
ನವದೆಹಲಿ(ಮೇ.24): ಬಂಗಾಳ ಕೊಲ್ಲಿಯಲ್ಲಿ ಈ ವರ್ಷದ ಮುಂಗಾರು ಪೂರ್ವ ಅವಧಿಯ ಮೊದಲ ಚಂಡಮಾರುತ ರೂಪುಗೊಳ್ಳುತ್ತಿದ್ದು, ಇದೇ ಭಾನುವಾರ ಪಶ್ಚಿಮ ಬಂಗಾಳ ಹಾಗೂ ಪಕ್ಕದ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಈ ಚಂಡಮಾರುತಕ್ಕೆ ರೆಮಲ್ ಎಂದು ಹೆಸರಿಡಲಾಗಿದೆ.
‘ಶುಕ್ರವಾರದ ಬೆಳಗಿನ ಹೊತ್ತಿಗೆ ರೆಮಲ್ ಚಂಡಮಾರುತ ಸ್ಪಷ್ಟ ರೂಪ ಪಡೆಯಲಿದೆ. ನಂತರ ಇದು ಶನಿವಾರ ತೀವ್ರ ಸ್ವರೂಪ ಪಡೆದು, ಬಾಂಗ್ಲಾದೇಶ ಹಾಗೂ ಪಶ್ಚಿಮ ಬಂಗಾಳದ ಕರಾವಳಿಗೆ ಭಾನುವಾರ ಸಂಜೆಯ ಹೊತ್ತಿಗೆ ಭಾರಿ ಪ್ರಮಾಣದಲ್ಲಿ ಅಪ್ಪಳಿಸಲಿದೆ’ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.
ಕರ್ನಾಟಕಕ್ಕೆ 5 ದಿನ ಚಂಡಮಾರುತ ಭೀತಿ: ರಾಜ್ಯದ 23 ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಮಳೆ ಸಾಧ್ಯತೆ
ರೆಮಲ್ ಚಂಡಮಾರುತ ಗಂಟೆಗೆ 102 ಕಿ.ಮೀ. ವೇಗದಲ್ಲಿ ಅಪ್ಪಳಿಸಲಿದ್ದು, ಮೇ 26 ಹಾಗೂ 27ರಂದು ಪಶ್ಚಿಮ ಬಂಗಾಳ, ಒಡಿಶಾ, ಮಿಜೋರಂ, ತ್ರಿಪುರ ಹಾಗೂ ದಕ್ಷಿಣ ಮಣಿಪುರದ ಜಿಲ್ಲೆಗಳಲ್ಲಿ ಅತಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಸಲಿದೆ. ಮೇ 27ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಹೆಚ್ಚುತ್ತಿರುವ ಇಂಗಾಲದ ಡೈ ಆಕ್ಸೈಡ್ ಹೊರಸೂಸುವಿಕೆಯಿಂದ ಸಮುದ್ರದ ನೀರಿನ ಉಷ್ಣತೆ ವರ್ಷದಿಂದ ವರ್ಷಕ್ಕೆ ಏರುತ್ತಿದೆ. ಇದು ಚಂಡಮಾರುತಗಳು ರೂಪುಗೊಳ್ಳಲು ಕಾರಣವಾಗಿದ್ದು, ಕಳೆದ 30 ವರ್ಷಗಳಲ್ಲಿ ಅತಿಹೆಚ್ಚು ಚಂಡಮಾರುತಗಳು ಸೃಷ್ಟಿಯಾಗಿವೆ ಎಂದು ಹವಾಮಾನ ಇಲಾಖೆ ವಿಜ್ಞಾನಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ