ದೇಶದಲ್ಲಿ ಒಂದೇ ದಿನ 89,129 ಕೇಸು, 714 ಸಾವು: 6 ತಿಂಗಳ ಗರಿಷ್ಠ

Kannadaprabha News   | Asianet News
Published : Apr 04, 2021, 07:43 AM IST
ದೇಶದಲ್ಲಿ ಒಂದೇ ದಿನ 89,129 ಕೇಸು, 714 ಸಾವು: 6 ತಿಂಗಳ ಗರಿಷ್ಠ

ಸಾರಾಂಶ

ದೇಶದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಇನ್ನಷ್ಟು ಅಧಿಕವಾಗಿದೆ. ಕೊರೋನಾ ಹೆಚ್ಚಳವಾಗುತ್ತಲೇ ಇದ್ದು ಸಾವಿನ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚು ದಾಖಲಾಗುತ್ತಿದೆ. 

 ನವದೆಹಲಿ (ಏ.04):  ಶನಿವಾರ ದೇಶಾದ್ಯಂತ 89,129 ಮಂದಿಗೆ ಕೊರೋನಾ ಸೋಂಕು ತಗಲಿದ್ದು, ಇದು ಆರೂವರೆ ತಿಂಗಳಲ್ಲೇ ಏಕದಿನದಲ್ಲಿ ದಾಖಲಾದ ಅತಿಹೆಚ್ಚಿನ ಸಂಖ್ಯೆಯಾಗಿದೆ. ಒಂದೇ ದಿನ 714 ಮಂದಿ ಸಾವನ್ನಪ್ಪಿದ್ದಾರೆ. ಅದರೊಂದಿಗೆ ದೇಶದಲ್ಲಿ ಕೊರೋನಾಕ್ಕೆ ಈವರೆಗೆ ಬಲಿಯಾದವರ ಸಂಖ್ಯೆ 1.64 ಲಕ್ಷಕ್ಕೆ ಏರಿಕೆಯಾಗಿದೆ. ಶನಿವಾರದ ಸಾವು ಅಕ್ಟೋಬರ್‌ 21ರ ನಂತರದ ಗರಿಷ್ಠವಾಗಿದೆ.

ಈ ಕುರಿತು ಮಾಹಿತಿ ಬಿಡುಗಡೆ ಮಾಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ದೇಶದಲ್ಲಿ ಕಳೆದ 24 ದಿನಗಳಿಂದ ಕೊರೋನಾ ಸೋಂಕು ನಿತ್ಯ ಏರಿಕೆಯಾಗುತ್ತಿದೆ. ಈ ಅವಧಿಯಲ್ಲಿ 6.58 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಗುಣಮುಖ ದರ ಶೇ.93.36ಕ್ಕೆ ಕುಸಿತವಾಗಿದೆ. ಸಾವಿನ ದರ ಕೂಡ ಶೇ.1.32ಕ್ಕೆ ಕುಸಿತವಾಗಿದೆ ಎಂದು ಮಾಹಿತಿ ನೀಡಿದೆ.

ಕೊರೋನಾ ಕಾಟ: ಬೆಂಗ್ಳೂರಲ್ಲಿ ಸತತ 2ನೇ ದಿನವೂ 3000+ ಕೇಸ್‌..! ...

8 ರಾಜ್ಯಗಳಲ್ಲಿ ಶೇ.81.4 ಕೇಸು :  ಶನಿವಾರ ದೇಶಾದ್ಯಂತ ಪತ್ತೆಯಾದ 89 ಸಾವಿರ ಕೊರೋನಾ ಪ್ರಕರಣಗಳ ಪೈಕಿ ಶೇ.81.42ರಷ್ಟುಪ್ರಕರಣಗಳು ಮಹಾರಾಷ್ಟ್ರ, ಕರ್ನಾಟಕ, ಛತ್ತೀಸ್‌ಗಢ, ತಮಿಳುನಾಡು, ದೆಹಲಿ, ಉತ್ತರ ಪ್ರದೇಶ, ಪಂಜಾಬ್‌ ಹಾಗೂ ಮಧ್ಯಪ್ರದೇಶ ಈ 8 ರಾಜ್ಯಗಳಲ್ಲಿ ವರದಿಯಾಗಿವೆ. ದೇಶದಲ್ಲೀಗ ಅತಿಹೆಚ್ಚು ಕೊರೋನಾ ಸೋಂಕು ವರದಿಯಾಗುತ್ತಿರುವ 10 ಜಿಲ್ಲೆಗಳೆಂದರೆ ಪುಣೆ, ಮುಂಬೈ, ನಾಗ್ಪುರ, ಥಾಣೆ, ನಾಶಿಕ್‌, ಬೆಂಗಳೂರು ನಗರ, ಔರಂಗಾಬಾದ್‌, ದೆಹಲಿ, ಅಹ್ಮದ್‌ನಗರ ಹಾಗೂ ನಾಂದೇಡ್‌ ಆಗಿವೆ. ಈ ಹತ್ತು ಜಿಲ್ಲೆಗಳಲ್ಲಿ ದೇಶದಲ್ಲಿರುವ ಒಟ್ಟು ಕೊರೋನಾ ಸೋಂಕಿತರ ಪೈಕಿ ಶೇ.50ರಷ್ಟುಸೋಂಕಿತರಿದ್ದಾರೆ.

ಇನ್ನು, ದೇಶದಲ್ಲಿರುವ ಒಟ್ಟು ಸೋಂಕಿತರ ಪೈಕಿ ಮಹಾರಾಷ್ಟ್ರ, ಕರ್ನಾಟಕ, ಛತ್ತೀಸ್‌ಗಢ, ಕೇರಳ ಮತ್ತು ಪಂಜಾಬ್‌ ರಾಜ್ಯಗಳಲ್ಲಿ ಶೇ.77.3ರಷ್ಟುಸೋಂಕಿತರಿದ್ದಾರೆ. ಮಹಾರಾಷ್ಟ್ರವೊಂದರಲ್ಲೇ ದೇಶದ ಒಟ್ಟು ಸೋಂಕಿತರ ಪೈಕಿ ಶೇ.59.36ರಷ್ಟುಸೋಂಕಿತರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ
25 ಜನರು ಸಾವನ್ನಪ್ಪಿದ ಪಬ್‌ ಮಾಲೀಕರ ರೆಸಾರ್ಟ್‌ ಧ್ವಂಸ