಾವಿನ ಪ್ರಕರಣವನ್ನು ಗುರುವಾರ ದಿಢೀರನೆ 5500ರಿಂದ 9429ಕ್ಕೆ ಏರಿಸಿದೆ. ಹೀಗಾಗಿ ದೇಶದಲ್ಲಿ ಸಾವಿನ ಸಂಖ್ಯೆ ದಾಖಲೆಯ 6148ಕ್ಕೆ ತಲುಪಿದೆ.

ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆಯನ್ನು ಸೂಕ್ತ ಪ್ರಮಾಣದಲ್ಲಿ ನೀಡುತ್ತಿಲ್ಲ. ಈ ಕುರಿತು ತನಿಖೆ ನಡೆಸಬೇಕು ಎಂದು ಪಟನಾ ಹೈಕೋರ್ಟ್‌ ಬುಧವಾರವಷ್ಟೇ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಅದರ ಬೆನ್ನಲ್ಲೇ ರಾಜ್ಯ ಸರ್ಕಾರ ಸಾವಿನ ಸಂಖ್ಯೆಯನ್ನು ದಿಢೀರನೆ 5500ರಿಂದ 9429ಕ್ಕೆ ಹೆಚ್ಚಿಸಿದೆ. ಅಂದರೆ ಒಂದೇ ದಿನ 3929ರಷ್ಟುಹೆಚ್ಚಳ ಮಾಡಿದೆ. ಈ ಸಾವು ಸಂಭವಿಸಿದ ಅವಧಿ ಯಾವುದು ಎಂಬುದನ್ನು ಸರ್ಕಾರ ಬಹಿರಂಗಪಡಿಸಿಲ್ಲ.

8 ಡಿಸಿಗಳೊಂದಿಗೆ ಸಿಎಂ ಸಂವಾದ, ಈ ಜಿಲ್ಲೆಗಳಲ್ಲಿ ರೂಲ್ಸ್ ಮತ್ತಷ್ಟು ಕಟ್ಟುನಿಟ್ಟು

ಇನ್ನು ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2.91 ಕೋಟಿಗೆ, ಸಾವಿನ ಸಂಖ್ಯೆ 3.59 ಲಕ್ಷಕ್ಕೆ, ಸಕ್ರಿಯ ಪ್ರಕರಣಗಳ ಸಂಖ್ಯೆ 11.67 ಲಕ್ಷಕ್ಕೆ, ಚೇತರಿಕೆ ಪ್ರಮಾಣ ಶೇ.94.77ಕ್ಕೆ, ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ.4.69ಕ್ಕೆ ತಲುಪಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಿರುಪತಿ ತಿಮ್ಮಪ್ಪನಿಗೆ ಅಂಗವಸ್ತ್ರದ ಮೋಸ, ಪ್ಲಾಸ್ಟಿಕ್‌ ಸಿಲ್ಕ್‌ ಕೊಟ್ಟು 55 ಕೋಟಿ ಯಾಮಾರಿಸಿದ ಕಂಪನಿ!
ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?