
ನವದೆಹಲಿ[ಡಿ.31]: 2018ರ ಜುಲೈನಲ್ಲಿ ದೆಹಲಿಯ ಬುರಾರಿಯಲ್ಲಿ ಒಂದೇ ಕುಟುಂಬದ 11 ಮಂದಿ ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆಗೆ ಸಾಕ್ಷಿಯಾಗಿದ್ದ ಮನೆ ಈಗ ಡಯಾಗ್ನೋಸ್ಟಿಕ್ ಸೆಂಟರ್ (ರೋಗ ನಿರ್ಣಯ ಕೇಂದ್ರ)ವಾಗಿ ಬದಲಾಗಿದೆ. ಭೂತ ಬಂಗಲೆ ಎಂದೇ ಕರೆಸಿಕೊಂಡಿದ್ದ ಈ ಮನೆಯನ್ನು ಮಾಲಿಕ, ಡಾ
ಮೋಹನ್ ಎನ್ನುವವರು ಖರೀದಿಸಿ, ಅದನ್ನು ಡಯಾಗ್ನೋಸ್ಟಿಕ್ ಕೇಂದ್ರವಾಗಿ ಬದಲಾಯಿಸಿದ್ದಾರೆ. ‘ನಾನು ಯಾವುದೇ ಮೂಢ ನಂಬಿಕೆಗಳನ್ನು ನಂಬುವುದಿಲ್ಲ. ಪರೀಕ್ಷೆಗೆ ಬರುವುದಕ್ಕೆ ನನ್ನ ರೋಗಿಗಳಿಗೆ ಯಾವುದೇ ತೊಂದರೆ ಇಲ್ಲ. ರಸ್ತೆ ಪಕ್ಕದಲ್ಲೇ ಇರುವ ಕಾರಣ ಮನೆಯನ್ನು ಖರೀದಿಸಿದ್ದೇನೆ ಎಂದು ಹೇಳಿದ್ದಾರೆ.
ಬುರಾರಿಯಲ್ಲಿರುವ ಮನೆಯಲ್ಲ ಒಂದೇ ಕುಟುಂಬದ 11 ಮಂದಿ ನೇಣಿಗೆ ಶರಣಾಗಿದ್ದು ಭಾರೀ ಸುದ್ದಿಯಾಗಿತ್ತು. ಬಳಿಕ ಮನೆಯಲ್ಲಿ ವಾಮಾಚಾರ ನಡೆದಿರುವ ಸಂಗತಿ ಬೆಳಕಿಗೆ ಬಂದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ