
ನವದೆಹಲಿ/ ಅಹಮದಾಬಾದ್ (ಜೂನ್ 12, 2023): ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ‘ಬಿಪೊರ್ಜೊಯ್’ ಚಂಡಮಾರುತ ಗುಜರಾತ್ನ ಕಛ್ ಹಗೂ ಪಾಕಿಸ್ತಾನದ ಕರಾಚಿ ನಡುವೆ ಜೂನ್ 15ರ ವೇಳೆಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ಹೇಳಿದೆ. ಇದೇ ವೇಳೆ ಬಿಪೊರ್ಜೊಯ್ ಅತಿ ತೀವ್ರ ಸ್ವರೂಪದ ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಎಂದಿರುವ ಹವಾಮಾನ ಇಲಾಖೆ ಸೌರಾಷ್ಟ್ರ ಹಾಗೂ ಕಛ್ ಕರಾವಳಿಯಲ್ಲಿ ಕಟ್ಟೆಚ್ಚರ ಸಾರಿದೆ.
ಬಂಗಾಳಿ ಭಾಷೆಯಲ್ಲಿ ಚಂಡಮಾರುತಕ್ಕೆ ‘ಬಿಪೊರ್ಜೊಯ್’ (ವಿಪತ್ತು) ಎಂದು ಹೆಸರಿಡಲಾಗಿದೆ. ಭಾನುವಾರ ಅದು ಗುಜರಾತ್ನ ಪೋರಬಂದರ್ನಿಂದ 480 ಕಿ.ಮೀ. ದೂರದ ನೈಋತ್ಯ ಭಾಗದಲ್ಲಿ ಕೇಂದ್ರೀಕೃತವಾಗಿತ್ತು. ಇನ್ನು ಅದು ಉತ್ತರ ಭಾಗದತ್ತ ಚಲಿಸಲಿದ್ದು, ಜೂನ್ 15ರ ವೇಳೆಗೆ ಸೌರಾಷ್ಟ್ರ ಹಾಗೂ ಕಛ್ ಮತ್ತು ಪಾಕಿಸ್ತಾನದ ಕರಾಚಿ ಕರಾವಳಿಗಳ ಮಧ್ಯ ಗಂಟೆಗೆ 125ರಿಂದ 150 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಅಪ್ಪಳಿಸಲಿದೆ. ನಿರ್ದಿಷ್ಟ ಸ್ಥಳವು ಅದು ಸಮೀಪಕ್ಕೆ ಬಂದಾಗ ಗೊತ್ತಾಗುತ್ತದೆ ಎಂದು ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಡಿ.ಎಸ್.ಪೈ ಹೇಳಿದ್ದಾರೆ.
ಇದನ್ನು ಓದಿ: ಮೋಖಾ ಚಂಡಮಾರುತಕ್ಕೆ ಮ್ಯಾನ್ಮಾರ್ ತತ್ತರ: 80 ಕ್ಕೂ ಹೆಚ್ಚು ಸಾವು, ನೂರಾರು ಮಂದಿ ನಾಪತ್ತೆ
ಭಾನುವಾರದಿಂದ 3 ದಿನ ಅದು ಗಂಟೆಗೆ 40 ರಿಂದ 70 ಕಿ.ಮೀ. ವೇಗದ ಬಿರುಗಾಳಿ ಎಬ್ಬಿಸಲಿದ್ದು, ಗುಜರಾತ್ ಕರಾವಳಿ ಪ್ರಕ್ಷುಬ್ಧಗೊಂಡಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ. ಜೂನ್ 6 ರಂದೇ ಚಂಡಮಾರುತ ಸೃಷ್ಟಿಯಾಗಿದ್ದು, ನಿಖರವಾಗಿ ಒಂದೇ ದಿಕ್ಕಿನತ್ತ ಸಾಗದೆ ಈ ಚಂಡಮಾರುತ ಸಾಕಷ್ಟು ಗೊಂದಲ ಮೂಡಿಸಿದೆ.
ಇದನ್ನೂ ಓದಿ: ಬೆಂಗಳೂರು ಜನತೆಯನ್ನು ನಡುಗಿಸುತ್ತಿರುವ Cyclone Mandous ಹೆಸರು ಬಂದಿದ್ದೇಗೆ..? ಅರ್ಥ ಏನು ನೋಡಿ..
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ