ಕೇಜ್ರಿವಾಲ್ ಮದ್ಯ ಹಗರಣದ ನೇರ ಫಲಾನುಭವಿ, ಉಳಿದ ಸಚಿವರು ನೆಪ ಮಾತ್ರ: ಇ.ಡಿ.

Published : Jul 11, 2024, 10:30 AM IST
ಕೇಜ್ರಿವಾಲ್ ಮದ್ಯ ಹಗರಣದ ನೇರ ಫಲಾನುಭವಿ, ಉಳಿದ ಸಚಿವರು ನೆಪ ಮಾತ್ರ: ಇ.ಡಿ.

ಸಾರಾಂಶ

ದೆಹಲಿಯ ಆಮ್‌ಆದ್ಮಿ ಸರ್ಕಾರದ ಆಡಳಿತದಲ್ಲಿ ನಡೆದ 100 ಕೋಟಿ ರು.ಮೌಲ್ಯದ ಅಬಕಾರಿ ಲೈಸೆನ್ಸ್‌ ಹಂಚಿಕೆ ಹಗರಣದ ನೇರ ಫಲಾನುಭವಿ ಸ್ವತಃ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಎಂದು ಜಾರಿ ನಿರ್ದೇಶನಾಲಯ ಗಂಭೀರ ಆರೋಪ ಮಾಡಿದೆ.

ನವದೆಹಲಿ: ದೆಹಲಿಯ ಆಮ್‌ಆದ್ಮಿ ಸರ್ಕಾರದ ಆಡಳಿತದಲ್ಲಿ ನಡೆದ 100 ಕೋಟಿ ರು.ಮೌಲ್ಯದ ಅಬಕಾರಿ ಲೈಸೆನ್ಸ್‌ ಹಂಚಿಕೆ ಹಗರಣದ ನೇರ ಫಲಾನುಭವಿ ಸ್ವತಃ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಎಂದು ಜಾರಿ ನಿರ್ದೇಶನಾಲಯ ಗಂಭೀರ ಆರೋಪ ಮಾಡಿದೆ.

ಲೈಸೆನ್ಸ್‌ ಹಂಚಿಕೆಗಾಗಿ ಪಡೆದ 100 ಕೋಟಿ ಲಂಚದ ಹಣದಲ್ಲಿ 45 ಕೋಟಿ ರು.ಗಳನ್ನು ಗೋವಾ ವಿಧಾನಸಭಾ ಚುನಾವಣೆಗೆ ಆಪ್‌ ಬಳಸಿಕೊಂಡಿತ್ತು. ಅಲ್ಲದೆ ಈ ಹಣವನ್ನು ಬಳಸಿಕೊಂಡೇ ಗೋವಾ ವಿಧಾನಸಭಾ ಚುನಾವಣೆ ವೇಳೆ ಐಷಾರಾಮಿ ಹೋಟೆಲ್‌ನಲ್ಲಿ ಕೇಜ್ರಿವಾಲ್‌ ಉಳಿದುಕೊಂಡಿದ್ದರು. ಪ್ರಕರಣದಲ್ಲಿ ಸ್ವತಃ ಸಿಎಂ ನೇರ ಫಲಾನುಭವಿ. ಉಳಿದ ಆರೋಪಿಗಳಾದ ಸಚಿವರು ಕೇವಲ ನೆಪ ಮಾತ್ರ ಎಂದು ಹೇಳಿದೆ.

ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ!

ಪ್ರಕರಣ ಸಂಬಂಧ ದೆಹಲಿ ನ್ಯಾಯಾಲಯಕ್ಕೆ ಇ.ಡಿ. ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಈ ಮಾಹಿತಿ ಇದೆ. ಆರೋಪಪಟ್ಟಿಯಲ್ಲಿ ಕೇಜ್ರಿವಾಲ್‌ರನ್ನು ಏಳನೇ ಆರೋಪಿಯಾಗಿ ಉಲ್ಲೇಖಿಸಲಾಗಿದೆ. ದೆಹಲಿ ಮದ್ಯ ಹಗರಣದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಅಕ್ರಮದಿಂದ ಗಳಿಸಿದ ಹಣವನ್ನು ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ ಎಂದು ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಆಪ್, ಬಿಜೆಪಿ ನಮ್ಮ ಪಕ್ಷದ ವಿರುದ್ಧ ಪಿತೂರಿ ನಡೆಸುತ್ತಿದ್ದು, ನಮ್ಮ ಅಸ್ತಿತ್ವವನ್ನು ಅಳಿಸಿಹಾಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.

ಮಾ.21ರಂದು ಬಂಧಿತರಾದ ಕೇಜ್ರಿವಾಲ್ ಅವರ ಹೇಳಿಕೆಗಳನ್ನು 11 ಬಾರಿ ದಾಖಲಿಸಲಾಗಿದ್ದು, ಪ್ರತಿ ಬಾರಿ ಹಾರಿಕೆಯ ಉತ್ತರ ನೀಡಿದ್ದರು. ಅವರು ಬಳಸುತ್ತಿದ್ದ ಡಿಜಿಟಲ್ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದ್ದು ಅದನ್ನು ತೆರೆಯಲು ಅವರು ನಿರಾಕರಿಸಿದ್ದಾರೆ ಎಂದು ಇ.ಡಿ. ತಿಳಿಸಿದೆ.

ತಂದೆ-ತಾಯಿ ಆಶೀರ್ವಾದ ಪಡೆದು, ಗಾಂಧಿ ಸಮಾಧಿಗೆ ನಮನ ಸಲ್ಲಿಸಿ ತಿಹಾರ್ ಜೈಲಿಗೆ ಹಿಂದಿರುಗಿದ ಅರವಿಂದ್ ಕೇಜ್ರಿವಾಲ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ