ಇಡುಕ್ಕಿ ಗುಡ್ಡ ಕುಸಿತ: ಮೃತರ ಸಂಖ್ಯೆ 26ಕ್ಕೇರಿಕೆ!

Published : Aug 09, 2020, 12:39 PM ISTUpdated : Aug 09, 2020, 12:41 PM IST
ಇಡುಕ್ಕಿ ಗುಡ್ಡ ಕುಸಿತ: ಮೃತರ ಸಂಖ್ಯೆ 26ಕ್ಕೇರಿಕೆ!

ಸಾರಾಂಶ

ಇಡುಕ್ಕಿ ಗುಡ್ಡ ಕುಸಿತ: ಮೃತರ ಸಂಖ್ಯೆ 26ಕ್ಕೇರಿಕೆ| 5 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌| ಶನಿವಾರ 12 ಮಂದಿಯ ಮೃತದೇಹ ಪತ್ತೆ| 5 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

ಇಡುಕ್ಕಿ(ಆ.09): ಇಲ್ಲಿನ ಪೆಟ್ಟಿಮುಡಿಯ ರಾಜಮಲೆಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ಮತ್ತೆ 12 ಮಂದಿಯ ಮೃತದೇಹ ಪತ್ತೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. 50ಕ್ಕೂ ಹೆಚ್ಚು ಮಂದಿ ಕಾಣೆಯಾಗಿರುವ ಶಂಕೆ ಇದ್ದು, ಎಷ್ಟುಮಂದಿ ನಾಪತ್ತೆಯಾಗಿದ್ದಾರೆ ಎನ್ನುವ ಸ್ಪಷ್ಟಸಂಖ್ಯೆ ಇನ್ನೂ ಗೊತ್ತಾಗಿಲ್ಲ. 2 ಕೇಂದ್ರ ವಿಪತ್ತು ನಿರ್ವಹಣಾ ಪಡೆ ಹಾಗೂ ರಾಜ್ಯ ಅಗ್ನಿ ಶ್ಯಾಮಕ ಪಡೆ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಿವೆ. ಭಾರೀ ಮಳೆ ರಕ್ಷಣಾ ಕಾರ್ಯಗಳಿಗೆ ಅಡ್ಡಿ ಪಡಿಸಿದೆ.

ಗುಡ್ಡ ಕುಸಿದು 14 ಸಾವು, 50 ಜನ ನಾಪತ್ತೆ: ಕಣ್ಣನ್‌ದೇವನ್‌ ಟೀ ಎಸ್ಟೇಟ್‌ನಲ್ಲಿ ದುರಂತ!

ಇದೇ ವೇಳೆ ಇಡುಕ್ಕಿ, ಕಲ್ಲಿಕೋಟೆ, ಮಲಪ್ಪುರಂ, ವಯನಾಡ್‌ ಹಾಗೂ ಕಣ್ಣೂರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ತಿರುವನಂತಪುರಂ ಹಾಗೂ ಕೊಲ್ಲಂ ಜಿಲ್ಲೆಗಳನ್ನು ಹೊರೆತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಇಡುಕ್ಕಿಯ ಮುಲ್ಲಪೆರಿಯಾರ್‌ ನದಿ ಅಪಾಯದ ಮಟ್ಟಮೀರಿ ಹರಿಯುತ್ತಿದ್ದು, ಪಂಪಾ ಜಲಾಶಯ ತುಂಬಿ ಹೋಗಿದೆ. ರಾಜ್ಯದ ಹಲವು ನದಿಗಳು ಅಪಾಯದ ಮಟ್ಟಮೀರಿದ್ದು, ಕೇಂದ್ರ ನೀರಾವರಿ ಆಯೋಗ ಅವುಗಳನ್ನು ಕೆಂಪು ಬಣ್ಣದಿಂದ ಗುರುತಿಸಿದೆ. ಮಳೆ ಜತೆ ಭಾರೀ ವೇಗದ ಗಾಳಿಯೂ ಬೀಸುತ್ತಿದ್ದು, ಮತ್ತಷ್ಟುಅಪಾಯದ ಮುನ್ಸೂಚನೆ ನೀಡಿದೆ.

ಕಲಬುರಗಿ: ಭಾರೀ ಮಳೆ, ಸೊನ್ನ ಬ್ಯಾರೇಜ್‌ನಿಂದ ಭೀಮಾ ನದಿಗೆ ನೀರು

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾಹಿತಿ ಅನ್ವಯ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 95 ಮಿಮಿ ಮಳೆ ಸುರಿದಿದ್ದು, ವಡಗರ ಹಾಗೂ ಕಲ್ಲಿಕೋಟೆಯಲ್ಲಿ ಅತೀ ಹೆಚ್ಚು ಅಂದರೆ 32.7 ಸೆಂ.ಮಿ ಮಳೆಯಾಗಿದೆ. ಮುಂದಿನ 24 ಗಂಟೆ ಮಳೆ ಪ್ರಮಾಣ ಹೆಚ್ಚುವ ಸಾಧ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
Viral Video: ಮಾಜಿ ಸಿಜೆಐ ಬಿಆರ್‌ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್‌ ಕಿಶೋರ್‌ಗೆ ಕೋರ್ಟ್‌ನಲ್ಲೇ ಚಪ್ಪಲಿಯಿಂದ ಹಲ್ಲೆ!