
ದೆಹಲಿ(ಮೇ.02): ಕೊರೋನವೈರಸ್ ಕಾರಣ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ತಂದೆ ನಿಧನ ಹೊಂದಿದ್ದಾರೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಸತ್ಯೇಂದರ್ ಸ್ವತಃ ದೆಹಲಿ ಜನರಿಗಾಗಿ ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದಾರೆ. ದೇವರು ಅವರ ಆತ್ಮವನ್ನು ಆಶೀರ್ವದಿಸಲಿ. ಅವರ ಕುಟುಂಬದ ಜೊತೆ ನನ್ನ ಸಂತಾಪವಿದೆ ಎಂದಿದ್ದಾರೆ.
8 ದಿನದ ಮಗುವಿಗೆ ಕೊರೋನಾ ಪಾಸಿಟಿವ್: 15 ದಿನದಲ್ಲೇ ಗುಣಮುಖ
"
ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿಧನದ ಬಗ್ಗೆ ದುಃಖ ವ್ಯಕ್ತಪಡಿಸಿದರು ಮತ್ತು ಈ ಕಠಿಣ ಸಮಯದಲ್ಲಿ ಇದು ನಮ್ಮೆಲ್ಲರಿಗೂ ಬಹಳ ದುಃಖದ ಸುದ್ದಿ ಎಂದಿದ್ದಾರೆ.
ದೆಹಲಿಯಲ್ಲಿ ನನ್ನ ಆಪ್ತ ಸ್ನೇಹಿತ ಮತ್ತು ಸಹೋದ್ಯೋಗಿ ಸತ್ಯೇಂದರ್ ಜೈನ್ ತನ್ನ ತಂದೆಯನ್ನು ಕಳೆದುಕೊಂಡಿದ್ದಾರೆ. ಈ ಕಠಿಣ ಸಮಯದಲ್ಲಿ ನಮ್ಮೆಲ್ಲರಿಗೂ ಇದು ತುಂಬಾ ದುಃಖದ ಸುದ್ದಿ. ಅವರ ಆತ್ಮಕೆ ಶಾಂತಿ ಸಿಗಲಿ. ಓಂ ಶಾಂತಿ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ