ಲಂಚ ಸ್ವೀಕರಿಸುವ ವೇಳೆ ದಾಳಿ: 500 ರೂ 4 ನೋಟು ನುಂಗಿದ ವಿಲೇಜ್ ಅಕೌಂಟೆಂಟ್

Published : May 28, 2025, 03:20 PM IST
Fake Rs 500 Note

ಸಾರಾಂಶ

ಡೆಹ್ರಾಡೂನ್‌ನಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ವಿಲೇಜ್ ಅಕೌಂಟೆಂಟ್ 500 ರೂಪಾಯಿಯ ನಾಲ್ಕು ನೋಟುಗಳನ್ನು ನುಂಗಿದ ಘಟನೆ ನಡೆದಿದೆ.

ಡೆಹ್ರಾಡೂನ್: ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ವಿಲೇಜ್ ಅಕೌಂಟೆಂಟ್ ಒಬ್ಬರು ತಾವು ಪಡೆದ ಲಂಚದ ಹಣದಲ್ಲಿ 500 ರೂಪಾಯಿ 4 ನೋಟುಗಳನ್ನು ನುಂಗಿದ ಘಟನೆ ನಡೆದಿದೆ. ಉತ್ತರಾಖಂಡ್‌ನ ಡೆಹ್ರಾಡೂನ್‌ನಲ್ಲಿ ಈ ಘಟನೆ ನಡೆದಿದೆ. ವಿಲೇಜ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಗುಲಾಮ್ ಹೈದರ್ ಎಂಬುವವರೇ ಹೀಗೆ ನೋಟು ನುಂಗಿ ಸುದ್ದಿಯಾದವರು. ಇವರು ಡೆಹ್ರಾಡೂನ್‌ನ ಕಲ್ಸಿ ಪ್ರದೇಶದಲ್ಲಿ ಪಟ್ವಾರಿ ಅಂದರೆ ವಿಲೇಜ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು.

ಇವರು ಸೋಮವಾರ ಸ್ಥಳೀಯ ನಿವಾಸಿಯೊಬ್ಬರಿಗೆ ನಿವಾಸದ ಪ್ರಮಾಣ ಪತ್ರ ನೀಡುವುದಕ್ಕೆ ಅವರಿಂದ 2 ಸಾವಿರ ರೂಪಾಯಿ ಲಂಚ ಕೇಳಿದ್ದಾರೆ. ಅದನ್ನು ಪಡೆಯುತ್ತಿದ್ದ ವೇಳೆ ರಾಜ್ಯ ವಿಚಕ್ಷಣ ದಳದ ಅಧಿಕಾರಿಗಳ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಕೈಯಲ್ಲಿದ್ದ 500 ರೂಪಾಯಿಯ 4 ನೋಟುಗಳನ್ನು ಗುಲಾಮ್ ಹೈದರ್ ಬಾಯಿಗೆ ಹಾಕಿ ನುಂಗಿ ಬಿಟ್ಟಿದ್ದಾರೆ ಈ ಮೂಲಕ ಸಾಕ್ಷ್ಯ ನಾಶ ಮಾಡಲು ಮುಂದಾದರು ಎಂದು ವರದಿಯಾಗಿದೆ.

ವ್ಯಕ್ತಿಯೊಬ್ಬರು ತನ್ನ ಇಬ್ಬರು ಸಂಬಂಧಿಕರಿಗೆ ನಿವಾಸ ಪ್ರಮಾಣ ಪತ್ರಗಳನ್ನು ನೀಡಲು ಪಟ್ವಾರಿ ಗುಲಾಮ್ ಹೈದರ್‌, 2 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದರು ಎಂದು ವಿಚಕ್ಷಣ ದಳದ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ವಿಲೇಜ್ ಅಕೌಂಟೆಂಟ್ ಗುಲಾಂ ಹೈದರ್ ಅವರನ್ನು ಬಲೆಗೆ ಕೆಡವಲು ಯೋಜನೆ ರೂಪಿಸಲಾಯ್ತು.

ಅದರಂತೆ ದೂರುದಾರರ ಸಂಬಂಧಿ, ಸೋಮವಾರ ಲಂಚದ ಹಣದೊಂದಿಗೆ ಕಲ್ಸಿಯ ತಹಸೀಲ್ದಾರ್ ಕಚೇರಿಗೆ ಹೋಗಿ ಹೈದರ್ ಅವರಿಗೆ ಲಂಚದ ಹಣ ನೀಡಿದ್ದಾರೆ. ಅದನ್ನು ಅವರು ಸ್ವೀಕರಿಸುವ ವೇಳೆ ವಿಜಿಲೆನ್ಸ್ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ರೆಡ್‌ಹ್ಯಾಂಡ್ ಆಗಿ ಸೆರೆ ಹಿಡಿದಿದ್ದಾರೆ. ಆದರೆ ಸಾಕ್ಷ್ಯ ನಾಶ ಮಾಡುವ ಯತ್ನದಲ್ಲಿ ಹೈದರ್ ಆ ನೋಟುಗಳನ್ನು ನುಂಗಿದ್ದಾರೆ ಎಂದು ರಾಜ್ಯ ಜಾಗೃತ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದಾದ ನಂತರ ಹೈದರ್ ಅವರನ್ನು ಬಂಧಿಸಲಾಗಿದೆ ಎಂದು ರಾಜ್ಯ ವಿಜಿಲೆನ್ಸ್‌ ಇಲಾಖೆಯ ನಿರ್ದೇಶಕ ವಿ ಮುರುಗೇಶನ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್