ಕೊಲೆ ಮಾಡಿ, ಬಾಯಿ ಮುಚ್ಚಿಸಲು ಸಾಧ್ಯವಿಲ್ಲ: ರೈತರ ಪರ ಬಿಜೆಪಿ ಸಂಸದನ ಧ್ವನಿ!

Published : Oct 07, 2021, 12:13 PM ISTUpdated : Oct 07, 2021, 12:24 PM IST
ಕೊಲೆ ಮಾಡಿ, ಬಾಯಿ ಮುಚ್ಚಿಸಲು ಸಾಧ್ಯವಿಲ್ಲ: ರೈತರ ಪರ ಬಿಜೆಪಿ ಸಂಸದನ ಧ್ವನಿ!

ಸಾರಾಂಶ

* ಲಖೀಂಪುರ ಹಿಂಸಾಚಾರಕ್ಕೆ ತೀವ್ರ ಆಕ್ರೋಶ * ರೈತರ ಪರ ಧ್ವನಿ ಎತ್ತಿದ ಬಿಜೆಪಿ ಸಂಸದ * ಹೊಸ ವಿಡಿಯೋ ಬಿಡುಗಡೆ ಮಾಡಿದ ವರುಣ್ ಗಾಂಧಿ

ಲಖೀಂಪುರ(ಆ.07): ಬಿಜೆಪಿ ಸಂಸದ ವರುಣ್ ಗಾಂಧಿ(BJP MP Varun Gandhi) ಅವರು ಲಖೀಂಪುರ ಖೇರಿ(Lakhimpur Kheri) ಹಿಂಸಾಚಾರದ ಬಗ್ಗೆ ನಿರಂತರವಾಗಿ ಧ್ವನಿ ಎತ್ತಿದ್ದಾರೆ. ರೈತರ ಮೇಲೆ ಕಾರು ಹರಿಸಿರುವ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದು, ಅದನ್ನು ಅವರು ಬುಧವಾರ ಶೇರ್ ಮಾಡಿದ್ದಾರೆ. ಗುರುವಾರ, ಅವರು ಈ ಘಟನೆಯ ಮತ್ತೊಂದು ವೀಡಿಯೋವನ್ನು ಹಂಚಿಕೊಂಡಿದ್ದಾರೆ, ಇದು ಮೊದಲಿಗಿಂತ ಉತ್ತಮ ಗುಣಮಟ್ಟದ್ದಾಗಿದೆ. ಇದರಲ್ಲಿ ಘಟನೆ ಮತ್ತಷ್ಟು ಸ್ಪಷ್ಟವಾಗಿ ಗೋಚರಿಸುತ್ತದೆ. ಲಖೀಂಪುರ ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ. ಕಪ್ಪು SUV ಕೆಲವು ಪ್ರತಿಭಟನಾನಿರತ ರೈತರ ಮೇಲೆ ಹರಿದು ಹಿಂಸಾಚಾರ ನಡೆದಿದೆ. ವರುಣ್ ಗಾಂಧಿ ಈ ವಿಡಿಯೋವನ್ನು ಟ್ವೀಟ್ ಮಾಡಿದ್ದು, ಮುಗ್ಧ ರೈತರ ರಕ್ತಕ್ಕೆ ನ್ಯಾಯ ಸಿಗಬೇಕಿದೆ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ವರುಣ್ ಗಾಂಧಿ(Varun Gandhi), 'ಈ ವೀಡಿಯೋ ಕನ್ನಡಿಯಂತೆ ಸ್ಪಷ್ಟವಾಗಿದೆ. ಪ್ರತಿಭಟನಾಕಾರರನ್ನು ಕೊಲ್ಲುವ ಮೂಲಕ ನೀವು ಅವರನ್ನು ಮೌನಗೊಳಿಸಲು ಸಾಧ್ಯವಿಲ್ಲ. ಮುಗ್ಧ ರೈತರ ರಕ್ತ ಚೆಲ್ಲುವ ಘಟನೆಗೆ ಯಾರು ಕಾರಣ ಎಂಂಬುವುದು ಸ್ಪಷ್ಟವಾಗಬೇಕು. ಪ್ರತಿಯೊಬ್ಬ ರೈತರ ಮನಸ್ಸಿನಲ್ಲಿ ಉಗ್ರ ಭಾವ ಮತ್ತು ನಿರ್ದಯ ಭಾವನೆ ಹುಟ್ಟಿಕೊಳ್ಳುವ ಮೊದಲು ಅವರಿಗೆ ನ್ಯಾಯ ಒದಗಿಸಬೇಕು ಎಂದಿದ್ದಾರೆ. ಇನ್ನು ಆಡಳಿತ ಪಕ್ಷದ ಸಂಸದ ವರುಣ್ ಗಾಂಧಿ ಬಹುಶಃ ಈ ಘಟನೆಯ ಬಗ್ಗೆ ಧ್ವನಿ ಎತ್ತಿದ ಏಕೈಕ ಬಿಜೆಪಿ ನಾಯಕ.

ಲಖೀಂಪುರ್ ಖೇರಿಯ 45 ಸೆಕೆಂಡುಗಳ ವೀಡಿಯೋದಲ್ಲಿ, ಕಪ್ಪು ಬಾವುಟಗಳನ್ನು ಹೊತ್ತ ರೈತರು ರಸ್ತೆಯಲ್ಲಿ ದಾಗುತ್ತಿರುವುದನ್ನು ನೋಡಬಹುದಾಗಿದೆ. ಅದೇ ಸಮಯದಲ್ಲಿ ಥಾರ್ ಕಾರು ಹೊರಟು, ಅವರ ಮೇಲೆ ವೇಗವಾಗಿ ಸಾಗಿದೆ. ದಾಳಿ ಮಾಡುವ ವಾಹನದ ಜೊತೆಗೆ, ಬೆಂಗಾವಲಿನಲ್ಲಿದ್ದ ಇನ್ನೂ ಎರಡು ವಾಹನಗಳು ವೇಗವಾಗಿ ಹೋಗಿವೆ.

ವರುಣ್ ಗಾಂಧಿ ಬುಧವಾರ ಮಾಡಿದ ಟ್ವೀಟ್‌ನಲ್ಲಿ , 'ಲಖೀಂಪುರ ಖೇರಿಯಲ್ಲಿ ಉದ್ದೇಶಪೂರ್ವಕವಾಗಿ ರೈತರ ಮೇಲೆ ವೇಗವಾಗಿ ಸಾಗಿದ ವಾಹನದ ವಿಡಿಯೋ ನೋಡುಗರನ್ನು ಬೆಚ್ಚಿ ಬೀಳುವಂತೆ ಮಾಡಿತ್ತು. ಈ ಬಗ್ಗೆ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!