ಕೇಜ್ರಿ ಗೆಲುವಿನ ಸೀಕ್ರೆಟ್ ಫಾರ್ಮುಲಾ: ಮತ್ತೆ ಕೆಲಸ ಮಾಡಿತು PK ಪ್ಲಾನ್!

Published : Feb 12, 2020, 08:17 AM ISTUpdated : Feb 12, 2020, 09:03 AM IST
ಕೇಜ್ರಿ ಗೆಲುವಿನ ಸೀಕ್ರೆಟ್ ಫಾರ್ಮುಲಾ: ಮತ್ತೆ ಕೆಲಸ ಮಾಡಿತು PK ಪ್ಲಾನ್!

ಸಾರಾಂಶ

ಕೇಜ್ರಿ ಗೆಲ್ಲಿಸಿದ್ದು ಪ್ರಶಾಂತ್‌ ಕಿಶೋರ್‌ ಸೀಕ್ರೆಟ್‌ ಫಾರ್ಮುಲಾ!| ಕೆಲಸ ಮಾಡಿತು ಪ್ರಶಾಂತ್‌ ಕಿಶೋರ್‌ ನೀಡಿದ್ದ ಸಲಹೆ

ನವದೆಹಲಿ[ಫೆ.12]: ಪ್ರಧಾನಿ ನರೇಂದ್ರ ಮೋದಿ ಜತೆ ಸಂಘರ್ಷಕ್ಕೆ ಇಳಿದಿದ್ದ ಆಪ್‌ ನೇತಾರ ಅರವಿಂದ ಕೇಜ್ರಿವಾಲ್‌ ಇತ್ತೀಚೆಗೆ ತಣ್ಣಗಾಗಿ ಕೇವಲ ಅಭಿವೃದ್ಧಿ ವಿಷಯಗಳ ಬಗ್ಗೆ ಮಾತ್ರ ಸಾರ್ವಜನಿಕವಾಗಿ ಪ್ರಸ್ತಾಪಿಸುತ್ತಿದ್ದರು. ಇದೇ ಇವರ ಜಯಕ್ಕೆ ಕಾರಣ ಎಂದು ವಿಶ್ಲೇಷಿಸಲಾಗಿದೆ.

ಆಪ್‌ಗೆ ಚುನಾವಣಾ ರಣನೀತಿ ರೂಪಿಸಲು ಸಲಹೆ ನೀಡಿದ್ದ ಚುನಾವಣಾ ರಣನೀತಿ ನಿರೂಪಕ ಪ್ರಶಾಂತ್‌ ಕಿಶೋರ್‌, ‘ಸಂಘರ್ಷದ ರಾಜಕೀಯ ಬಿಡಿ. ಇದರ ಬದಲು ನಿಮ್ಮನ್ನು ನೀವು ಅಭಿವೃದ್ಧಿ ಮನುಷ್ಯ ಬಿಂಬಿಸಿಕೊಳ್ಳಿ’ ಎಂದಿದ್ದರು ಎಂದು ಮೂಲಗಳು ತಿಳಿಸಿವೆ.

ದೇಶ ಗೆದ್ದ ಬಿಜೆಪಿಗೆ ದಿಲ್ಲಿ ಇನ್ನೂ ಮರೀಚಿಕೆ!

ಹೀಗಾಗಿ ಕೇಜ್ರಿವಾಲ್‌ ಇತ್ತೀಚೆಗೆ ದಿಲ್ಲಿಯಲ್ಲಿ ಉಚಿತ ಬಸ್‌ ಪ್ರಯಾಣ, ಸಿಸಿಟೀವಿ ಅಳವಡಿಕೆ, ಮೊಹಲ್ಲಾ ಕ್ಲಿನಿಕ್‌, ಶಾಲಾ ಅಭಿವೃದ್ಧಿ, ಉಚಿತ ನೀರು, ವಿದ್ಯುತ್‌- ಮುಂತಾದ ಅಭಿವೃದ್ಧಿ ವಿಷಯಗಳತ್ತ ಗಮನ ಹರಿಸಿದರು. ಇದು ಜಯಕ್ಕೆ ಕಾರಣವಾಯಿತು ಎಂದು ತಿಳಿದುಬಂದಿದೆ.

2014ರಲ್ಲಿ ಸ್ವತಃ ಮೋದಿ ಅವರ ಚುನಾವಣಾ ಪ್ರಚಾರ ರಣತಂತ್ರ ರೂಪಿಸಿದ್ದ ಪ್ರಶಾಂತ್‌ ಕಿಶೋರ್‌, ಬಳಿಕದ ವರ್ಷಗಳಲ್ಲಿ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ವಿರೋಧ ಪಕ್ಷಗಳ ಜೊತೆಯಲ್ಲೇ ಜೈಜೋಡಿಸಿದ್ದಾರೆ.

ಭಾರತ ಮಾತೆಯ ಜಯ: ದೆಹಲಿ ಅಭಿವೃದ್ಧಿಗೆ ಕೇಜ್ರಿವಾಲ್ ಅಭಯ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?