
ಮುಂಬೈ(ಏ. 29) ಇಡೀ ದೇಶವೇ ಕೊರೋನಾ ಎರಡನೇ ಅಲೆ ಆತಂಕವನ್ನು ಎದುರಿಸುತ್ತಿದ್ದು ಕೇಂದ್ರ ಸರ್ಕಾರ ಈ ವಿಷಮ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಒತ್ತಾಯ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, ಕೊರೋನಾ ನಿರ್ವಹಣೆಗೆ ದೇಶದ ಅನೇಕ ಭಾಗಗಳು ಮಹಾರಾಷ್ಟ್ರ ಮಾದರಿ ಅನುಸರಿಸಬೇಕು ಎಂದರು.
ಕೊರೋನಾದಿಂದ ಗುಣಮುಖರಾಗಿದ್ದೀರಾ.. ಯಾವಾಗ ಲಸಿಕೆ ತೆಗೆದುಕೊಳ್ಳಬೇಕು?
ಸುಪ್ರೀಂ ಕೋರ್ಟ್ ಸಹ ಈ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಿದೆ. ಇಂಥ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮೂಕ ಪ್ರೇಕ್ಷಕನಾಗಿ ಕುಳಿತುಕೊಳ್ಳಬಾರದು ಎಂದು ರಾವತ್ ಹೇಳಿದರು.
ಒಂದು ತಿಂಗಳಿನಿಂದ ಉದ್ಧವ್ ಠಾಕ್ರೆ ಒತ್ತಾಯ ಮಾಡುತ್ತಲೆ ಬಂದಿದ್ದಾರೆ. ಕೇಂದ್ರ ಸರ್ಕಾರಕ್ಕೆ ಮತ್ತು ಪ್ರಧಾನಿಗೆ ಠಾಕ್ರೆ ಪತ್ರ ಬರೆದಿದ್ದಾರೆ ಎಂಬ ವಿಚಾರವನ್ನು ತಿಳಿಸಿದರು. ದೇಶದಲ್ಲಿ ಕೊರೋನಾ ಸ್ಥಿತಿ ಗಂಭೀರ ಮಟ್ಟವನ್ನು ತಲುಪಿದೆ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳು ಟಫ್ ರೂಲ್ಸ್ ಮೊರೆ ಹೋಗಿವೆ. ಮಾಹಾರಾಷ್ಟ್ರದಲ್ಲಿ ಒಂದೇ ದಿನ 63,309 ಹೊಸ ಕೇಸ್ ದಾಖಲಾಗಿದೆ. ಆದರೆ ಮುಂಬೈನಲ್ಲಿ ಸೋಂಕಿನ ಪ್ರಮಾಣ ತಗ್ಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ