
ಮುಂಬೈ(ಜ.24): ರಿಲಯನ್ಸ್ ಇಂಡಸ್ಟ್ರಿ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಭದ್ರತೆಗೆ ನಿಯೋಜನೆಗೊಂಡಿದ್ದ CRPF ಯೋಧನೋರ್ವ, ತನ್ನ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು ತಗುಲು ಮೃತಪಟ್ಟಿದ್ದಾರೆ.
ಮುಖೇಶ್ ಅಂಬಾನಿ ಅವರ ಮನೆಯ ಭದ್ರತೆಗೆ ನಿಯೋಜನೆಗೊಂಡಿದ್ದ ದೇವೇಂದ್ರ ಬಕೋತ್ರಾ, ತನ್ನದೇ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು ತಗುಲಿ ಹತರಾಗಿದ್ದಾರೆ.
ಸರ್ಕಾರಿ ಐಒಸಿ ಹಿಂದಿಕ್ಕಿದ ರಿಲಯನ್ಸ್ ಈಗ ಆದಾಯದಲ್ಲಿ ನಂ.1
ಮುಖೇಶ್ ಅಂಬಾನಿ ಅವರ 27 ಅಂತಸ್ತಿನ 'ಅಂಟಿಲಿಯಾ' ಬಂಗಲೆಯ ಭದ್ರತೆಗೆ ದೇವೇಂದ್ರ ಬಕೋತ್ರಾ ನಿಯೋಜನೆಗೊಂಡಿದ್ದರು. ಬುಧವಾರ ಸಾಯಂಕಾಲ 7 ಗಂಟೆ ಸುಮಾರಿಗೆ ದೇವೇಂದ್ರ ಅವರ ರೈಫಲ್ನಿಂದ ಆಕಸ್ಮಿಕವಾಗಿ ಗುಂಡುಗಳು ಹಾರಿವೆ. ಪರಿಣಾಮ ದೇವೇಂದ್ರ ಅವರ ಎದೆಗೆ ಎರಡು ಗುಂಡುಗಳು ಹೊಕ್ಕಿದ್ದವು.
ಕೂಡಲೇ ದೇವೇಂದ್ರ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟರು ಎಂದು ಆಸ್ಪತ್ರೆ ವೈದ್ಯರು ಖಚಿತಪಡಿಸಿದ್ದಾರೆ.
ರಿಲಯನ್ಸ್ ಮಾರುಕಟ್ಟೆ ಮೌಲ್ಯ 10 ಲಕ್ಷ ಕೋಟಿ ರೂ ಏರಿಕೆ
ಈ ಕುರಿತು ಪ್ರತಿಕ್ರಿಯೆ ನೀಡಿರುವ ಡೆಪ್ಯೂಟಿ ಪೊಲೀಸ್ ಕಮಿಷನರ್ ರಾಜೀವ್ ಜೈನ್, ಇದೊಂದು ದುರ್ಘಟನೆಯಾಗಿದ್ದು, ದೇವೇಂದ್ರ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ