ಮಹಿಳೆಯರ ಮೇಲೆಸಗುವ ಅಪರಾಧ ಕೃತ್ಯಗಳಿಗೆ ಕ್ಷಮೆಯಿಲ್ಲ; ಸ್ತ್ರೀಪೀಡಕರ ದಂಡನೆಗೆ ಕಠಿಣ ಕಾಯ್ದೆ: ಪ್ರಧಾನಿ ಮೋದಿ

Published : Aug 26, 2024, 06:22 AM IST
ಮಹಿಳೆಯರ ಮೇಲೆಸಗುವ ಅಪರಾಧ ಕೃತ್ಯಗಳಿಗೆ ಕ್ಷಮೆಯಿಲ್ಲ; ಸ್ತ್ರೀಪೀಡಕರ ದಂಡನೆಗೆ ಕಠಿಣ ಕಾಯ್ದೆ: ಪ್ರಧಾನಿ ಮೋದಿ

ಸಾರಾಂಶ

ಪಶ್ಚಿಮ ಬಂಗಾಳದಲ್ಲಿ ಕರ್ತವ್ಯನಿರತ ವೈದ್ಯೆಯ ಮೇಲಿನ ಅತ್ಯಾಚಾರ-ಕೊಲೆ ಮತ್ತು ಮಹಾರಾಷ್ಟ್ರದ ಬದ್ಲಾಪುರದಲ್ಲಿ ನಡೆದ ಇಬ್ಬರು ನಾಲ್ಕು ವರ್ಷದ ಹೆಣ್ಣುಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ದೇಶಾದ್ಯಂತ ಆಕ್ರೋಶ ಎದ್ದಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು, ‘ಮಹಿಳೆಯರ ಮೇಲೆ ಎಸಗುವ ಅಪರಾಧ ಕೃತ್ಯಗಳಿಗೆ ಕ್ಷಮೆಯಿಲ್ಲ. ಅದು ಮಹಾಪಾಪ’ ಎಂದು ಗುಡುಗಿದ್ದಾರೆ. 

ಜಲಗಾಂವ್‌ (ಆ.26) :  ಪಶ್ಚಿಮ ಬಂಗಾಳದಲ್ಲಿ ಕರ್ತವ್ಯನಿರತ ವೈದ್ಯೆಯ ಮೇಲಿನ ಅತ್ಯಾಚಾರ-ಕೊಲೆ ಮತ್ತು ಮಹಾರಾಷ್ಟ್ರದ ಬದ್ಲಾಪುರದಲ್ಲಿ ನಡೆದ ಇಬ್ಬರು ನಾಲ್ಕು ವರ್ಷದ ಹೆಣ್ಣುಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ದೇಶಾದ್ಯಂತ ಆಕ್ರೋಶ ಎದ್ದಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು, ‘ಮಹಿಳೆಯರ ಮೇಲೆ ಎಸಗುವ ಅಪರಾಧ ಕೃತ್ಯಗಳಿಗೆ ಕ್ಷಮೆಯಿಲ್ಲ. ಅದು ಮಹಾಪಾಪ’ ಎಂದು ಗುಡುಗಿದ್ದಾರೆ. ಅಲ್ಲದೆ, ‘ಸ್ತ್ರೀಪೀಡಕರಿಗೆ ಕಠಿಣ ಶಿಕ್ಷೆ ನೀಡಲು ಕಾಯ್ದೆಯನ್ನು ನಮ್ಮ ಸರ್ಕಾರ ಬಲಗೊಳಿಸುತ್ತಿದೆ’ ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ‘ಲಖಪತಿ ದೀದಿ ಸಮ್ಮೇಳನ’ದಲ್ಲಿ ಭಾನುವಾರ ಮಾತನಾಡಿದ ಅವರು, ‘ಮಹಿಳೆಯರ ರಕ್ಷಣೆ ನಮ್ಮ ಆದ್ಯತೆಯಾಗಬೇಕು. ಈ ದೇಶದ ಪ್ರತಿಯೊಬ್ಬ ತಾಯಿ, ಅಕ್ಕ-ತಂಗಿ ಹಾಗೂ ಮಗಳ ರಕ್ಷಣೆ ನಮ್ಮ ಕರ್ತವ್ಯವಾಗಬೇಕು. ಕೆಂಪುಕೋಟೆಯ ಮೇಲಿನಿಂದಲೂ ನಾನು ಈ ವಿಷಯವನ್ನು ಪದೇಪದೇ ಹೇಳಿದ್ದೇನೆ. ದೇಶದ ಯಾವುದೇ ರಾಜ್ಯದಲ್ಲಾದರೂ ಸರಿ, ನಮ್ಮ ಅಕ್ಕ-ತಂಗಿಯರಿಗೆ ಹಾಗೂ ಹೆಣ್ಣುಮಕ್ಕಳಿಗೆ ಆಗುವ ನೋವು ನನಗೆ ಅರ್ಥವಾಗುತ್ತದೆ’ ಎಂದು ಹೇಳಿದರು.

'ರಾಹುಲ್ ಗಾಂಧಿಯದು 'ಬಾಲಬುದ್ಧಿ..' ಮಿಸ್‌ ಇಂಡಿಯಾ ವಿಜೇತರಲ್ಲಿ ದಲಿತರಿಲ್ಲ ಎಂದ ರಾಹುಲ್ ಗಾಂಧಿ ಹೇಳಿಕಗೆ ಕಿರಣ್ ರಿಜಿಜು ವ್ಯಂಗ್ಯ

‘ಪ್ರತಿಯೊಂದು ರಾಜಕೀಯ ಪಕ್ಷಕ್ಕೂ, ಪ್ರತಿಯೊಂದು ರಾಜ್ಯ ಸರ್ಕಾರಕ್ಕೂ ನಾನು ಹೇಳುವುದಿಷ್ಟೆ: ಮಹಿಳೆಯರ ಮೇಲಿನ ಅಪರಾಧ ಕೃತ್ಯಗಳು ಅಕ್ಷಮ್ಯ. ತಪ್ಪಿತಸ್ಥರು ಯಾರೇ ಇದ್ದರೂ ಬಿಡಬಾರದು. ತಪ್ಪಿತಸ್ಥರಿಗೆ ಸಹಾಯ ಮಾಡುವವರನ್ನೂ ಬಿಡಬಾರದು. ಆಸ್ಪತ್ರೆ, ಶಾಲೆ, ಸರ್ಕಾರ, ಪೊಲೀಸ್‌ ವ್ಯವಸ್ಥೆ ಅಥವಾ ಯಾವುದೇ ಹಂತದಲ್ಲಿ ನಿರ್ಲಕ್ಷ್ಯ ತೋರಿದರೂ ಅದಕ್ಕೆ ಸಂಬಂಧಪಟ್ಟ ಎಲ್ಲರನ್ನೂ ಹೊಣೆ ಮಾಡಬೇಕು. ಈ ಸಂದೇಶ ಉನ್ನತ ಹಂತದಿಂದ ಹಿಡಿದು ಕೊನೆಯ ಹಂತದವರೆಗೂ ಹೋಗಬೇಕು’ ಎಂದು ತೀಕ್ಷ್ಣವಾಗಿ ಹೇಳಿದರು.

‘ಮಹಿಳೆಯರ ಘನತೆಯನ್ನು ರಕ್ಷಿಸುವುದು ನಮ್ಮ ಮೇಲಿರುವ ದೊಡ್ಡ ಜವಾಬ್ದಾರಿ. ಸಮಾಜಕ್ಕೂ ಸರ್ಕಾರಕ್ಕೂ ಈ ಗುರುತರ ಜವಾಬ್ದಾರಿಯಿದೆ. ನಮ್ಮ ಸರ್ಕಾರ ಕಳೆದ 10 ವರ್ಷಗಳಲ್ಲಿ ಮಹಿಳೆಯರ ಏಳಿಗೆಗೆ ಹಿಂದೆ ಯಾವ ಸರ್ಕಾರವೂ ಮಾಡದಷ್ಟು ಕೆಲಸಗಳನ್ನು ಮಾಡಿದೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧದ ಕಾನೂನು ಬಲಪಡಿಸುತ್ತಿದೆ’ ಎಂದು ಪ್ರಧಾನಿ ಅಭಿಪ್ರಾಯಪಟ್ಟರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ