
ಬೆಂಗಳೂರು (ಜು. 31) ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಹತ್ತಿರ ಬಂದಿದೆ. ಆಗಸ್ಟ್ 5 ರಂದು ನಡೆಯಲಿರುವ ಶಿಲಾನ್ಯಾಸ ಕಾರ್ಯಕ್ರಮವನ್ನು ವೀಕ್ಷಿಸಲು ದೆಹಲಿ ಜನರು ಮತ್ತು ಕಾರ್ಯಕರ್ತರಿಗೆ ಬಿಜೆಪಿ ಎಲ್ ಇಡಿ ಸ್ಕ್ರೀನ್ ಅಳವಡಿಸಲಿದೆ.
ಬಿಜೆಪಿ ನಾಯಕ ಅದೇಶ್ ಕುಮಾರ್ ಗುಪ್ತಾ ಮಾಹಿತಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮವನ್ನು ಎಲ್ಲರೂ ಕಣ್ಣು ತುಂಬಿಕೊಳ್ಳಲಿದ್ದಾರೆ. ಈ ಐತಿಹಾಸಿಕ ಕ್ಷಣಗಳನ್ನು ಮತ್ತಷ್ಟು ಸ್ಮರಣೀಯ ಮಾಡಲು ಎಲ್ ಇಡಿ ಸ್ಕ್ರೀನ್ ಅಳವಡಿಕೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ರಾಮಮಂದಿರ ಭೂಮಿ ಪೂಜೆಗೆ ದಿನಾಂಕ ನಿಗದಿ ಮಾಡಿದ್ದು ಕನ್ನಡಿಗ
ದೆಹಲಿಯ ಎಲ್ಲ 70 ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಭೂಮಿ ಪೂಜೆ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಸಂಜೆ ಎಲ್ಲ ಕಾರ್ಯಕರ್ತರ ಮನೆಯಲ್ಲಿ ದೀಪ ಹಚ್ಚಿ ಆರಾಧನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿದೆ.
ರಾಮಮಂದಿರ ನಿರ್ಮಾಣ ಸಂಬಂಧ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಮಾನ ನೀಡಿದ ನಂತರ ನಿರ್ಮಾಣ ಕಾರ್ಯ ವೇಗವಾಗಿ ನಡೆದಿದೆ. ದಶಕಗಳ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ಇತ್ಯರ್ಥವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ