ವಿಮಾನ ದುರಂತಕ್ಕೆ ಬಲಿಯಾದವರ ಸಂಖ್ಯೆ 270ಕ್ಕೇರಿಕೆ

Published : Jun 15, 2025, 04:14 AM ISTUpdated : Jun 15, 2025, 04:17 AM IST
PM Modi visits the Air India AI-171 flight crash site in Ahmedabad

ಸಾರಾಂಶ

ಗುಜರಾತಿನ ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ ಏರಿಕೆಯಾಗುತ್ತಿದ್ದು, ಇದುವರೆಗೆ 270 ಜನರ ಶವಗಳು ಪತ್ತೆಯಾಗಿವೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

 ಅಹಮದಾಬಾದ್: ಗುಜರಾತಿನ ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ ಏರಿಕೆಯಾಗುತ್ತಿದ್ದು, ಇದುವರೆಗೆ 270 ಜನರ ಶವಗಳು ಪತ್ತೆಯಾಗಿವೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಈ ನಡುವೆ ಏರಿಂಡಿಯಾ ವಿಮಾನ ಪತನಕ್ಕೆ ಕಾರಣ ಪತ್ತೆ ಹಚ್ಚಲು ತನಿಖೆಗಾಗಿ ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದೆ.

ಆರಂಭದಲ್ಲಿ ವಿಮಾನದಲ್ಲಿದ್ದ 241 ಮಂದಿ ಸೇರಿದಂತೆ 265 ಜನರು ಬಲಿಯಾಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ ದುರಂತದ ಸ್ಥಳದಿಂದ ಇದುವರೆಗೂ ಒಟ್ಟು 270 ಶವಗಳು ಅಹಮದಾಬಾದ್‌ನ ಸಿವಿಲ್ ಆಸ್ಪತ್ರೆಗೆ ರವಾನೆಯಾಗಿದೆ. ಇನ್ನು ಇಲ್ಲಿನ ಅಗ್ನಿಶಾಮಕ ಮತ್ತು ತರ್ತು ಸೇವೆ (ಎಎಫ್‌ಇಎಸ್‌) ಘಟಕವು ಮೇಘನಿ ನಗರದ ಬಿ.ಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಿಂದ ಕಳೆದ 24 ಗಂಟೆಯಲ್ಲಿ ಒಂದು ಶವ ಮತ್ತು ಅರ್ಧಂಬರ್ಧ ಸುಟ್ಟ ದೇಹಗಳ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಗುರುವಾರ ನಡೆದ ಈ ಘನಘೋರ ದುರಂತದ ಪತ್ತೆಗಾಗಿ ಕೇಂದ್ರ ಸರ್ಕಾರ ಕೇಂದ್ರ ಗೃಹ ಕಾರ್ಯದರ್ಶಿ ನೇತೃತ್ವದ ಉನ್ನತ ಮಟ್ಟದ ತಜ್ಞರ ಸಮಿತಿಯೊಂದನ್ನು ರಚಿಸಿದೆ. ಈ ಸಮಿತಿಯು ವಿಮಾನ ಪತನಕ್ಕೆ ಕಾರಣ, ಮತ್ತು ಭವಿಷ್ಯದಲ್ಲಿ ಇಂತಹ ಘಟನೆ ತಡೆಗಟ್ಟಲು ಮತ್ತು ನಿರ್ವಹಿಸಲು ಸ್ಟ್ಯಾಂಡರ್ಡ್‌ ಆಪರೇಟಿಂಗ್‌ ಪ್ರೊಸೀಜರ್‌ ರೂಪಿಸುವುದರ ಮೇಲೆ ಗಮನ ಹರಿಸುತ್ತದೆ. ಇನ್ನು ಈ ಸಮಿತಿಗೆ ಮೂರು ತಿಂಗಳೊಳಗೆ ವರದಿ ಸಲ್ಲಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.

  • ಗುಜರಾತಿನ ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ ಏರಿಕೆಯಾಗುತ್ತಿದ್ದು, ಇದುವರೆಗೆ 270 ಜನರ ಶವಗಳು ಪತ್ತೆಯಾಗಿವೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
  • ಏರಿಂಡಿಯಾ ವಿಮಾನ ಪತನಕ್ಕೆ ಕಾರಣ ಪತ್ತೆ ಹಚ್ಚಲು ತನಿಖೆಗಾಗಿ ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದೆ.
  • ಆರಂಭದಲ್ಲಿ ವಿಮಾನದಲ್ಲಿದ್ದ 241 ಮಂದಿ ಸೇರಿದಂತೆ 265 ಜನರು ಬಲಿಯಾಗಿದ್ದಾರೆ ಎಂದು ಹೇಳಲಾಗಿತ್ತು

ಲಂಡನ್‌ಗೆ ಹೊರಟಿದ್ದ ಬೆಂಗ್ಳೂರಿನ ಐಟಿ ಉದ್ಯೋಗಿ ಬಲಿ

ಇಂದೋರ್: ಅಹಮದಾಬಾದ್‌ ವಿಮಾನ ಅಪಘಾತದಲ್ಲಿ ಬೆಂಗಳೂರಿನ ಐಟಿ ಉದ್ಯೋಗಿಯೊಬ್ಬರು ಕೂಡಾ ಸಾವನ್ನಪ್ಪಿದ ವಿಷಯ ಬೆಳಕಿಗೆ ಬಂದಿದೆ. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಐಟಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದ 28 ವರ್ಷದ ಹರ್‌ಪ್ರೀತ್‌ ಕೌರ್‌, ಲಂಡನ್‌ನಲ್ಲಿರುವ ತಮ್ಮ ಪತಿ ರಾಬಿ ಹೋರಾ ಭೇಟಿಗೆಂದು ಲಂಡನ್‌ ವಿಮಾನ ಹತ್ತಿದ್ದರು. ಅವರು ಮೊದಲು ಜೂ.19ಕ್ಕೆ ಲಂಡನ್‌ಗೆ ತೆರಳುವುದಕ್ಕೆ ಯೋಚಿಸಿದ್ದರು. ಆದರೆ ತಮ್ಮ ಪತಿ ಜನ್ಮದಿನ ಆಚರಿಸುವ ಕಾರಣಕ್ಕೆ ಮುಂಚಿತವಾಗಿಯೇ ಟಿಕೆಟ್‌ ಬುಕ್ ಮಾಡಿ ಹೊರಟಿದ್ದರು. ಲಂಡನ್‌ಗೆ ಹೋದ ಬಳಿಕ ದಂಪತಿ ಯುರೋಪ್ ಪ್ರವಾಸದ ಪ್ಲ್ಯಾನ್ ಕೂಡ ಮಾಡಿದ್ದರು. ಆದರೆ ದುರಂತ ಎನ್ನುವಂತೆ ಗಂಡನನ್ನು ಸೇರುವ ಮುನ್ನವೇ ಹರ್‌ಪ್ರೀತ್‌ ಏರಿಂಡಿಯಾ ವಿಮಾನ ಅವಘಡದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..