ತಾಕತ್ತಿದ್ರೆ....ಬಿಜೆಪಿಗೆ ಕೇಜ್ರಿ ಹಾಕಿದ ಸವಾಲು ನೀವು ಕೇಳಿದ್ರೆ...!

Suvarna News   | Asianet News
Published : Feb 04, 2020, 07:03 PM IST
ತಾಕತ್ತಿದ್ರೆ....ಬಿಜೆಪಿಗೆ ಕೇಜ್ರಿ ಹಾಕಿದ ಸವಾಲು ನೀವು ಕೇಳಿದ್ರೆ...!

ಸಾರಾಂಶ

ಬಿಜೆಪಿಗೆ ಬಹಿರಂಗ ಸವಾಲು ಹಾಕಿದ ದೆಹಲಿ ಸಿಎಂ| ಅರವಿಂದ್ ಕೇಜ್ರಿವಾಲ್ ಸವಾಲು ಸ್ವೀಕರಿಸುವುದೇ ಬಿಜೆಪಿ?| ತಾಕತ್ತಿದ್ದರೆ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸಿ ಎಂದ ಕೇಜ್ರಿ| ನಾಳೆ ಮಧ್ಯಾಹ್ನ 1 ಗಂಟೆವರೆಗೆ ಬಿಜೆಪಿಗೆ ಡೆಡ್’ಲೈನ್ ನೀಡಿದ ಕೇಜ್ರಿವಾಲ್| ‘ದೆಹಲಿಯ ಜನರು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ತಿಳಿದುಕೊಳ್ಳಲು ಉತ್ಸುಕರಾಗಿದ್ದಾರೆ’|

ನವದೆಹಲಿ(ಫೆ.04): ತಾಕತ್ತಿದ್ದರೆ ನಾಳೆ ಮಧ್ಯಾಹ್ನ 1 ಗಂಟೆಯೊಳಗೆ ನಿಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿ ಎಂದು ದೆಹಲಿ ಸಿಎಂ  ಅರವಿಂದ್ ಕೇಜ್ರಿವಾಲ್  ಬಿಜೆಪಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ಬಿಜೆಪಿ ನಾಳೆ ಮಧ್ಯಾಹ್ನ 1 ಗಂಟೆಯೊಳಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಲಿ ಎಂದು ಸವಾಲು ಹಾಕಿರುವ ಕೇಜ್ರಿವಾಲ್,  ಒಂದು ವೇಳೆ ಬಿಜೆಪಿ ನನ್ನ ಸವಾಲು ಸ್ವೀಕರಿಸದಿದ್ದರೆ ಮತ್ತೊಂದು ಸುದ್ದಿಗೋಷ್ಠಿ ಕರೆದು ವರ ಬಂಡವಾಳ ಬಯಲು ಮಾಡುವುದಾಗಿ ಘೋಷಿಸಿದ್ದಾರೆ.

ಮೋದಿ ನನ್ನ ಪ್ರಧಾನಿ: ಪಾಕ್ ಸಚಿವನಿಗೆ ಕೇಜ್ರಿ ತಪರಾಕಿ!

ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕೇಜ್ರಿವಾಲ್, ದೆಹಲಿಯ ಜನರು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ತಿಳಿದುಕೊಳ್ಳಲು ಉತ್ಸುಕರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ನೀವು ನಮಗೆ ಮತ ಹಾಕಿದರೆ ನಾವು ಮುಖ್ಯಮಂತ್ರಿ ಯಾರೆಂದು ನಿರ್ಧರಿಸುತ್ತೇವೆ ಎಂದು ಅಮಿತ್​ ಶಾ ಹೇಳಿದ್ದಾರೆ. ಆದರೆ ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎಂದು ಜನರೇ ನಿರ್ಧರಿಸಬೇಕು ಎಂದು ಅರವಿಂದ್ ಕೇಜ್ರಿವಾಲ್​ ವಾಗ್ದಾಳಿ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
Viral Video: ಮಾಜಿ ಸಿಜೆಐ ಬಿಆರ್‌ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್‌ ಕಿಶೋರ್‌ಗೆ ಕೋರ್ಟ್‌ನಲ್ಲೇ ಚಪ್ಪಲಿಯಿಂದ ಹಲ್ಲೆ!