
ನವದೆಹಲಿ: ಅರಬ್ಬೀ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಇದೀಗ ಚಂಡಮಾರುತದ ರೂಪ ತಾಳಿದೆ. ‘ಬಿಪರ್ಜಾಯ್’ (ವಿಪತ್ತು) ಹೆಸರಿನ ಚಂಡಮಾರುತ ಉತ್ತರಾಭಿಮುಖವಾಗಿ ಚಲಿಸಲು ಪ್ರಾರಂಭಿಸಿದ್ದು, ಕರ್ನಾಟಕ ಕರಾವಳಿ ಮಂಗಳವಾರವೇ ಪ್ರಕ್ಷುಬ್ಧವಾಗಿದೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ ಹಾಗೂ ಗುಜರಾತ್ ಕರಾವಳಿಗಳಲ್ಲಿ (Gujarat Costal) ಬುಧವಾರದಿಂದ 3 ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department)ಎಚ್ಚರಿಕೆ ನೀಡಿದೆ
.ರೈತರಿಗೆ ಶಾಕಿಂಗ್ ನ್ಯೂಸ್: ಜೂನ್ನಲ್ಲಿ ಕಡಿಮೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ
ಇದೇ ಚಂಡಮಾರುತವು (Cyclone) ಮುಂಗಾರು ಆಗಮನಕ್ಕೆ ಅಡ್ಡಿ ಮಾಡಿದೆ. ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಮುಂಗಾರು ಜೂ.8 ಅಥವಾ 9ರಂದು ಕೇರಳ ಪ್ರವೇಶಿಸಬಹುದು. ಆದರೆ ಅದು ಪ್ರಬಲ ರೂಪದಲ್ಲಿರದೇ ದುರ್ಬಲವಾಗಿರಲಿದೆ ಎಂದು ಹೇಳಲಾಗಿದೆ. ಈ ಚಂಡಮಾರುತಕ್ಕೆ ಬಂಗಾಳಿ ಭಾಷೆಯ ಬಿಪರ್ಜಾಯ್ (ವಿಪತ್ತು) ಎಂದು ಹೆಸರಿಡಲಾಗಿದ್ದು, ಬಾಂಗ್ಲಾದೇಶ (Bangladesh) ಈ ಹೆಸರನ್ನು ಸೂಚಿಸಿದೆ. ಈ ಚಂಡಮಾರುತ ಪ್ರಭಾವದಿಂದಾಗಿ ಭಾರತದ ಪಶ್ಚಿಮ ಕರಾವಳಿಯಲ್ಲಿ ಮಳೆಯಾಗಲಿದೆ. ಈ ಚಂಡಮಾರುತ ಪಶ್ಚಿಮ ಘಟ್ಟವನ್ನು ದಾಟುವಷ್ಟುಪ್ರಬಲವಾಗಿ ಭಾರತದತ್ತ ಬೀಸುವುದಿಲ್ಲ ಎಂದು ಇಲಾಖೆ ಹೇಳಿದೆ.
Bengaluru Rain: ಅಬ್ಬರದ ಮಳೆ, ಎಚ್ಚರ ಎಂದ ಹವಾಮಾನ ಇಲಾಖೆ
ಉತ್ತರಾಭಿಮುಖವಾಗಿ ಲಗ್ಗೆ:
ಈ ಚಂಡಮಾರುತ ಗೋವಾದಿಂದ ನೈಋುತ್ಯ ಭಾಗಕ್ಕೆ 950 ಕಿ.ಮೀ., ಮುಂಬೈನಿಂದ 1,100 ಕಿ.ಮೀ. ಮತ್ತು ಪೋರಬಂದರಿನಿಂದ 1,490 ಕಿ.ಮೀ. ದೂರದಲ್ಲಿ ಸೃಷ್ಟಿಯಾಗಿದೆ. ಈ ಚಂಡಮಾರುತ ಉತ್ತರಾಭಿಮುಖವಾಗಿ ಚಲಿಸುತ್ತಿದ್ದು, ಜೂ.8ರಂದು ಗೋವಾ (Goa), ಮಹಾರಾಷ್ಟ್ರ (Maharashtra) ಸಮುದ್ರ ತೀರಗಳಲ್ಲಿ ಪ್ರಕ್ಷುಬ್ಧ ವಾತಾವರಣ ಇರಲಿದೆ ಎಂದು ಇಲಾಖೆ ಹೇಳಿದೆ. ವಾಯುಭಾರ ಕುಸಿತದಿಂದಾಗಿ ಮಂಗಳವಾರ ಕರ್ನಾಟಕದ ಕರಾವಳಿಯಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದ್ದು, ಮೀನುಗಾರರಿಗೆ ದಡಕ್ಕೆ ಮರಳುವಂತೆ ಎಚ್ಚರಿಕೆ ನೀಡಲಾಗಿದೆ. ಈ ಚಂಡಮಾರುತ ಗುರುವಾರದ ಹೊತ್ತಿಗೆ ಮತ್ತಷ್ಟುತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಆದರೆ, ಈ ಚಂಡಮಾರುತ ವಾಯವ್ಯ ದಿಕ್ಕಿನತ್ತಲೂ ಚಲಿಸುವ ಸಾಧ್ಯತೆಗಳು ದಟ್ಟವಾಗಿರುವುದರಿಂದ ಭಾರತದ ಯಾವ ತೀರಕ್ಕೆ ಅಪ್ಪಳಿಸಬಹುದು ಎಂದು ಸ್ಪಷ್ಟಪಡಿಸಿಲ್ಲ. ಮುಂಗಾರು ಮಾರುತ ವಿಳಂಬವಾಗಲು ಈ ಚಂಡಮಾರುತವೂ ಕಾರಣವಾಗಿದ್ದು, ಈ ಮೊದಲು ಹವಾಮಾನ ಇಲಾಖೆ ಅಂದಾಜಿಸಿದಂತೆ ಜೂ.3ರಂದೇ ಆಗಮಿಸಬೇಕಿತ್ತು. ಇದೀಗ ಮುಂಗಾರು ಮತ್ತಷ್ಟು ವಿಳಂಬವಾಗಲಿದೆ ಎಂದು ಹೇಳಲಾಗುತ್ತಿದ್ದು, ನಿಖರ ದಿನಾಂಕವನ್ನು ಹವಾಮಾನ ಇಲಾಖೆ ಸ್ಪಷ್ಟವಾಗಿ ಹೇಳಿಲ್ಲ.
ಮುಂಗಾರುಪೂರ್ವ ಮಳೆ ಕೊರತೆ; 79 ಅಡಿಗೆ ಕುಸಿದ ಕೆಆರ್ಎಸ್ ನೀರಿನ ಮಟ್ಟ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ