
ನವದೆಹಲಿ(ಮೇ.20): ಇತ್ತೀಚೆಗೆ ಕೊರೋನಾ ರೋಗಿಗಳ ಚಿಕಿತ್ಸಾ ಮಾರ್ಗಸೂಚಿಯಿಂದ ಪ್ಲಾಸ್ಮಾ ಥೆರಪಿಯನ್ನು ಕೈಬಿಟ್ಟಿದ್ದ ಕೇಂದ್ರ ಸರ್ಕಾರ, ಇನ್ನು ರೆಮ್ಡೆಸಿವಿರ್ ಚುಚ್ಚುಮದ್ದನ್ನೂ ಕೈಬಿಡುವ ಸಾಧ್ಯತೆ ಇದೆ.
ಈ ಬಗ್ಗೆ ದಿಲ್ಲಿಯ ಪ್ರತಿಷ್ಠಿತ ಗಂಗಾರಾಂ ಆಸ್ಪತ್ರೆ ಮುಖ್ಯಸ್ಥ ಡಾ| ಡಿ.ಎಸ್. ರಾಣಾ ಸುಳಿವು ನೀಡಿದ್ದಾರೆ. ‘ಕೊರೋನಾ ಸೋಂಕಿತರ ಮೇಲೆ ಕೆಲವು ಸಾಬೀತುಪಡಿಸಲು ಆಗದ ಚಿಕಿತ್ಸಾ ವಿಧಾನಗಳನ್ನು ಅನುಸರಿಸಲಾಗುತ್ತಿದೆ. ಅವುಗಳಲ್ಲಿ ರೆಮ್ಡೆಸಿವಿರ್ ಚುಚ್ಚುಮದ್ದು ಕೂಡ ಒಂದು. ಪರಿಣಾಮಕಾರಿ ಎಂದು ಸಾಬೀತಾಗದ ಇಂಥ ಚಿಕಿತ್ಸೆಗಳನ್ನು ಕೈಬಿಡಬೇಕು’ ಎಂದು ಅವರು ಹೇಳಿದ್ದಾರೆ.
‘ಪ್ಲಾಸ್ಮಾ ಥೆರಪಿಯನ್ನು ಈ ಹಿಂದೆ ವೈಜ್ಞಾನಿಕ ಆಧಾರದಲ್ಲಿ ಪ್ರಯೋಗಿಸಲಾಗುತ್ತಿತ್ತು. ಆದರೆ ಅದು ಪರಿಣಾಮಕಾರಿ ಎಂದು ಸಾಬೀತಾಗಲಿಲ್ಲ. ಹಾಗಾಗಿಯೇ ಕೈಬಿಡಲಾಗಿದೆ’ ಎಂದಿದ್ದಾರೆ.
ಎರಡನೇ ಕೊರೋನಾ ಅಲೆಯಲ್ಲಿ ಗಂಭೀರ ಸೋಂಕಿತರು ಹೆಚ್ಚಾದ ಕಾರಣ ಅವರಿಗೆ ರೆಮ್ಡೆಸಿವಿರ್ ಚುಚ್ಚುಮದ್ದನ್ನು ವ್ಯಾಪಕವಾಗಿ ಪ್ರಯೋಗಿಸಲಾಗುತ್ತಿದೆ. ಆದರೆ ಅಗತ್ಯಕ್ಕೆ ತಕ್ಕಂತೆ ಉತ್ಪಾದನೆ ಆಗದೇ ದೇಶಾದ್ಯಂತ ಈ ಚುಚ್ಚುಮದ್ದಿಗೆ ಹಾಹಾಕಾರ ಸೃಷ್ಟಿಯಾಗಿದೆ. ಕಾಳಸಂತೆಯಲ್ಲಿ ಕೂಡ ಇದು ಬಿಕರಿ ಆಗುತ್ತಿದೆ. ಶ್ವಾಸಕೋಶದಲ್ಲಿನ ಸೋಂಕನ್ನು ಗುಣಪಡಿಸುವ ಸಾಮರ್ಥ್ಯ ರೆಮ್ಡೆಸಿವಿರ್ಗೆ ಇದೆ ಎಂದು ಹೇಳಲಾಗುತ್ತದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ