
ಚಂಡೀಗಢ(ಏ.10): ಕೊರೋನಾ ವೈರಸ್ ಹರಡುವುದನ್ನು ತಡೆಯಲು ಲಾಕ್ಡೌನ್ ಘೋಷಿಸಿದ್ದರೂ ಇದೀಗ ಆರ್ಥಿಕತೆಯ ಮೇಲೆ ಹೊಡೆತ ಬೀಳುವ ಆತಂಕ ಎದುರಾಗಿದೆ. ಈ ನಡವೆಯೇ ರಾಜ್ಯ ಸರ್ಕಾರ ಸರ್ಕಾರಿ ನೌಕರರ ವೇತನ ಕಡಿತಗೊಳಿಸುವ ಬಗ್ಗೆ ಚಿಂತಿಸುತ್ತಿದೆ.
ಹರಿಯಾಣ ಸರ್ಕಾರ ವೈದ್ಯರು, ದಾದಿಯರು, ಪಾರಾ ಮೆಡಿಕಲ್ ಸಿಬ್ಬಂದಿಯ ವೇತನ ಹೆಚ್ಚಿಸಲು ನಿರ್ಧಾರ ಮಾಡಿದೆ. ಈಗಿರುವ ವೇತನದ ದುಪ್ಪಟ್ಟು ವೇತನವನ್ನು ನೀಡಲು ಸರ್ಕಾರ ನಿರ್ಧರಿಸಿದೆ.
ಕೊರೋನಾ ಸೋಂಕಿತರಿಗೆ ಕೇರಳದಲ್ಲಿ ಪ್ಲಾಸ್ಮಾ ಚಿಕಿತ್ಸೆ, 3-7 ದಿನದಲ್ಲಿ ಗುಣಮುಖ
ಹರಿಯಾಣ ಮುಖ್ಯಮಂತ್ರಿ ಮನೋಹರ್ಲಾಲ್ ಖತ್ತರ್ ಈ ಬಗ್ಗೆ ಸೂಚನೆ ನೀಡಿದ್ದು, ವೈದ್ಯರ ಸೇವೆಯನ್ನು ಶ್ಲಾಘಿಸಿದ್ದಾರೆ. ಹಾಗೆಯೇ ವೈದ್ಯರ ವೇತನವನ್ನು ದುಪ್ಪಟ್ಟು ಮಾಡುವುದಾಗಿ ತಿಳಿಸಿದ್ದಾರೆ.
ಕೊರೋನಾ ವೈರಸ್ ಕರ್ತವ್ಯದ ಸಂದರ್ಭ ಪೊಲೀಸ್ ಸಿಬ್ಬಂದಿ ಸೋಂಕಿತನಾದರೆ ಕಂಪನ್ಸೆಷನ್ ನೀಡಲು ತೀರ್ಮಾನಿಸಲಾಗಿದೆ. ಪೊಲೀಸ್ ಸಿಬ್ಬಂದಿ ಕುಟುಂಬಕ್ಕೆ 30 ಲಕ್ಷ ರೂಪಾಯಿ ನೀಡಲಾಗುತ್ತದೆ ಎಂದು ಘೋಷಿಸಲಾಗಿದೆ. ಹರಿಯಾಣದಲ್ಲಿ 169 ಕೊರೋನಾ ಪ್ರಕರಣಗಳಿದ್ದು, ಮೂವರು ಸಾವನ್ನಪ್ಪಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ