
ನವದೆಹಲಿ (ಏ.16): ಭಾರತೀಯ ಪುರಾತತ್ವ ಸರ್ವೇಕ್ಷಣೆ(ಎಎಸ್ಐ) ವ್ಯಾಪ್ತಿಗೆ ಬರುವ ದೇಶದ ಐತಿಹಾಸಿಕ ಸ್ಮಾರಕಗಳು, ವಸ್ತು ಸಂಗ್ರಹಾಲಯಗಳು ಸೇರಿದಂತೆ ಇನ್ನಿತರ ಮಹತ್ವದ ಸ್ಥಳಗಳ ಪ್ರವೇಶವನ್ನು ಮೇ 15ರವರೆಗೆ ಬಂದ್ ಮಾಡಲಾಗಿದೆ.
ದೇಶಾದ್ಯಂತ ಭಾರೀ ವೇಗವಾಗಿ ಹಬ್ಬುತ್ತಿರುವ ಕೋವಿಡ್ ನಿಯಂತ್ರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಹೇಳಿದೆ.
ಅಮೆರಿಕಾ ಮೀರಿಸಿದ ಭಾರತ : ಒಂದೇ ದಿನ ದಾಖಲೆಯಷ್ಟು ಕೇಸ್ ..
ಕಳೆದ ವರ್ಷವೂ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ತನ್ನ ವ್ಯಾಪ್ತಿಗೆ ಬರುವ ಎಲ್ಲಾ ಐತಿಹಾಸಿಕ ಸ್ಮಾರಕಗಳು, ವಸ್ತು ಸಂಗ್ರಹಾಲಯಗಳಿಗೆ ಜನ-ಸಾಮಾನ್ಯರ ಪ್ರವೇಶವನ್ನು ಭಾರತೀಯ ಪುರಾತತ್ವ ಸರ್ವೇಕ್ಷಣೆ(ಎಎಸ್ಐ) ನಿಷೇಧಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ