
ಬೆಂಗಳೂರು (ನ.11) ದೆಹಲಿ ಕೆಂಪು ಕೋಟೆ ಬಳಿ ನಡೆದಿರುವ ಕಾರು ಸ್ಫೋಟ ಪ್ರಕರಣ ದೇಶದ ಮೇಲೆ ನಡೆದ ದಾಳಿಯಾಗಿದೆ. ಭಯೋತ್ಪಾದಕರ ಕೃತ್ಯ ಅನ್ನೋದಕ್ಕೆ ಹಲವು ದಾಖಲೆಗಳು ಲಭ್ಯವಾಗಿದೆ. ಈ ಕಾರು ಸ್ಫೋಟ ಪ್ರಕರಣದಲ್ಲಿ 10 ಮಂದಿ ಮೃತಪಟ್ಟಿದ್ದರೆ, 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎನ್ಐಎ ಈ ಪ್ರಕರಣದ ತನಿಖೆ ನಡೆಸುತ್ತಿದೆ. ಈ ಪ್ರಕರಣ ಸಂಬಂಧ ಕೆಲ ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಸ್ಪೋಟ ಪ್ರಕರಣದಿಂದ ದೇಶದ ಎಲ್ಲಾ ನಗರ, ಪಟ್ಟಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇತ್ತ ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣ, ಮೆಟ್ರೋ ಸೇರಿದಂತೆ ಜನ ನಿಬಿಡ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹೈ ಅಲರ್ಟ್ ಘೋಷಣೆ ಬೆನ್ನಲ್ಲೇ ಬೆಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಮಹತ್ವದ ಸೂಚನೆ ನೀಡಿದೆ.
ದೆಹಲಿಯ ಕೆಂಪು ಕೋಟೆಯ ಬಳಿ ಸ್ಫೋಟ ಪ್ರಕರಣದಿಂದ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ತಪಾಸಣೆ ಪ್ರಕ್ರಿಯೆಗಳು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಏರ್ಪೋರ್ಟ್ ಆಡಳಿತ ಮಂಡಳಿಯಿಂದ ಪ್ರಯಾಣಿಕರಲ್ಲಿ ಮನವಿ ಮಾಡಲಾಗಿದೆ. ಅವಧಿಗಿಂತ ಮುಂಚಿತವಾಗಿ ಆಗಮಿಸುವಂತೆ ಮನವಿ ಮಾಡಿದೆ. ತೀವ್ರ ತಪಾಸಣೆ ಪ್ರಕ್ರಿಯೆ ನಡೆಯುತ್ತಿರುವ ಕಾರಣ ವಿಳಂಬವಾಗಲಿದೆ ಎಂದಿದೆ.
ಭದ್ರತಾ ಪರಿಶೀಲನೆ ಪೂರ್ಣಗೊಳಿಸಲು ಸಾಕಷ್ಟು ಸಮಯ ಬೇಕು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಬೇಗ ಏರ್ಪೋರ್ಟ್ಗೆ ಆಗಮಿಸಿ ತಪಾಸಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇದರಿಂದ ನಿಮ್ಮ ಪ್ರಯಾಣಕ್ಕೂ ಅನುಕೂಲವಾಗಲಿದೆ. ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮನವಿ ಮಾಡಲಾಗಿದೆ ಎಂದು ಬೆಂಳೂರು ವಿಮಾನ ನಿಲ್ದಾಣ ಆಡಳಿತ ಮಂಡಳಿ ಮನವಿ ಮಾಡಿದೆ.
ಹರ್ಯಾಣದ ಫರೀದಾಬಾದ್ನಲ್ಲಿ ನಿನ್ನೆ (ನ.10) ವೈದ್ಯರ ಮನೆಯಿಂದ 2900 ಕೆಜಿ ಸ್ಫೋಟಕ ವಶ ಪಡಿಸಿಕೊಳ್ಳಲಾಗಿತ್ತು. ಈ ಪ್ರಕರಣ ಸಂಬಂಧ ಮೂವರು ವೈದ್ಯರ ಸೋಗಿನಲ್ಲಿದ್ದ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಇಂದು ದೆಹಲಿ ಸ್ಫೋಟ ಪ್ರಕರಣ ಸಂಬಂಧ ಮತ್ತಿಬ್ಬರು ವೈದ್ಯರನ್ನು ಅರೆಸ್ಟ್ ಮಾಡಲಾಗಿದೆ. ಫರೀಬಾದ್ ಸೆಕ್ಟರ್ 56ರಲ್ಲಿ ಸ್ಫೋಟಕ ವಶಕ್ಕ ಪಡೆಯಲಾಗಿತ್ತು. ಬೆಳಗ್ಗೆ ಸ್ಫೋಟಕ ವಶಪಡಿಸಿಕೊಂಡಿದ್ದರೆ, ಸಂಜೆ ದೆಹಲಿಯಲ್ಲಿ ಫರೀದಾಬಾದ್ ಸಂಪರ್ಕದಲ್ಲಿದ್ದವರೆ ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟಿಸಿ 10 ಜನರ ಸಾವಿಗೆ ಕಾರಣರಾಗಿದ್ದಾರೆ. ಜೈಷ್ ಎ ಮೊಮ್ಮದ್ ಮಹಿಳಾ ಘಟದ ನೇತೃತ್ವದ ವಹಿಸಿದ ಫರೀದಾಬಾದ್ ವೈದ್ಯೆ ಶಾಹೀನ್ ಕೂಡ ಅರೆಸ್ಟ್ ಆಗಿದ್ದಾರೆ. ಈ ಮಹಿಳಾ ಉಗ್ರ ಕಾರಿನಿಂದ ಸ್ಫೋಟಕ ವಶಪಡಿಸಿಕೊಳ್ಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ