
ನವದೆಹಲಿ(ಏ.21): ಕೇಂದ್ರ ಸರ್ಕಾರ ಮೇ 1ರಿಂದ 18 ವರ್ಷ ಮೇಲ್ಪಟ್ಟವರೆಲ್ಲ ಕೊರೋನಾ ಲಸಿಕೆ ಪಡೆಯಲು ಅರ್ಹರೆಂದು ಘೋಷಿಸಿದ್ದರೂ 18ರಿಂದ 45 ವರ್ಷದೊಳಗಿನವರಿಗೆ ಉಚಿತ ಲಸಿಕೆ ನೀಡುತ್ತಿಲ್ಲ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಕೇಂದ್ರದ ಲಸಿಕೆ ನೀತಿ ತಾರತಮ್ಯದಿಂದ ಕೂಡಿದೆ. 18-45 ವರ್ಷದವರಿಗೆ ಉಚಿತ ಲಸಿಕೆ ಇಲ್ಲ. ಬೆಲೆಯ ಮೇಲೆ ನಿಯಂತ್ರಣವಿಲ್ಲದೆ ಮಧ್ಯವರ್ತಿಗಳನ್ನು ತರಲಾಗಿದೆ. ದುರ್ಬಲ ವರ್ಗದವರಿಗೆ ಲಸಿಕೆ ಸಿಗುವ ಗ್ಯಾರಂಟಿ ಇಲ್ಲ. ಕೇಂದ್ರದ್ದು ಲಸಿಕೆ ವಿತರಣೆ ನೀತಿಯಲ್ಲ, ಲಸಿಕೆ ತಾರತಮ್ಯ ನೀತಿ’ ಎಂದು ಮಂಗಳವಾರ ಟ್ವೀಟ್ ಮಾಡಿದ್ದಾರೆ.
‘ಕೆಲವೆಡೆ ಲಾಕ್ಡೌನ್ ಜಾರಿಯಾಗುತ್ತಿದ್ದಂತೆ ಮತ್ತೆ ವಲಸಿಗರು ತಮ್ಮ ಊರುಗಳಿಗೆ ವಲಸೆ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಬ್ಯಾಂಕ್ ಖಾತೆಗೆ ಹಣ ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿ’ ಎಂದೂ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ