ತನ್ನಿಂದ ಬಿಜೆಪಿಗೆ 104 ಸ್ಥಾನ ಎಂದು ಲೆ. ಗವರ್ನರ್‌ ಹೇಳಿದ್ದರು: ಕೇಜ್ರಿವಾಲ್‌

Published : Jan 18, 2023, 09:56 AM IST
ತನ್ನಿಂದ ಬಿಜೆಪಿಗೆ 104 ಸ್ಥಾನ ಎಂದು ಲೆ. ಗವರ್ನರ್‌ ಹೇಳಿದ್ದರು: ಕೇಜ್ರಿವಾಲ್‌

ಸಾರಾಂಶ

ದೆಹಲಿ ಸರ್ಕಾರ ಮತ್ತು ಲೆ.ಗವರ್ನರ್‌ ನಡುವಿನ ತಿಕ್ಕಾಟ ಮುಂದುವರೆದಿದೆ. ಗವರ್ನರ್ ವಿರುದ್ಧ ಕೇಜ್ರಿವಾಲ್ ಹೊಸ ಆರೋಪ ಮಾಡಿದ್ದಾರೆ

ನವದೆಹಲಿ: ದೆಹಲಿ ಸರ್ಕಾರ ಮತ್ತು ಲೆ.ಗವರ್ನರ್‌ ನಡುವಿನ ತಿಕ್ಕಾಟ ಮುಂದುವರೆದಿದ್ದು, ‘ದೆಹಲಿ ನಗರ ಪಾಲಿಕೆ ಚುನಾವಣೆಯಲ್ಲಿ ತನ್ನಿಂದಾಗಿ ಬಿಜೆಪಿ 104 ಸ್ಥಾನಗಳನ್ನು ಗೆದ್ದಿದೆ. ಇಲ್ಲದಿದ್ದರೆ 20 ಸ್ಥಾನಗಳನ್ನು ಗೆಲ್ಲಲಾಗುತ್ತಿರಲಿಲ್ಲ ಎಂದು ಲೆ.ಗವರ್ನರ್‌ ವಿ.ಕೆ ಸಕ್ಸೇನಾ ಅವರೇ ಸ್ವತಃ ನನ್ನ ಬಳಿ ಹೇಳಿಕೊಂಡಿದ್ದಾರೆ’ ಎಂದು ಅರವಿಂದ್‌ ಕೇಜ್ರಿವಾಲ್‌ ತಿಳಿಸಿದ್ದಾರೆ. 

ಪ್ರಾಥಮಿಕ ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಫಿನ್ಲೆಂಡ್‌ಗೆ ಕಳುಹಿಸುವ ದೆಹಲಿ ಸರ್ಕಾರದ ನಿರ್ಧಾರಕ್ಕೆ ಅಡ್ಡಿಪಡಿಸಿದ ಲೆ.ಗವರ್ನರ್‌ ವಿರುದ್ಧ ವಾಗ್ದಾಳಿ ನಡೆಸಿದ ಕೇಜ್ರಿವಾಲ್‌ ‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಬಿಜೆಪಿಗೆ 7 ಸ್ಥಾನಗಳನ್ನು ಗೆಲ್ಲಿಸಿಕೊಡುತ್ತೇನೆಂದು ಸಕ್ಸೇನಾ ಹೇಳಿದ್ದಾರೆ’ ಎಂದು ಆರೋಪಿಸಿದರು.  ‘ನಮ್ಮ ತಲೆಯ ಮೆಲೆ ಕೂರಲು ಲೆ.ಗವರ್ನರ್‌ ಯಾರು? ನಮ್ಮ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಧರಿಸಲು ಅವರು ಯಾರು? ಸಕ್ಸೇನಾ ನನ್ನ ಹೋಮ್‌ವರ್ಕ್ ಪರೀಕ್ಷಿಸಿದ ಹಾಗೆ ನನ್ನ ಶಿಕ್ಷಕರೇ ನನ್ನ ಹೋಮ್‌ವರ್ಕ್ ಪರೀಕ್ಷಿಸಿರಲಿಲ್ಲ. ಅವರು ನನ್ನ ಮುಖ್ಯೋಪಾಧ್ಯಾಯರಲ್ಲ’ ಎಂದು ವ್ಯಂಗ್ಯವಾಡಿದರು.

5 ಬಿಜೆಪಿ ಶಾಸಕರು ಸಸ್ಪೆಂಡ್‌:

ಮಕ್ಕಳ ಹಾಗೂ ಶಿಕ್ಷಕರ ತರಬೇತಿ ಕುರಿತು ಸಕ್ಸೇನಾ ಅಕ್ರಮವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆಪ್‌ ಶಾಸಕ ಅತಿಶಿ ಸಲ್ಲಿಸಿದ್ದ ನಿಲುವಳಿ ವಿರೋಧಿಸಿ ಸದನದಲ್ಲಿ ಪ್ರತಿಭಟನೆ ಮಾಡುತ್ತಿದ್ದ 5 ಬಿಜೆಪಿ ಶಾಸಕನ್ನು ಸ್ಪೀಕರ್‌ ರಾಮ್‌ ನಿವಾಸ್‌ 1 ದಿನದ ಮಟ್ಟಿಗೆ ಕಲಾಪದಿಂದ ಸಸ್ಪೆಂಡ್‌ ಮಾಡಿದ್ದಾರೆ.

ಗವರ್ನರ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ ಆಪ್ ಸರ್ಕಾರಕ್ಕೆ ಮುಖಭಂಗ, ಕೇಜ್ರಿವಾಲ್‌ಗೆ ಮಂಗಳಾರತಿ!

ಆಪ್‌ನಿರ್ಭರ ಅಥವಾ ಆತ್ಮನಿರ್ಭರ ನಡುವೆ ಸೂಕ್ತ ಆಯ್ಕೆ ಮಾಡಿ: ಅಮಿತ್‌ ಶಾ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೇಗುಲ ದುಡ್ಡು ಅನ್ಯ ಕೆಲಸಕ್ಕೆ ಬಳಸಕೂಡದು : ಸುಪ್ರೀಂ
ಉಗ್ರವಾದದ ವಿರುದ್ಧ ಜಂಟಿ ಹೋರಾಟ : ಮೋದಿ ಘೋಷಣೆ