
ನವದೆಹಲಿ (ಜು.27) ಮತ್ತೊಬ್ಬ ಕೊರೋನಾ ವಾರಿಯರ್ ಕೊರೋನಾಕ್ಕೆ ಶರಣಾಗಿದ್ದಾರೆ. ದೆಹಲಿಯ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ರೋಗಿಗಳ ಚಿಕಿತ್ಸೆಯಲ್ಲಿ ತೊಡಿಗಿಸಿಕೊಂಡಿದ್ದ ಡಾ. ಜೋಗಿಂದರ್ ಚೌಧರಿ ಕೊನೆ ಉಸಿರು ಎಳೆದಿದ್ದಾರೆ.
ಜೂನ್ 27 ಕ್ಕೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ವೈದ್ಯ ಪ್ರತಿದಿನ ನನರಕ ಅನುಭವಿಸಿದರು. ಕೊರೋನಾ ಕಾಣಿಸಿಕೊಂಡ ನಂತರ ಅವರನ್ನು ಲೋಕ್ ನಾಯಕ ಜಯಪ್ರಕಾಶ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಧರು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆ 3.4 ಲಕ್ಷ ರೂ. ಬಿಲ್ ಮಾಡಿತ್ತು.
ತಮ್ಮ ಸಹೋದ್ಯೋಗಿಯನ್ನು ಉಳಿಸಿಕೊಳ್ಳುವ ಸಲುವಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಆಸ್ಪತ್ರೆ ವೈದ್ಯರು 2.8 ಲಕ್ಷ ರೂ. ಹಣ ಸಂಗ್ರಹಿಸಿದ್ದರು. ಜತೆಗೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೂ ಈ ಬಗ್ಗೆ ಪತ್ರ ಬರೆದಿದ್ದರು.
ಮೂರು ವಾರ ನರಕ ಅನುಭವಿಸಿ ಕೊರೋನಾಕ್ಕೆ ಬಲಿಯಾದ ಅಲಿ
ಜೋಗಿಂದರ್ ಅವರ ತಂದೆ ರೈತರಾಗಿದ್ದು ಗಂಗಾರಾಮ್ ಆಸ್ಪತ್ರೆ ಬಿಲ್ ಮನ್ನಾ ಮಾಡಬೇಕು ಎಂದು ಕೇಳಿಕೊಂಡಿದ್ದರು. ಇದಕ್ಕೆ ಗಂಗಾರಾಮ್ ಆಸ್ಪತ್ರೆ ಸಹ ಸಮ್ಮತಿಸಿತ್ತು. ಆದರೆ ವೈದ್ಯ ಮಾತ್ರ ಬದುಕಿ ಉಳಿಯಲಿಲ್ಲ.
ಮಧ್ಯಪ್ರದೇಶ ಮೂಲದ ಜೋಗಿಂದರ್ ಕಳೆದ ನವೆಂಬರ್ ನಲ್ಲಿ ಅಂಬೇಡ್ಕರ್ ಆಸ್ಪತ್ರೆ ಜಾಯಿನ್ ಆಗಿದ್ದರು. ಕಳೆದ ವಾರ ಮೃತಪಟ್ಟ ದೆಹಲಿ ನ್ಯಾಶನಲ್ ಹೆಲ್ತ್ ಮಿಶನ್ ನಲ್ಲಿ ಕೆಲಸ ಮಾಡುತ್ತಿದ್ದ ಡಾ. ಜಾವೇದ ಅಲಿ ಸಂಪರ್ಕಕ್ಕೆ ಜೋಗಿಂದರ್ ಬಂದಿದ್ದು ವೈರಸ್ ಹರಡಲು ಕಾರಣವಾಗಿತ್ತು. ದೆಹಲಿ ಸರ್ಕಾರ ಜೋಗಿಂದರ್ ಅವರ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ಘೋಷಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ