ದೇಶದಲ್ಲಿ ಕೊರೋನಾ ವೈರಸ್ ಅಬ್ಬರ ಕೊಂಚ ಇಳಿಕೆ!

Published : Aug 17, 2020, 09:11 AM ISTUpdated : Aug 17, 2020, 10:57 AM IST
ದೇಶದಲ್ಲಿ ಕೊರೋನಾ ವೈರಸ್ ಅಬ್ಬರ ಕೊಂಚ ಇಳಿಕೆ!

ಸಾರಾಂಶ

ಕೊರೋನಾ ಅಬ್ಬರ ಕೊಂಚ ಇಳಿಕೆ| ನಿನ್ನೆ 56,507 ಕೇಸ್‌, 933 ಮಂದಿ ಸಾವು| ಸೋಂಕಿತರ ಸಂಖ್ಯೆ 26 ಲಕ್ಷಕ್ಕೇರಿಕೆ

ನವದೆಹಲಿ(ಆ.17): ದೇಶದಲ್ಲಿ ಕೊರೋನಾ ವೈರಸ್‌ ಅಬ್ಬರ ಕೊಂಚ ಮಟ್ಟಿಗೆ ಇಳಿಕೆ ಆಗಿದೆ. ಕಳೆದ ಕೆಲವು ದಿನಗಳಿಂದ ಸರಾಸರಿ 60 ಸಾವಿರಕ್ಕಿಂತ ಹೆಚ್ಚಿನ ಕೊರೋನಾ ವೈರಸ್‌ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೆ, ಭಾನುವಾರ 56,507 ಪ್ರಕರಣಗಳು ದಾಖಲಾಗಿವೆ. ಮೂಲಕ ಸೋಂಕಿತರ ಸಂಖ್ಯೆ 26 ಲಕ್ಷ ಗಡಿ ದಾಟಿದ್ದು, 26,42,344ಕ್ಕೆ ಹೆಚ್ಚಳಗೊಂಡಿದೆ. ಒಂದೇ ದಿನ ಕೊರೋನಾ ವೈರಸ್‌ಗೆ 933 ಮಂದಿ ಬಲಿ ಆಗಿದ್ದು, ಸಾವಿನ ಸಂಖ್ಯೆ 50,951ಕ್ಕೆ ತಲುಪಿದೆ.

ಕೊರೋನಾಗೆ ಹಿರಿಯ ಪತ್ರಕರ್ತ ಸೋಮಶೇಖರ್‌ ಯಡವಟ್ಟಿ ಬಲಿ

5 ದಿನಗಳ ಬಳಿಕ ದೈನಂದಿನ ಕೊರೋನಾ ವೈರಸ್‌ ಪ್ರಕರಣಗಳು ಮೊದಲ ಬಾರಿ 60 ಸಾವಿರಕ್ಕಿಂತ ಕಡಿಮೆ ದಾಖಲಾಗಿವೆ. ಹೀಗಾಗಿ ಕೊರೋನಾ ವೈರಸ್‌ ಪ್ರಕರಣಗಳು ಇಳಿಕೆ ಆಗುವ ಆಶಾವಾದ ಗೋಚರಿಸಿದೆ.

ಇದೇ ವೇಳೆ 54,177 ಮಂದಿ ಕೊರೋನಾದಿಂದ ಚೇತರಿಸಿಕೊಂಡಿದ್ದು, ಗುಣಮುಖರಾದವರ ಸಂಖ್ಯೆ 19,09,541ಕ್ಕೆ ಹೆಚ್ಚಳಗೊಂಡಿದೆ. ಗುಣಮುಖರಾದವರ ಸಂಖ್ಯೆ 20 ಲಕ್ಷದತ್ತ ಸಾಗುತ್ತಿದೆ.

ಹಾಸನ: ಮೈಮೇಲೆ ದೇವರು ಬಂದಿದೆ ಎಂದು ಕೋವಿಡ್‌ ರೋಗಿಯ ಮೇಲೆ ಸೆಕ್ಯುರಿಟಿ ಗಾರ್ಡ್‌ ಹಲ್ಲೆ

ದಿನಾಂಕ ಸೋಂಕು ಸಾವು

ಆ.11 60926| 922

ಆ.12 63994| 944

ಆ.13 69612| 1010

ಆ.14 62425| 976

ಆ.15 67339| 964

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ