
ಶ್ರೀನಗರ(ಆ.04): ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಾಂವಿಧಾನಿಕ 370ನೇ ವಿಧಿ ರದ್ದತಿಗೆ ಬುಧವಾರ 1 ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ನೂತನ ಕೇಂದ್ರಾಡಳಿತ ಪ್ರದೇಶಗಳಾಗಿ ರೂಪುಗೊಂಡಿರುವ ಜಮ್ಮು-ಕಾಶ್ಮೀರ ಹಾಗೂ ಲಡಾಖ್ನಲ್ಲಿ ಭಾರೀ ಬಿಗಿ ಬಂದೋಬಸ್್ತ ಆಯೋಜಿಸಲಾಗಿದೆ.
ಜಮ್ಮ ಮತ್ತು ಕಾಶ್ಮೀರದಲ್ಲಿ ಕರ್ಫ್ಯೂ; 370 ರದ್ದಾದ ಬಳಿಕ ಇದೇ ಮೊದಲು!
ಜೊತೆಗೆ ಭದ್ರತಾ ಕ್ರಮಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಸೇನಾಧಿಕಾರಿಗಳ ಜೊತೆ ಸೋಮವಾರ ಮಹತ್ವದ ಸಭೆ ನಡೆದಿದೆ. ಚಿನಾರ್ ಕಾಫ್ಸ್ರ್ ಲೆಫ್ಟಿನೆಂಟ್ ಜನರಲ್ ರಾಜು ಹಾಗೂ ಜಮ್ಮು-ಕಾಶ್ಮೀರ ಡಿಜಿಪಿ ನೇತೃತ್ವದಲ್ಲಿ ಮಹತ್ವದ ಸಭೆಯಲ್ಲಿ ಹಿರಿಯ ಅಧಿಕಾರಿಗಳು, ಗುಪ್ತಚರ ಸಂಸ್ಥೆ ಹಾಗೂ ಭದ್ರತಾ ಪಡೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ನಾಗರಿಕರನ್ನು ಗುರಿಯಾಗಿಸಿ ದಾಳಿ ಮಾಡಿಲ್ಲ; ಆರೋಪಗಳಿಗೆ CRPF ಪ್ರತಿಕ್ರಿಯೆ!
ಕೊರೋನಾ ಆರ್ಭಟದ ನಡುವೆಯೇ ಏನೆಲ್ಲಾ ಭದ್ರತಾ ಕ್ರಮ ಕೈಗೊಳ್ಳಬಹುದು ಎಂಬುದರ ಕುರಿತಾಗಿ ಚರ್ಚಿಸಲಾಯಿತು ಎಂಬುದನ್ನು ಹೊರತುಪಡಿಸಿ, ಉಳಿದ ಯಾವುದೇ ಮಾಹಿತಿ ಬಹಿರಂಗಕ್ಕೆ ಅಧಿಕಾರಿಗಳು ನಿರಾಕರಿಸಿದ್ದಾರೆ. ಕಳೆದ ವರ್ಷದ ಆಗಸ್ಟ್ 5ರಂದು ಜಮ್ಮು-ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ರದ್ದುಗೊಳಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ