ಅರವಿಂದ್‌ ಕೇಜ್ರಿವಾಲ್‌ಗೆ ಜಾಮೀನಿಗೆ ತಡೆ ನೀಡಿದ ದೆಹಲಿ ಹೈಕೋರ್ಟ್‌!

Published : Jun 21, 2024, 02:44 PM IST
ಅರವಿಂದ್‌ ಕೇಜ್ರಿವಾಲ್‌ಗೆ ಜಾಮೀನಿಗೆ ತಡೆ ನೀಡಿದ ದೆಹಲಿ ಹೈಕೋರ್ಟ್‌!

ಸಾರಾಂಶ

ಜಾರಿ ನಿರ್ದೇಶನಾಲಯವು ಆದೇಶವನ್ನು ಪ್ರಶ್ನಿಸಿದ ನಂತರ ದೆಹಲಿ ಹೈಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರ ಜಾಮೀನನ್ನು ತಡೆಹಿಡಿದಿದೆ, ವಿಚಾರಣಾ ನ್ಯಾಯಾಲಯವು ತನ್ನ ವಾದವನ್ನು ಮಂಡಿಸಲು ನ್ಯಾಯಯುತ ಅವಕಾಶವನ್ನು ನೀಡಲಿಲ್ಲ ಎಂದು ಹೇಳಿದೆ.  

ನವದೆಹಲಿ (ಜೂನ್‌.21):  ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ದೊಡ್ಡ ಹಿನ್ನಡೆಯಾಗಿದ್ದು, ರದ್ದುಗೊಂಡಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವ ಕೆಳ ನ್ಯಾಯಾಲಯದ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ. ಜಾರಿ ನಿರ್ದೇಶನಾಲಯ (ಇಡಿ) ವಿಚಾರಣಾ ನ್ಯಾಯಾಲಯದ ಜಾಮೀನು ಆದೇಶವನ್ನು ಪ್ರಶ್ನೆ ಮಾಡಿತ್ತು. ನ್ಯಾಯಮೂರ್ತಿಗಳಾದ ಸುಧೀರ್ ಕುಮಾರ್ ಜೈನ್ ಮತ್ತು ರವೀಂದರ್ ದುಡೇಜಾ ಅವರ ರಜಾಕಾಲದ ಪೀಠವು ವಿಚಾರಣಾ ನ್ಯಾಯಾಲಯದ ಕಲಾಪಕ್ಕೆ ತಡೆ ನೀಡಿದೆ. "ಹೈಕೋರ್ಟ್ ಈ ವಿಷಯವನ್ನು ಕೈಗೆತ್ತಿಕೊಳ್ಳುವವರೆಗೆ ತಡೆಯಿರಿ. ದೆಹಲಿ ಹೈಕೋರ್ಟ್ ಪ್ರಕರಣವನ್ನು ವಿಚಾರಣೆ ಮಾಡುವವರೆಗೆ ವಿಚಾರಣಾ ನ್ಯಾಯಾಲಯದ (ರೂಸ್ ಅವೆನ್ಯೂ) ಮುಂದೆ ಯಾವುದೇ ಪ್ರಕ್ರಿಯೆಗಳು ಪ್ರಾರಂಭವಾಗುವುದಿಲ್ಲ' ಎಂಧು ತಿಳಿಸಿದೆ. ಹೈಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುವವರೆಗೂ ದೆಹಲಿ ಮುಖ್ಯಮಂತ್ರಿ ಈಗ ಜೈಲಿನಲ್ಲೇ ಇರುತ್ತಾರೆ.

ಗುರುವಾರ ರೋಸ್‌ ಅವೆನ್ಯೂ ನ್ಯಾಯಾಲಯದಲ್ಲಿ, ನ್ಯಾಯಮೂರ್ತಿ ನ್ಯಾಯ್ ಬಿಂದು ಅವರ ರಜಾಕಾಲದ ಪೀಠವು ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿತು ಮತ್ತು ಆದೇಶಕ್ಕೆ 48 ಗಂಟೆಗಳ ತಡೆಯಾಜ್ಞೆ ನೀಡುವ ಇಡಿ ಮನವಿಯನ್ನು ನಿರಾಕರಿಸಿತು. ದೆಹಲಿ ಹೈಕೋರ್ಟ್ ಈ ವಿಷಯವನ್ನು ವಿಚಾರಣೆಗೆ ಕೈಗೆತ್ತಿಕೊಂಡ ನಂತರ, ಇಡಿಯನ್ನು ಪ್ರತಿನಿಧಿಸುವ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್‌ವಿ ರಾಜು ಅವರು ತಮ್ಮ ಪ್ರಕರಣವನ್ನು ವಾದಿಸಲು “ಸಂಪೂರ್ಣ ಅವಕಾಶ” ನೀಡಿಲ್ಲ ಎಂದರು. ನಮ್ಮ ವಾದವನ್ನು ಅವರು ಸರಿಯಾಗಿ ಕೇಳಲಿಲ್ಲ ಎಂದಿದ್ದಾರೆ. ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಇಡಿಯ ಮನವಿಯನ್ನು ಸಂಕ್ಷಿಪ್ತವಾಗಿ ತಿಳಿಸುವಂತೆ ಹೇಳಿದ್ದರು ಎಂದಿದ್ದಾರೆ.

"ಇದಕ್ಕಿಂತ ವಿಕೃತ ಆದೇಶ ಇರಲು ಸಾಧ್ಯವಿಲ್ಲ. ಎರಡೂ ಕಡೆಯವರು ಸಲ್ಲಿಸಿದ ದಾಖಲೆಗಳನ್ನು ಪರಿಶೀಲಿಸದೆ, ನಮಗೆ ಅವಕಾಶ ನೀಡದೆ ವಿಷಯವನ್ನು ನಿರ್ಧಾರ ಮಾಡಲಾಗಿದೆ" ಎಂದು ಅವರು ಹೇಳಿದರು. ಪ್ರಕರಣವನ್ನು ವಾದಿಸಲು ಅಥವಾ ಲಿಖಿತ ಸಲ್ಲಿಕೆಗಳನ್ನು ಸಲ್ಲಿಸಲು ತನಗೆ ಸಾಕಷ್ಟು ಸಮಯವನ್ನು ನೀಡಲಾಗಿಲ್ಲ ಎಂದು ಅವರು ವಾದಿಸಿದರು ಮತ್ತು ಪ್ರಕ್ರಿಯೆಯ ಬಗ್ಗೆ ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದರು, "ರಜಾಕಾಲದ ನ್ಯಾಯಾಧೀಶರ ಮುಂದೆ ನಮ್ಮ ವಾದಗಳನ್ನು ಕಟ್‌ ಮಾಡಲಾಗಿದೆ. ನಮಗೆ ಮರುಪರಿಶೀಲನೆಯ ಆಯ್ಕೆಯನ್ನು ನೀಡಲಾಗಿಲ್ಲ. ಇದು ಯಾವುದೇ ನ್ಯಾಯಯುತವಲ್ಲ' ಎಂದು ಇಡಿ ವಾದಿಸಿತ್ತು.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 45 ಅನ್ನು ಉಲ್ಲೇಖಿಸಿದ ರಾಜು, ಜಾಮೀನು ಆದೇಶವನ್ನು ತಡೆಹಿಡಿಯಲು ಮತ್ತು ವಿಷಯವನ್ನು ಸುದೀರ್ಘ ವಿಚಾರಣೆಗೆ ಅನುಮತಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು. ಇಡಿ ವಿರುದ್ಧ ಅರವಿಂದ್ ಕೇಜ್ರಿವಾಲ್ ಪರ ಹಿರಿಯ ವಕೀಲ ವಿಕ್ರಮ್ ಚೌಧರಿ ವಾದ ಮಂಡಿಸಿದರು. "ಈ ಎಲ್ಲಾ ಸಲ್ಲಿಕೆಗಳು ಸರಿಯಾಗಿಲ್ಲ. ಅವರು ಸುದೀರ್ಘವಾಗಿ ವಾದಿಸಿದರು. ಏಳು ಗಂಟೆಗಳ ವಾದಗಳು ಸಾಕಾಗುವುದಿಲ್ಲವೇ?' ಎಂದು ಪ್ರಶ್ನೆ ಮಾಡಿದರು.

ಅಬಕಾರಿ ಕಾಯ್ದೆ ಹಗರಣದಲ್ಲಿ ಕೇಜ್ರಿವಾಲ್‌ಗೆ ಜಾಮೀನು: ನಾಳೆ ಜೈಲಿನಿಂದ ಬಿಡುಗಡೆ

ಲೋಕಸಭೆ ಚುನಾವಣೆಗೆ ಮುನ್ನ ನಾಟಕೀಯ ಬೆಳವಣಿಗೆಯಲ್ಲಿ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಮೇ ತಿಂಗಳಲ್ಲಿ, ಸಾರ್ವತ್ರಿಕ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತು. ಅವರು ಜೂನ್ 2 ರಂದು ಅವರು ಜೈಲಿಗೆ ವಾಪಸಾಗಿದ್ದರು. ದೆಹಲಿ ಹೈಕೋರ್ಟ್ ತೀರ್ಪನ್ನು ಎಎಪಿ ಸಂಸದ ಸಂಜಯ್ ಸಿಂಗ್ ಖಂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನ್ಯಾಯಾಂಗವನ್ನು ಅಣಕಿಸುತ್ತಿದೆ ಎಂದು ಆರೋಪಿಸಿದ್ದಾರೆ.

Breaking: ದೆಹಲಿ ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಜಾಮೀನು!

“ಮೋದಿ ಸರ್ಕಾರದ ಗೂಂಡಾಗಿರಿ ನೋಡಿ, ವಿಚಾರಣಾ ನ್ಯಾಯಾಲಯದ ಆದೇಶ ಇನ್ನೂ ಬಂದಿಲ್ಲ, ಆದೇಶದ ಪ್ರತಿಯೂ ಲಭ್ಯವಿಲ್ಲ, ಹಾಗಾದರೆ ಮೋದಿಯವರ ಇಡಿ ಯಾವ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲು ಹೋಗಿದೆ? ನ್ಯಾಯವನ್ನು ಏಕೆ ಲೇವಡಿ ಮಾಡುತ್ತಿದ್ದೀರಿ? ಮೋದಿಜಿ?" ಎಂದು ಅವರು ಟ್ವೀಟ್ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್