ರೈತರ ಪ್ರತಿಭಟನೆ ಶಮನಕ್ಕೆ ಸುಪ್ರೀಂ ಕೋರ್ಟ್ ಪ್ರವೇಶ?

Published : Dec 17, 2020, 11:46 AM IST
ರೈತರ ಪ್ರತಿಭಟನೆ ಶಮನಕ್ಕೆ ಸುಪ್ರೀಂ ಕೋರ್ಟ್ ಪ್ರವೇಶ?

ಸಾರಾಂಶ

ರೈತರ ಪ್ರತಿಭಟನೆ ಶಮನಕ್ಕೆ ಸುಪ್ರೀಂರ್ಟ್ ಪ್ರವೇಶ?| ಸರ್ಕಾರ, ರೈತ ಸಂಘಗಳ ಪ್ರತಿನಿಧಿಗಳ ಸಮಿತಿ ರಚನೆ ಸಾಧ್ಯತೆ

ನವದೆಹಲಿ(ಡಿ.17): ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಹೊರವಲಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವುದರಿಂದ ಉಂಟಾಗಿರುವ ಬಿಕ್ಕಟ್ಟನ್ನು ಶಮನಗೊಳಿಸಲು ಸುಪ್ರೀಂಕೋರ್ಟ್‌ ಮಧ್ಯಪ್ರವೇಶ ಮಾಡುವ ಸಾಧ್ಯತೆಯಿದ್ದು, ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ರೈತರ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯೊಂದನ್ನು ನೇಮಕ ಮಾಡಲು ಮುಂದಾಗಿದೆ.

ರೈತರ ಪ್ರತಿಭಟನೆಯಿಂದ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಹಾಗೂ ಕೊರೋನಾ ಕೂಡ ಜಾಸ್ತಿಯಾಗಬಹುದು ಎಂದು ಆಕ್ಷೇಪಿಸಿ ಸುಪ್ರೀಂಕೋರ್ಟ್‌ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳ ವಿಚಾರಣೆಯನ್ನು ಬುಧವಾರ ವಿಡಿಯೋ ಕಾನ್ಫರೆನ್ಸ್‌ನಲ್ಲಿ ನಡೆಸಿದ ನ್ಯಾಯಪೀಠ, ‘ನಿಮ್ಮ ಮಾತುಕತೆಯಿಂದ ಯಾವುದೇ ಪ್ರಯೋಜನವಾಗಿಲ್ಲ. ಅದು ಖಂಡಿತ ವಿಫಲವಾಗುತ್ತದೆ. ಈಗಲೂ ನೀವು ಮಾತುಕತೆಗೆ ಸಿದ್ಧರಿದ್ದೇವೆ ಎಂದೇ ಹೇಳುತ್ತಿದ್ದೀರಿ’ ಎಂದು ಕೇಂದ್ರ ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಬಳಿ ಆಕ್ಷೇಪ ವ್ಯಕ್ತಪಡಿಸಿತು. ಅಲ್ಲದೆ, ಇದು ಸದ್ಯದಲ್ಲೇ ರಾಷ್ಟ್ರೀಯ ವಿವಾದವಾಗಬಹುದು. ಹೀಗಾಗಿ ಬಿಕ್ಕಟ್ಟು ಶಮನಕ್ಕೆ ದೇಶದ ವಿವಿಧೆಡೆಗಳಿಂದ ರೈತರ ಪ್ರತಿನಿಧಿಗಳು ಹಾಗೂ ಸರ್ಕಾರದ ಪ್ರತಿನಿಧಿಗಳನ್ನೊಳಗೊಂಡ ಸಮಿತಿ ರಚಿಸೋಣ. ಅದರಲ್ಲಿ ಯಾರಾರ‍ಯರಿರಬೇಕು ಎಂಬ ಪಟ್ಟಿಕೊಡಿ ಎಂದು ಸೂಚಿಸಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

‘ನಾವು ಮಾತುಕತೆಗೆ ಸಿದ್ಧರಿದ್ದೇವೆ. ಆದರೆ, ರೈತ ಸಂಘಟನೆಗಳ ಪ್ರಮುಖರು ಕಾಯ್ದೆ ರದ್ದುಪಡಿಸದಿದ್ದರೆ ನಾವು ಮಾತುಕತೆಯನ್ನೇ ನಡೆಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ’ ಎಂದು ತುಷಾರ್‌ ಮೆಹ್ತಾ ಇದಕ್ಕೂ ಮುನ್ನ ಅಸಹಾಯಕತೆ ವ್ಯಕ್ತಪಡಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋ ವಿಮಾನ ರದ್ದತಿ ಕೊಂಚ ಸರಿ ದಾರಿಗೆ
ಹಿಂದಿ ಹೇರಿಕೆ ಬಗ್ಗೆ ನ್ಯಾ। ನಾಗರತ್ನ ಬೇಸರ