
ನವದೆಹಲಿ(ಮಾ.16): 2008ರಲ್ಲಿ ನಡೆದ ಬಾಟ್ಲಾ ಹೌಸ್ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದಕ ಆರಿಜ್ ಖಾನ್ಗೆ ದಿಲ್ಲಿ ಹೆಚ್ಚುವರಿ ಸತ್ರ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಬಾಟ್ಲಾ ಹೌಸ್ ಎನ್ಕೌಂಟರ್ನಲ್ಲಿ ದಿಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಮೋಹನಚಂದ್ ಶರ್ಮಾ ಹುತಾತ್ಮರಾಗಿದ್ದರು. ಈ ಪ್ರಕರಣವು ‘ಅಪರೂಪದಲ್ಲೇ ಅಪರೂಪ’ ಎಂದು ಪರಿಗಣಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಂದೀಪ್ ಯಾದವ್, ‘ಆರಿಫ್ನನ್ನು ಸಾಯುವವರೆಗೆ ನೇಣಿಗೇರಿಸಿ’ ಎಂದು ಆದೇಶಿಸಿದರು.
ಇದೇ ವೇಳೆ, ಆರಿಫ್ಗೆ 11 ಲಕ್ಷ ರು. ದಂಡ ವಿಧಿಸಿದ ಕೋರ್ಟು, ಇದರಲ್ಲಿ 10 ಲಕ್ಷ ರು.ಗಳನ್ನು ಶರ್ಮಾ ಅವರ ಕುಟುಂಬಕ್ಕೆ ನೀಡಬೇಕು ಎಂದು ಸೂಚಿಸಿತು. ಕಳೆದ ಸೋಮವಾರವಷ್ಟೇ ಆರಿಫ್ನನ್ನು ದೋಷಿ ಎಂದು ಕೋರ್ಟ್ ಪರಿಗಣಿಸಿತ್ತು.
ಏನಿದು ಪ್ರಕರಣ?:
ದಿಲ್ಲಿಯಲ್ಲಿ 2008ರಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿದ 39 ಜನ ಸಾವನ್ನಪ್ಪಿದ್ದರು. ಕೃತ್ಯ ಎಸಗಿದ ಉಗ್ರರು ಜಾಮಿಯಾ ನಗರದ ಬಾಟ್ಲಾ ಹೌಸ್ ಎಂಬಲ್ಲಿ ಅವಿತಿದ್ದರು. ಇವರ ಬಂಧನಕ್ಕೆ ಪೊಲೀಸರು ಎನ್ಕೌಂಟರ್ ನಡೆಸಿದಾಗ ಉಗ್ರರ ಗುಂಡಿಗೆ ಮೋಹನಚಂದ್ ಶರ್ಮಾ ಬಲಿಯಾಗಿದ್ದರು. ಆದರೆ ಆರಿಫ್ ಆಗ ಪರಾರಿಯಾಗಿ 2018ರಲ್ಲಿ ಸಿಕ್ಕಿಬಿದ್ದಿದ್ದ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ