
ಮುಂಬೈ(ಮೇ.27): ಕೋವಿಡ್ ಹೊಡೆತಕ್ಕೆ ಭಯಾನಕವಾಗಿ ತತ್ತರಿಸುವ ಮುಂಬೈನ ಆಸ್ಪತ್ರೆಗಳು ಶವಾಗಾರಗಳಾಗಿ ಕಾಣುತ್ತಿದ್ದು, ಇಲ್ಲಿನ ಕಿಂಗ್ ಎಡ್ವರ್ಡ್ ಸ್ಮರಣಾರ್ಥ ಆಸ್ಪತ್ರೆಯ ಕಾರಿಡಾರ್ನಲ್ಲಿ ನೂರಾರು ಸ್ಟ್ರೆಚರ್ಗಳಲ್ಲಿ ಶವಗಳನ್ನು ಇರಿಸಲಾಗಿದೆ.
ಮುಂಬೈನ ಶಾಕಿಂಗ್ ವಿಡಿಯೋ, ಕೊರೋನಾ ಸೋಂಕಿತರ ಪಕ್ಕದಲ್ಲೇ ಶವಗಳ ರಾಶಿ!
ಬಿಜೆಪಿ ಶಾಸಕ ನಿತೀಶ್ ರಾಣೆ ಈ ಬಗ್ಗೆ ಫೋಟೋ ಟ್ವೀಟ್ ಮಾಡಿದ್ದು, ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆಗೆ ಕಾರಣವಾಗಿದೆ. ಆದರೆ ಇದು ಸಾರ್ವಜನಿಕ ಬಳಕೆಯ ಕಾರಿಡಾರ್ ಹೌದೋ ಅಲ್ಲವೋ ಎನ್ನುವುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ.
ಏತನ್ಮಧ್ಯೆ ಕೋವಿಡ್ ಚಿಕಿತ್ಸೆಯಲ್ಲಿ ತೊಡಗಿದ್ದ ಶುಶ್ರೂಷಕ ಮೃತ ಪಟ್ಟಿದ್ದು, ಸೋಂಕಿನ ಲಕ್ಷಣ ಕಾಣಿಸಿಕೊಂಡರೂ ಅವರಿಗೆ ರಜೆ ನೀಡಲಿಲ್ಲ. ಪರೀಕ್ಷೆಯೂ ನಡೆಸಲಿಲ್ಲ ಎಂದು ಆರೋಪಿಸಿ ಆಸ್ಪತ್ರೆಯ ಸಿಬ್ಬಂದಿ ಪ್ರತಿಭಟನೆಗೆ ಇಳಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ