Food Adulteration: ಹೋಳಿ ಹಬ್ಬದ ಹೊತ್ತಲ್ಲೇ ಆಹಾರ ಕಲಬೆರಕೆ ವಿರುದ್ಧ ದೆಹಲಿಯಲ್ಲಿ ಬಿಗ್ ಆಪರೇಷನ್!

Published : Feb 26, 2026, 09:45 PM IST
Delhi and UP Crack Down on Food Adulteration Ahead of Holi 2026

ಸಾರಾಂಶ

ಹೋಳಿ ಹಬ್ಬ ಹತ್ತಿರ ಬರುತ್ತಿದ್ದಂತೆ ದೆಹಲಿಯ ಆಹಾರ ಸುರಕ್ಷತಾ ಇಲಾಖೆ ಕಲಬೆರಕೆ ತಿನಿಸುಗಳ ವಿರುದ್ಧ ದೊಡ್ಡ ಕಾರ್ಯಾಚರಣೆ ಶುರುಮಾಡಿದೆ. ಈಗಾಗಲೇ ಹಲವು ಸ್ಯಾಂಪಲ್‌ಗಳನ್ನು ಸಂಗ್ರಹಿಸಿದ್ದು, ಹಬ್ಬದ ಸಿಹಿತಿಂಡಿಗಳಾದ ಖೋವಾ, ಪನೀರ್ ಮೇಲೆ ವಿಶೇಷ ನಿಗಾ ಇಟ್ಟಿದೆ. 

ಹೋಳಿ ಹಬ್ಬ: ದೆಹಲಿಯಲ್ಲಿ ವಿಶೇಷ ಜಾರಿ ಕಾರ್ಯಾಚರಣೆ

ಹೋಳಿ ಹಬ್ಬ ಹತ್ತಿರ ಬರುತ್ತಿದ್ದಂತೆ, ದೆಹಲಿಯ ಆಹಾರ ಸುರಕ್ಷತಾ ಇಲಾಖೆ ಕಲಬೆರಕೆ ಆಹಾರ ಪದಾರ್ಥಗಳ ಮಾರಾಟಕ್ಕೆ ಬ್ರೇಕ್ ಹಾಕಲು ಭರ್ಜರಿ ಕಾರ್ಯಾಚರಣೆ ಶುರು ಮಾಡಿದೆ. ಸಾರ್ವಜನಿಕರು ಕಳಪೆ ಆಹಾರ ಸೇವಿಸುವುದನ್ನು ತಡೆಯುವುದೇ ಈ ಕಾರ್ಯಾಚರಣೆಯ ಮುಖ್ಯ ಉದ್ದೇಶ. ದೆಹಲಿ ಆರೋಗ್ಯ ಸಚಿವ ಪಂಕಜ್ ಕುಮಾರ್ ಸಿಂಗ್ ಅವರ ನೇರ ಸೂಚನೆ ಮೇರೆಗೆ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಹಬ್ಬದ ಸೀಸನ್‌ನಲ್ಲಿ ಹೆಚ್ಚಾಗುವ ಕಲಬೆರಕೆಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ.

ಈ ಕಾರ್ಯಾಚರಣೆಯ ಭಾಗವಾಗಿ, ಅಧಿಕಾರಿಗಳು ಈಗಾಗಲೇ 66 ಆಹಾರದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿದ್ದಾರೆ. ಇದರಲ್ಲಿ 54 ಸ್ಯಾಂಪಲ್‌ಗಳನ್ನು ಕಣ್ಗಾವಲಿಗಾಗಿ ಮತ್ತು 12 ಸ್ಯಾಂಪಲ್‌ಗಳನ್ನು ಕಾನೂನು ಕ್ರಮ ಜರುಗಿಸಲು ಕಳುಹಿಸಲಾಗಿದೆ. ಬೇಳೆಕಾಳು, ಧಾನ್ಯ, ಮಸಾಲೆ ಪದಾರ್ಥ, ಎಣ್ಣೆ ಮತ್ತು ಹಾಲಿನ ಉತ್ಪನ್ನಗಳ ಮೇಲೆ ಇಲಾಖೆ ಕಣ್ಣಿಟ್ಟಿದೆ. ಅದರಲ್ಲೂ ಹೋಳಿ ಹಬ್ಬದಲ್ಲಿ ಹೆಚ್ಚಾಗಿ ಬಳಸುವ ಖೋವಾ ಮತ್ತು ಪನೀರ್ ಮೇಲೆ ವಿಶೇಷ ಗಮನ ಹರಿಸಲಾಗಿದೆ.

ಕಳಪೆ ಗುಣಮಟ್ಟದ ವಸ್ತುಗಳ ಮಾರಾಟ ಜಾಲವನ್ನು ಭೇದಿಸಲು, ಅಧಿಕಾರಿಗಳು ಪ್ರಮುಖ ಖೋವಾ ಮತ್ತು ಪನೀರ್ ಮಂಡಿಗಳಲ್ಲಿ ವಿಶೇಷ ತಪಾಸಣೆ ನಡೆಸುತ್ತಿದ್ದಾರೆ. ಮಾರುಕಟ್ಟೆಗಳಷ್ಟೇ ಅಲ್ಲದೆ, ವಸತಿ ಪ್ರದೇಶಗಳಲ್ಲಿ ನಡೆಯುತ್ತಿರುವ ಉತ್ಪಾದನಾ ಘಟಕಗಳ ಮೇಲೂ ನಿಗಾ ಇಟ್ಟಿದ್ದಾರೆ. ನಗರಕ್ಕೆ ಕಲಬೆರಕೆ ಸರಕುಗಳು ಬರದಂತೆ ತಡೆಯಲು ದೆಹಲಿಯ ಗಡಿಗಳಲ್ಲಿ ಕಟ್ಟುನಿಟ್ಟಿನ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದಾರೆ. ಈ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲು ವಾರಾಂತ್ಯದಲ್ಲೂ ಆಹಾರ ಸುರಕ್ಷತಾ ತಂಡಗಳು ಕೆಲಸ ಮಾಡಲಿವೆ. ಕಲಬೆರಕೆ ಆಹಾರ ಅಥವಾ ಸಿಹಿತಿಂಡಿ ಮಾರಾಟ ಮಾಡಿದರೆ ಸಹಿಸುವುದಿಲ್ಲ ಎಂದು ಸರ್ಕಾರ ವ್ಯಾಪಾರಿಗಳಿಗೆ ಮತ್ತು ತಯಾರಕರಿಗೆ ಕಠಿಣ ಎಚ್ಚರಿಕೆ ನೀಡಿದೆ.

ಉತ್ತರ ಪ್ರದೇಶಕ್ಕೂ ವ್ಯಾಪಿಸಿದ ಕಾರ್ಯಾಚರಣೆ

ಇತ್ತ, ಉತ್ತರ ಪ್ರದೇಶದ ಕಾನ್ಪುರದಲ್ಲೂ ಆಹಾರ ಕಲಬೆರಕೆ ವಿರುದ್ಧ ದೊಡ್ಡ ದಾಳಿ ನಡೆದಿದೆ. ಉತ್ತರ ಪ್ರದೇಶ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (UPFSDA) ಹಾಗೂ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿವೆ. ಹಬ್ಬದ ಸೀಸನ್ ಸಮೀಪಿಸುತ್ತಿದ್ದಂತೆ ನಗರದಾದ್ಯಂತ ಇರುವ ಫುಡ್ ಔಟ್‌ಲೆಟ್‌ಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ 13,972 ಲೀಟರ್ ಕಲಬೆರಕೆ ಎಣ್ಣೆ ಮತ್ತು 1,350 ಕೆ.ಜಿ ಬಣ್ಣ ಮಿಶ್ರಿತ ವೇಸ್ಟ್ ಅನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇದಲ್ಲದೆ, ಕಲ್ಯಾಣ್‌ಪುರದಲ್ಲಿ ನಕಲಿ ತುಪ್ಪ ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ಮಾಡಿ, ಸುಮಾರು ₹5.45 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಎಲ್ಲಾ ಸ್ಯಾಂಪಲ್‌ಗಳನ್ನು ಹೆಚ್ಚಿನ ವಿಶ್ಲೇಷಣೆಗಾಗಿ ಲ್ಯಾಬ್‌ಗೆ ಕಳುಹಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಇದಕ್ಕೂ ಮುನ್ನ, ಲಕ್ನೋದಲ್ಲಿ ರಂಜಾನ್ ಮತ್ತು ಹೋಳಿ ಹಬ್ಬದ ಹಿನ್ನೆಲೆಯಲ್ಲಿ FSDA ಅಧಿಕಾರಿಗಳು ದಿಢೀರ್ ದಾಳಿಗಳನ್ನು ನಡೆಸಿದ್ದರು. ಈ ವೇಳೆ, 1,320 ಕೆ.ಜಿ ಖರ್ಜೂರ ಮತ್ತು 1,418 ಕೆ.ಜಿ ಬಣ್ಣ ಲೇಪಿತ ಕಚರಿ (ಒಂದು ಬಗೆಯ ತಿಂಡಿ) ವಶಪಡಿಸಿಕೊಳ್ಳಲಾಗಿತ್ತು. ಕೋಲ್ಡ್ ಸ್ಟೋರೇಜ್ ಮತ್ತು ಡೇರಿಗಳ ಮೇಲೂ ಅಧಿಕಾರಿಗಳು ಅನಿರೀಕ್ಷಿತ ತಪಾಸಣೆ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರತ ಸೇರಿದಂತೆ ವಿಶ್ವದ 40 ದೇಶಗಳಿಂದ ಚಿಕನ್‌, ಮೊಟ್ಟೆ ಆಮದು ಬ್ಯಾನ್‌ ಮಾಡಿದ ಮುಸ್ಲಿಂ ದೇಶ!
ನ್ಯಾಯಾಂಗದ ವಿರುದ್ಧ ಪಿತೂರಿ: ಎನ್‌ಸಿಇಆರ್‌ಟಿ 8ನೇ ತರಗತಿ ಪಠ್ಯಕ್ಕೆ ಸುಪ್ರೀಂ ತಡೆ! ಅಷ್ಟಕ್ಕೂ ಪಾಠದಲ್ಲೇನಿತ್ತು?