
ಲಖನೌ (ಜು.11): ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲೇ ಕೆಲ ಜನರು ದಲಿತ ಯುವಕನ ಖಾಸಗಿ ಅಂಗಾಂಗಗಳಿಗೆ ಮೊಣಕೈನಿಂದ ಗುದ್ದಿ, ಎಳೆದಾಡಿ, ಒದ್ದು ಮತ್ತು ಬಡಿಗೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಈ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಇತರ ತಪ್ಪಿತಸ್ಥರ ಬಂಧನಕ್ಕಾಗಿ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಯ್ಫ್ರೆಂಡ್ ಕೆಲಸದಿಂದ ತೆಗೆದ ಕಂಪನಿಗೆ ಬೆಂಕಿ ಇಟ್ಟ ಗರ್ಲ್ಫ್ರೆಂಡ್!
ಮತ್ತೊಂದು ವಿಡಿಯೋದಲ್ಲಿ ಹಾಡಹಗಲೇ ಜನರ ಸಮ್ಮುಖದಲ್ಲಿ ವ್ಯಕ್ತಿಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ, ಅವರ ಪ್ಯಾಂಟ್ ಬಿಚ್ಚಿ ಖಾಸಗಿ ಭಾಗಗಳಿಗೆ ಮರದ ಕೋಲಿನಿಂದ ಹಲ್ಲೆ ನಡೆಸುವ ಅಮಾನವೀಯ ವಿಡಿಯೋ ಸಹ ಹರಿದಾಡುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ