
ಖಮ್ಮಂ: ಚುನಾವಣೆಯಲ್ಲಿ ಕೆಲವು ಅಭ್ಯರ್ಥಿಗಳು ಹಣ, ಮದ್ಯ, ಕುಕ್ಕರ್, ಮಿಕ್ಸರ್ ಹಂಚುವುದು ಕೆಲವು ನಡೆ ಮಾಮೂಲಿ. ಅಂಥದ್ದರಲ್ಲಿ ತೆಲಂಗಾಣದ ಖಮ್ಮಂ ಜಿಲ್ಲೆಯ ಅಶ್ವರಾವ್ಪೇಟೆ ಪುರಸಭೆ ಚುನಾವಣೆ ವೇಳೆ ವಿಚಿತ್ರ ಘಟನೆಯೊಂದು ಸಂಭವಿಸಿದೆ. ಶುಕ್ರವಾರ ನಡೆದ ಮತ ಎಣಿಕೆ ವೇಳೆ ಸೋತ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು, ಸೋಲಿನಿಂದ ರೋಸಿ ಹೋಗಿ ತಾವು ಮತದಾರರಿಗೆ ನೀಡಿದ್ದ ಪ್ರೆಶರ್ ಕುಕ್ಕರ್ ಹಾಗೂ ನಗದನ್ನು ವಾಪಸ್ ಕೇಳಿ ಮತದಾರರ ಆಕ್ರೋಶಕ್ಕೆ ಕಾರಣನಾಗಿದ್ದಾರೆ.
ಅಭ್ಯರ್ಥಿ ಎಂ. ಹರಿಬಾಬು ಪ್ರಚಾರದ ಸಮಯದಲ್ಲಿ ಹಣ ಮತ್ತು ಪ್ರೆಶರ್ ಕುಕ್ಕರ್ಗಳು ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ವಿತರಿಸಿದ್ದರು. ಆದರೆ ಗೆಲ್ಲಲು ವಿಫಲವಾದ ನಂತರ, ಅವರು ತಾವು ನೀಡಿದ್ದ ವಸ್ತುಗಳನ್ನು ಹಿಂತಿರುಗಿಸುವಂತೆ ಮತದಾರರಿಗೆ ಕೇಳಲು ಪ್ರಾರಂಭಿಸಿದರು ಎಂದು ಆರೋಪಿಸಲಾಗಿದೆ.
ಇದರಿಂದ ರೋಸಿ ಹೋದ ಮತದಾರರು, ‘ನಾವೇನೂ ನಿಮಗೆ ಕುಕ್ಕರ್, ಹಣ ಕೊಡು ಎಂದಿರಲಿಲ್ಲ. ಕೊಟ್ಟ ನಂತರ ಅವನ್ನು ವಾಪಸು ಕೇಳುವುದು ಸರಿಯೇ? ಈಗ ನಮ್ಮನ್ನು ಏಕೆ ಅವಮಾನಿಸಲಾಗುತ್ತಿದೆ? ಅಭ್ಯರ್ಥಿಯು ನಮ್ಮನ್ನು ಬೆದರಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ರಸ್ತೆಯ ಮಧ್ಯೆ ಅವನ್ನು ಇರಿಸಿ ಪ್ರತಿಭಟನೆ ಆರಂಭಿಸಿದ್ದಾರೆ.
ಇದನ್ನೂ ಓದಿ: 21 ಸೆಕೆಂಡ್ ವಿಡಿಯೋ ಕೋಲಾಹಲ, ಸನ್ಯಾಸಿನಿಗೆ ಕಾಮ ಪ್ರಚೋದನೆ ಯತ್ನಿಸಿದ ವಿದ್ಯಾರ್ಥಿಗಳ ಗುಂಪು
ಆಗ ಉದ್ವಿಗ್ನತೆ ಉಂಟಾಗಿ ಪೊಲೀಸರು ಮಧ್ಯಪ್ರವೇಶಿಸಿ ಮತದಾರರನ್ನು ಸಮಾಧಾನಪಡಿಸಿ ವಾಪಸು ಕಳಿಸಿದ್ದಾರೆ. ಕೆಲವು ವ್ಯಕ್ತಿಗಳನ್ನು ತಾತ್ಕಾಲಿಕವಾಗಿ ವಶಕ್ಕೆ ಪಡೆದು ನಂತರ ಬಿಟ್ಟು ಕಳಿಸಿದ್ದಾರೆ. ಆದಾಗ್ಯೂ ಅಭ್ಯರ್ಥಿಯ ವಿರುದ್ಧ ಯಾರಾದರೂ ಆಮಿಷ ಒಡ್ಡಿದ ದೂರು ದಾಖಲಿಸಿದ್ದಾರೆಯೇ ಎಂಬುದು ದೃಢಪಡಿಸಿಲ್ಲ.
ಇದನ್ನೂ ಓದಿ: ಪತಿಗೆ ಮತ ನೀಡದವರ ಬಳಿ ₹ 3000 ವಸೂಲಿ ಮಾಡಿದಳು!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ