
ನವದೆಹಲಿ(ಏ.12): ಭಾನುವಾರ ಬೆಳಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಸಾರ್ವಕಾಲಿಕ ದಾಖಲೆಯಾದ 10,732 ಮಂದಿಗೆ ಸೋಂಕು ವ್ಯಾಪಿಸುವುದರೊಂದಿಗೆ ದೆಹಲಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ದೇಶದ ಜನತೆ ಅನಿವಾರ್ಯತೆ ಕಾರಣಕ್ಕೆ ಹೊರತುಪಡಿಸಿ ಇನ್ಯಾವುದೇ ಕಾರಣಕ್ಕೂ ಮನೆಯಿಂದ ಹೊರಬಾರದಂತೆ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ‘ಈ ಹಿಂದಿನ ಕೊರೋನಾ ಅಲೆಗಿಂತಲೂ ದಿಲ್ಲಿಯಲ್ಲಿ ಕಂಡುಬಂದಿರುವ 4ನೇ ಅಲೆಯು ಭಾರೀ ಅಪಾಯಕಾರಿಯಾಗಿದ್ದು, ಪರಿಸ್ಥಿತಿ ಬಗ್ಗೆ ಸರ್ಕಾರ ಕಣ್ಗಾವಲು ವಹಿಸುತ್ತಿದೆ. ಇದರ ಜೊತೆಗೆ ನೀವು (ಜನ) ಸಹಕಾರ ನೀಡಿದರೆ, ಲಾಕ್ಡೌನ್ ವಿಧಿಸದೇ ಪರಿಸ್ಥಿತಿಯನ್ನು ನಿಭಾಯಿಸಬಹುದು’ ಎಂದಿದ್ದಾರೆ.
ಆದರೆ ಆಸ್ಪತ್ರೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿ ಬೆಡ್ಗಳ ಕೊರತೆಯಾದರೆ, ಲಾಕ್ಡೌನ್ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ