ಬಿಜೆಪಿ 55 ಸೀಟು ಗೆದ್ರೆ ಅಚ್ಚರಿಪಡಬೇಡಿ: ಮನೋಜ್ ತಿವಾರಿ!

Suvarna News   | Asianet News
Published : Feb 11, 2020, 09:17 AM ISTUpdated : Feb 11, 2020, 10:43 AM IST
ಬಿಜೆಪಿ 55 ಸೀಟು ಗೆದ್ರೆ ಅಚ್ಚರಿಪಡಬೇಡಿ: ಮನೋಜ್ ತಿವಾರಿ!

ಸಾರಾಂಶ

ದೆಹಲಿ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭ| ಆಪ್ 53 ಕ್ಷೇತ್ರಗಳಲ್ಲಿ, ಬಿಜೆಪಿ 16 ಹಾಗೂ ಕಾಂಗ್ರೆಸ್ 01 ಕ್ಷೇತ್ರಗಳಲ್ಲಿ ಮುನ್ನಡೆ|  ಬಿಜೆಪಿ 55 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ ಎಂದ ಮನೋಜ್ ತಿವಾರಿ| ಪಕ್ಷದ ಗೆಲುವಿನ ಭರವಸೆ ವ್ಯಕ್ತಪಡಿಸಿದ ದೆಹಲಿ ಬಿಜೆಪಿ ಅಧ್ಯಕ್ಷ| 48 ಕ್ಷೇತ್ರಗಳಲ್ಲಿ ಜಯಗಳಿಸುವುದು ಶತಸಿದ್ಧ ೆದ್ದ ಮನೋಜ್ ತಿವಾರಿ|

ನವದೆಹಲಿ(ಫೆ.11): ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕ್ರಿಯೆ ಆರಂಭಗೊಂಡಿದ್ದು, ಮತದಾನ ಎಣಿಕೆ ಕಾರ್ಯ ಆರಂಭವಾಗಿದೆ.

ಈಗಾಗಲೇ ಆಡಳಿತಾರೂಢ ಆಪ್ 53 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 16 ಹಾಗೂ ಕಾಂಗ್ರೆಸ್ 01 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಈ ಮಧ್ಯೆ ಬಿಜೆಪಿ 55 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿರುವ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ, ಪಕ್ಷ ದೆಹಲಿಯಲ್ಲಿ ಅಧಿಕಾರ ಪಡೆದರೆ ಅಚ್ಚರಿಪಡಬೇಡಿ ಎಂದು ಹೇಳಿದ್ದಾರೆ.

ದಿಲ್ಲಿ ಕುರ್ಚಿ ಯಾರಿಗೆ? ಬೆಳಗ್ಗೆ 11ಕ್ಕೆ ಚಿತ್ರಣ, ಆಪ್‌ಗೆ ಸತತ 3ನೇ ಸಲ ಗೆಲ್ಲುವ ವಿಶ್ವಾಸ !

ಮತ ಎಣಿಕೆ ಕಾರ್ಯ ಆರಂಭವಾಗುತ್ತಿದ್ದಂತೇ ಬಿಜೆಪಿ ಜಯದ ಭರವಸೆ ವ್ಯಕ್ತಪಡಿಸಿದ ಮನೋಜ್ ತಿವಾರಿ, 11 ಗಂಟೆಗೆ ಎಲ್ಲವೂ ಗೊತ್ತಾಗಲಿದೆ ಎಂದು ಮಾರ್ಮಿಕವಾಗಿ ನುಡಿದರು.

ನಾವು 48 ಕ್ಷೇತ್ರಗಳಲ್ಲಿ ಜಯಗಳಿಸುವುದು ಶತಸಿದ್ಧ ಎಂದಿರುವ ಮನೋಜ್ ತಿವಾರಿ, ಒಂದು ವೇಳೆ ಬಿಜೆಪಿ 55 ಕ್ಷೇತ್ರಗಳನ್ನು ಗೆದ್ದರೆ ಅಚ್ಚರಿಪಡಬೇಡಿ ಎಂದು ಹೇಳಿದರು.

ಅದಾಗ್ಯೂ ಚುನಾವಣಾ ಫಲಿತಾಂಶ ಏನೇ ಆದರೂ ಎಲ್ಲರೂ ಅದನ್ನು ಒಪ್ಪಬೇಕು ಎಂದಿರುವ ತಿವಾರಿ, ಬಿಜೆಪಿ ಕಾರ್ಯಾಲಯದಲ್ಲಿ ಗೆಲುವಿನ ಸಂಭ್ರಮಾಚರಣೆಗೆ ಭರದ ಸಿದ್ಧತೆ ನಡೆದಿದೆ ಎಂದು ಹೇಳಿದರು.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?