
ನವದೆಹಲಿ(ಏ.18): ದೇಶದಲ್ಲಿ ಕೊರೋನಾ ಆರ್ಭಟ ಮುಂದುವರಿದಿದೆ. ದೆಹಲಿಯಲ್ಲಿ ಇಂದು 25,000 ಕೊರೋನಾ ಕೇಸ್ ಪತ್ತೆಯಾಗಿದೆ. ಕೊರೋನಾ ನಿಯಂತ್ರಣಕ್ಕೆ ದೆಹಲಿ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಇದರ ನಡುವೆ ಕೊರೋನಾ ಆಕ್ಸಿಜನ್ ಅಭಾವ ಕಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಯವಿಟ್ಟು CBSE ಪರೀಕ್ಷೆ ರದ್ದು ಮಾಡಿ, ಕೇಂದ್ರಕ್ಕೆ ಕೇಜ್ರಿ ಮನವಿ.
ದೆಹಲಿ ತೀವ್ರ ಆಮ್ಲಜನಕ ಕೊರತೆಯನ್ನು ಎದುರಿಸುತ್ತಿದೆ. ದೆಹಲಿಯಲ್ಲಿ ಕೊರೋನಾ ಪ್ರಕರಣ ತ್ವರಿತಗತಿಯಲ್ಲಿ ಏರುತ್ತಿರುವುದರಿಂದ, ಸಾಮಾನ್ಯ ಪೂರೈಕೆಗಿಂತ ಹೆಚ್ಚಿನ ಆಕ್ಸಿಜನ್ ಪೂರೈಸಬೇಕು. ದೆಹಲಿಗೆ ಬರಬೇಕಿದ್ದ ಆಮ್ಮಜನಕ ಪೂರೈಕೆಯನ್ನು ಕಡಿಮೆ ಮಾಡಲಾಗಿದೆ. ಇಷ್ಟೇ ದೆಹಲಿ ಬರಬೇಕಿದ್ದ ಆಕ್ಸಿಜನ್ ಸಿಲಿಂಡರ್ನ್ನು ಇತರ ರಾಜ್ಯಕ್ಕೆ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.
ಕೇಜ್ರಿವಾಲ್ ಆರೋಪಕ್ಕೆ ಜನಸಾಮಾನ್ಯರು ತಿರುಗೇಟು ನೀಡಿದ್ದಾರೆ. ಕೊರೋನಾ ಹೆಚ್ಚಳ ನಿಯಂತ್ರಣ ಮಾಡಲು ಸಾಧ್ಯವಾಗದೆ ಇದೀಗ ಕೇಂದ್ರವನ್ನು ದೂರುತ್ತಿರುವುದು ಎಷ್ಟು ಸರಿ ಎಂದಿದ್ದಾರೆ. ಕೇಂದ್ರದ ಹಣ, ಬೆಡ್, ಯೋಜನೆ ಬಳಸಿಕೊಳ್ಳುತ್ತೀರಿ. ದೊಡ್ಡ ಜಾಹೀರಾತು ನೀಡಿ ಕ್ರೆಡಿಟ್ ತೆಗೆದುಕೊಳ್ಳುತ್ತೀರಿ. ಇದು ಎಂತಾ ರಾಜಕೀಯ, ಉಚಿತ ವಿದ್ಯುತ್ ಹಾಗೂ ನೀರಿಗಾಗಿ ಎಂತಾ ಕೀಳು ನಾಯಕನನ್ನು ಆರಿಸಿದ್ದೇವೆ ಎಂದು ಟ್ವಿಟರ್ನಲ್ಲಿ ದೆಹಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ